ಐಸಿಸಿ ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ : ಆಫ್ ಸ್ಪಿನ್ನರ್ ಮಿರಾಜ್‌ ನಂ.2


Team Udayavani, May 27, 2021, 12:24 AM IST

mehedi-hasan-miraz

ದುಬಾೖ : ಬಾಂಗ್ಲಾದೇಶದ ಆಫ್ ಸ್ಪಿನ್ನರ್ ಮೆಹಿದಿ ಹಸನ್‌ ಮಿರಾಜ್‌ ನೂತನ ಐಸಿಸಿ ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ ಯಾದಿಯಲ್ಲಿ ದ್ವಿತೀಯ ಸ್ಥಾನಕ್ಕೆ ಏರಿದ್ದಾರೆ. ಇದು ಅವರ ಅತ್ಯುತ್ತಮ ರ್‍ಯಾಂಕಿಂಗ್‌ ಆಗಿದೆ. ಜತೆಗೆ ನಂ.2 ಹಾಗೂ ಇದಕ್ಕೂ ಉತ್ತಮ ರ್‍ಯಾಂಕಿಂಗ್‌ ಅಲಂಕರಿಸಿದ ಬಾಂಗ್ಲಾದ ಕೇವಲ 3ನೇ ಬೌಲರ್‌ ಆಗಿದ್ದಾರೆ.

2009ರಲ್ಲಿ ಶಕಿಬ್‌ ಅಲ್‌ ಹಸನ್‌ ನಂ.1 ಸ್ಥಾನ ಅಲಂಕರಿಸಿದ್ದರು. 2010ರಲ್ಲಿ ಅಬ್ದುರ್‌ ರಜಾಕ್‌ ದ್ವಿತೀಯ ಸ್ಥಾನಕ್ಕೆ ಏರಿದ್ದರು. ಸದ್ಯ ಶಕಿಬ್‌ ಆಲ್‌ರೌಂಡರ್‌ ಯಾದಿಯ ಅಗ್ರಸ್ಥಾನದಲ್ಲಿ ಮುಂದು ವರಿದಿದ್ದಾರೆ.

ಪ್ರಸಕ್ತ ಸಾಗುತ್ತಿರುವ ಶ್ರೀಲಂಕಾ ಎದುರಿನ ಏಕದಿನ ಸರಣಿಯ ಮೊದ ಲೆರಡು ಪಂದ್ಯಗಳಲ್ಲಿ ಮೆಹಿದಿ ಹಸನ್‌ ಮಿರಾಜ್‌ ಉತ್ತಮ ಬೌಲಿಂಗ್‌ ನಿರ್ವಹಣೆ ತೋರಿದ್ದರು. ಮೊದಲ ಪಂದ್ಯದಲ್ಲಿ 30ಕ್ಕೆ 4, ಎರಡನೇ ಪಂದ್ಯದಲ್ಲಿ 28ಕ್ಕೆ 3 ವಿಕೆಟ್‌ ಕಿತ್ತ ಸಾಧನೆ ಇವರದಾಗಿತ್ತು.

ಬಾಂಗ್ಲಾದ ಮತ್ತೋರ್ವ ಬೌಲರ್‌ ಮುಸ್ತಫಿಜುರ್‌ ರೆಹಮಾನ್‌ ಮರಳಿ ಟಾಪ್‌-10 ಯಾದಿಯಲ್ಲಿ ಕಾಣಿಸಿ ಕೊಂಡಿದ್ದಾರೆ (9).
ನ್ಯೂಜಿಲ್ಯಾಂಡ್‌ ವೇಗಿ ಟ್ರೆಂಟ್‌ ಬೌಲ್ಟ್ ಅಗ್ರಸ್ಥಾನದಲ್ಲಿ ಮುಂದುವರಿದರೆ, ಇಂಗ್ಲೆಂಡ್‌ ಎದುರಿನ ಏಕದಿನ ಸರಣಿ ಯಿಂದ ಹೊರಗುಳಿದಿದ್ದ ಜಸ್‌ಪ್ರೀತ್‌ ಬುಮ್ರಾ 5ನೇ ಸ್ಥಾನದಲ್ಲೇ ಉಳಿದಿದ್ದಾರೆ.

ಇದನ್ನೂ ಓದಿ :ಒಪ್ಪಂದದ ಪ್ರಕಾರವೇ ವನಿತಾ ಕ್ರಿಕೆಟಿಗರಿಗೆ ವೇತನ ನೀಡಲಾಗಿದೆ: ಬಿಸಿಸಿಐ

14ಕ್ಕೆ ಏರಿದ ರಹೀಂ
ಲಂಕಾ ಎದುರಿನ ಎರಡೂ ಪಂದ್ಯಗಳಲ್ಲಿ “ಮ್ಯಾನ್‌ ಆಫ್ ದ ಮ್ಯಾಚ್‌’ ಪ್ರಶಸ್ತಿಗೆ ಭಾಜನರಾದ ಮುಶ್ಫಿಕರ್‌ ರಹೀಂ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಜೀವನಶ್ರೇಷ್ಠ 14ನೇ ಸ್ಥಾನಕ್ಕೆ ಬಂದಿದ್ದಾರೆ.

ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ 2ನೇ ಹಾಗೂ 3ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಅಗ್ರಸ್ಥಾನ ದಲ್ಲಿರುವವರು ಪಾಕಿಸ್ಥಾನ ತಂಡದ ನಾಯಕ ಬಾಬರ್‌ ಆಜಂ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.