ಬೋರ್ ವೆಲ್ ಲಾರಿ ಮುಗಿಚಿ ಬಿದ್ದು ಮೂವರು ಸ್ಥಳದಲ್ಲಿಯೇ ಸಾವು: ಇಬ್ಬರ ಸ್ಥಿತಿ ಗಂಭೀರ
Team Udayavani, Jun 24, 2020, 10:14 AM IST
ಚಿಕ್ಕಬಳ್ಳಾಪುರ: ಬೋರ್ ವೆಲ್ ಪೈಪುಗಳನ್ನು ಹೇರಿಕೊಂಡು ಹೋಗುತಿದ್ದ ಲಾರಿಯೊಂದು ಅಕಸ್ಮೀಕವಾಗಿ ರಸ್ತೆ ಬದಿಗೆ ಮುಗುಚಿ ಬಿದ್ದ ಪರಿಣಾಮವಾಗಿ ಮೂರು ಮಂದಿ ಕೂಲಿ ಕಾರ್ಮಿಕರರು ಸ್ಥಳದಲ್ಲಿಯೇ ಮೃತ ಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚೇಳೂರು ಸಮೀಪದ ಹೊಸವುಡ್ಯ ಬಳಿ ಮಂಗಳವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸಮೀಪದ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆಯೆಂದು ಜಿಲ್ಲಾ ಪೊಲೀಸ್ ವರಿಷ್ಡಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮೃತರ ಪೈಕಿ ಇಬ್ಬರು ಮಧ್ಯಪ್ರದೇಶ ಹಾಗೂ ಮತ್ತೊಬ್ಬ ಛತ್ತೀಸ್ ಗಢ ನಿವಾಸಿಗಳೆಂದು ತಿಳಿದು ಬಂದಿದೆ. ಬೋರ್ ವೆಲ್ ಕೊರೆಯುವ ಲಾರಿಗೆ ಪೈಪುಗಳು ಒದಗಿಸುವ ಸಹಾಯಕ ಲಾರಿ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಲಾರಿಯೊಳಗಿನ ಕಬ್ಬಿಣದ ಪೈಪುಗಳ ಮಧ್ಯೆ ಸಿಲುಕಿಕೊಂಡ ಕೂಲಿ ಕಾರ್ಮಿಕರನ್ನು ಜೆಸಿಬಿ ಯಂತ್ರದ ಸಹಾಯದೊಂದಿಗೆ ಪೈಪುಗಳನ್ನು ತೆರವುಗೊಸಿ ಕಾರ್ಮಿಕರನ್ನು ಹೊರ ತೆಗೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ