ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಮೀನುಗಾರರು ಸಜ್ಜು

7 ವರ್ಷದಿಂದ ಹೊಸ ಔಟ್‌ಬೋರ್ಡ್‌ ಎಂಜಿನ್‌ ಖರೀದಿಸಿದ ಮೀನುಗಾರರಿಗೆ ಸೀಮೆಎಣ್ಣೆ ಸಿಗುತ್ತಿಲ್ಲ

Team Udayavani, Jun 21, 2020, 4:06 PM IST

ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಮೀನುಗಾರರು ಸಜ್ಜು

ಮಲ್ಪೆ: ಮಳೆಗಾಲದಲ್ಲಿ ಎರಡು ತಿಂಗಳು ಯಾಂತ್ರಿಕ ಮೀನುಗಾರಿಕೆಗೆ ನಿಷೇಧವಿರುವುದರಿಂದ ಮಂಗಳೂರು, ಉಡುಪಿ ಮತ್ತು ಉ.ಕನ್ನಡ ಜಿಲ್ಲೆಯ ಮೀನುಗಾರರು ಸಾಂಪ್ರದಾಯಿಕ ನಾಡದೋಣಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸಹಕಾರಿ ತತ್ವದಡಿ ನಡೆಯುವ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಮೀನುಗಾರರು ಸಜ್ಜಾಗುತ್ತಿದ್ದಾರೆ. ಯಾಂತ್ರಿಕೃತ ಮೀನುಗಾರಿಕೆ ಮುಗಿದ ಬೆನ್ನಲ್ಲೆ ಎರಡು ತಿಂಗಳ ಕಾಲ 10ಅಶ್ವಶಕ್ತಿ ಸಾಮರ್ಥ್ಯದ ಎಂಜಿನ್‌ ಬಳಸಿ ಮೀನುಗಾರಿಕೆ ನಡೆಸಲು ನಾಡದೋಣಿ ಮೀನುಗಾರರಿಗೆ ಅವಕಾಶವಿರುತ್ತದೆ.

ವಿವಿಧಡೆ ದಾರ ಪ್ರಕ್ರಿಯೆ:
ನಾಡದೋಣಿ ಕಡಲಿಗಿಳಿಯುವ ಮುನ್ನ ಆರಂಭಿಕವಾಗಿ ದಾರ ಪ್ರಕ್ರಿಯೆಗಳು ನಡೆಯುತ್ತಿರುವುದು ಕರಾವಳಿಯ ತೀರದ ವಿವಿಧ ಪ್ರದೇಶದಲ್ಲಿ ಕಂಡುಬರುತ್ತಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಮೀನುಗಾರಿಕೆ ಋತು ಕೊನೆಗೊಂಡ ಬಳಿಕ ಮೀನುಗಾರಿಕೆಗೆ ಬಳಸಿದ ಬಲೆಗಳನ್ನು ವಿಭಜಿಸಿ ಸಂಗ್ರಹಿಸಿಡಲಾಗುತ್ತದೆ. ಈ ಋತುವಿನಲ್ಲಿ ಮಳೆಗಾಲ ಆರಂಭಗೊಂಡ ಬಳಿಕ ಕಳೆದ ವರ್ಷ ಸಂಗ್ರಹಿಸಿಟ್ಟ ಬಲೆಗಳನ್ನು ಆಯಕಟ್ಟಿನ ಜಾಗಕ್ಕೆ ತಂದು ಸಾಮೂಹಿಕವಾಗಿ ನಿಗದಿಪಡಿಸಿದ ದಿನದಂದು ಎಲ್ಲರು ಒಟ್ಟಾಗಿ ಬಲೆಗಳನ್ನು ಪೋಣಿಸುವ ಪ್ರಕ್ರಿಯೆ ನಡೆಯುತ್ತದೆ.

ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೋಟರಿಕೃತ ಮತ್ತು ಸಾಂಪ್ರದಾಯಿಕ ದೋಣಿಗಳು 16000ಕ್ಕೂ ಅಧಿಕವಿದೆ.
ಉಡುಪಿ ಜಿಲ್ಲೆಯ ಹೆಜಮಾಡಿಯಿಂದ ಬೆಂಗ್ರೆವರೆಗೆ ಸುಮಾರು 32 ಮಾಟುಬಲೆ ಗುಂಪುಗಳಿವೆ. ಪ್ರತಿಯೊಂದು ಸುಮಾರು 30ರಿಂದ 40 ಮಂದಿ ಮೀನುಗಾರರು ಇರುತ್ತಾರೆ. ಸುಮಾರು 450 ಟ್ರಾಲ್‌ದೋಣಿಗಳು, ಹೊಳೆಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಬೀಸುಬಲೆ, ಕಂತುಬಲೆ, ಜೆಪ್ಪುಬಲೆ 350ಕ್ಕೂ ಅಧಿಕ ಇವೆ. 10-15 ಕೈರಂಪಣಿಗಳಿವೆ.

ಹೆಚ್ಚುವರಿ ಸೀಮೆಎಣ್ಣೆಗೆ ಆಗ್ರಹ:
ಸರಕಾರ ನಾಡದೋಣಿಗಳಿಗೆ ತಿಂಗಳವಾರು 300ಲೀಟರ್‌ನಂತೆ ಸೀಮೆಎಣ್ಣೆ ನೀಡುತ್ತಿದೆ. ಆದರೆ ಕಳೆದ 7 ವರ್ಷದಿಂದ ಹೊಸ ಎಂಜಿನ್‌ಗಳಿಗೆ ಮಾತ್ರ ಸೀಮೆಎಣ್ಣೆ ಬಿಡುಗಡೆಯಾಗುತ್ತಿಲ್ಲ. ಸುಮಾರು 3000ಕ್ಕೂ ಅಧಿಕ ಹೊಸ ಔಟ್‌ಬೋರ್ಡ್‌ ಎಂಜಿನನ್ನು ಖರೀದಿಸಿದ್ದ ಮೀನುಗಾರರಿಗೆ ಸೀಮೆಎಣ್ಣೆಯ ಕೊರತೆ ಕಾಡಿದೆ. ಸರಕಾರ ತತ್‌ಕ್ಷಣ ಹೆಚ್ಚುವರಿ ಸೀಮೆಎಣ್ಣೆಯನ್ನು ಬಿಡುಗಡೆಗೊಳಿಸುವಂತೆ ನಾಡದೋಣಿ ಮೀನುಗಾರರು ಆಗ್ರಹಿಸಿದ್ದಾರೆ. ಜತೆಗೆ ಔಟ್‌ಬೋರ್ಡ್‌ ಎಂಜಿನ್‌ಗೆ ನೀಡುತ್ತಿರುವ ಸಬ್ಸಿಡಿಯನ್ನು 2017ಹಿಂದಿನ ಮತ್ತು ಅನಂತರದ ಅವಧಿಯಲ್ಲಿನ ಒಟ್ಟು 461 ದೋಣಿಗಳಿಗೆ ಕೊಡಲು ಬಾಕಿ ಇವೆ. ಕೆಲವೊಂದು ವರ್ಗದ ನಾಡದೋಣಿಗಳು ವರ್ಷದ 12ತಿಂಗಳೂ ಮೀನುಗಾರಿಕೆಯಲ್ಲಿ ನಿರತವಾಗಿರುತ್ತದೆ. ಆದರೆ ಸರಕಾರ ನಾಡದೋಣಿಗಳಿಗೆ 9 ತಿಂಗಳ ಸೀಮೆಎಣ್ಣೆ ಮಾತ್ರ ನೀಡುತ್ತಿದೆ. ಕನಿಷ್ಠ 10ತಿಂಗಳ ಸೀಮೆಎಣ್ಣೆ ನೀಡಬೇಕೆಂಬ ಬೇಡಿಕೆಯೂ ಇದೆ.

ಹೊಸ ಔಟ್‌ಬೋರ್ಡ್‌ ಎಂಜಿನ್‌ಗಳಿಗೆ ಕಳೆದ 7ವರ್ಷದಿಂದ ಹೆಚ್ಚುವರಿ ಸೀಮೆ ಎಣ್ಣೆ ಸಿಗುತ್ತಿಲ್ಲ. ಮತ್ತು 2017 ಹಿಂದಿನ ಮತ್ತು ಆನಂತರದ ಅವಧಿಯ ದೋಣಿಗಳ ಸಬ್ಸಿಡಿಯನ್ನೂ ಸರಕಾರ ಬಾಕಿ ಇಟ್ಟಿವೆ. ಈ ಬಗ್ಗೆ ಮೀನುಗಾರಿಕೆ ಸಚಿವರ ಗಮನಕ್ಕೆ ತರಲಾಗಿದೆ. ವಿಶೇಷ ಅನುದಾನದಲ್ಲಿ ದೊರಕಿಸಿಕೊಡುವ ಭರವಸೆಯನ್ನು ನೀಡಿದ್ದಾರೆ.
– ಗೋಪಾಲ್‌ ಆರ್‌.ಕೆ., ಪ್ರ.ಕಾರ್ಯದರ್ಶಿ,
ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀ. ಪ್ರಾ. ವಿ.ಸಹಕಾರಿ ಸಂಘ,

ಜೂ. 22: ಸಾಮೂಹಿಕ ಪ್ರಾರ್ಥನೆ
ಜೂ. 22 ಸೋಮವಾರ ಬೆಣ್ಣೆಕುದ್ರು ಕುಲಮಹಾಸ್ತಿ ಅಮ್ಮನಿಗೆ ಗಣಹೋಮ, ವಡಭಾಂಡ ಬಲರಾಮ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಸಾದವನ್ನು ಗಂಗಾಮಾತೆಗೆ ಅರ್ಪಿಸಲಾಗುತ್ತದೆ. ನಾಡದೋಣಿ ಮೀನುಗಾರರು ಆವತ್ತಿನಿಂದ ಸಮುದ್ರದ ವಾತಾವರಣವನ್ನು ನೋಡಿಕೊಂಡು ಯಾವಾಗ ಬೇಕಾದರೂ ಕಡಲಿಗೆ ಇಳಿಯಬಹುದು.
-ಜನಾರ್ದನ ತಿಂಗಳಾಯ, ಅಧ್ಯಕ್ಷರು.
ಮಲ್ಪೆ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.