ಸಿಎಂ-ಯತ್ನಾಳ ಸಂಧಾನ ಯಶಸ್ವಿ! 15ದಿನ ಕಾಯಿರಿ ಎಲ್ಲದಕ್ಕೂ ಉತ್ತರ ಸಿಗಲಿದೆ : ಸಚಿವ ಸೋಮಣ್ಣ
Team Udayavani, Nov 11, 2020, 4:35 PM IST
ವಿಜಯಪುರ: ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಧ್ವನಿ ಎತ್ತಿದವರಲ್ಲಿ ಯತ್ನಾಳ ಕೂಡ ಒಬ್ಬರು. ಹೀಗಾಗಿ ಸಿಎಂ ಬದಲಾವಣೆ ಕುರಿತು ನೀಡಿದ ಹೇಳಿಕೆ ಸಣ್ಣ ವ್ಯತ್ಯಾಸವೇ ಹೊರತು, ಯಾರೂ ಈ ವಿಷಯದ ಕುರಿತು ಆದ್ಯತೆ ನೀಡಬೇಡಿ. ಈಗಾಗಲೇ ಯತ್ನಾಳ ಅವರೊಂದಿಗೆ ಮಾತನಾಡಿದ್ದೇನೆ. ಇನ್ನು,15 ದಿನ ಕಾಯಿರಿ ಎಲ್ಲಕ್ಕೂ ಉತ್ತರ ಸಿಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯತ್ನಾಳ ಜೊತೆ ಔಪಚಾರಿಕ ಮಾತನಾಡಿದ್ದು, ಸಂಧಾನ ಯಶಸ್ವಿಯಾಗಿದೆ. ಇನ್ನು 15 ದಿನ ಕಾಯಿರಿ ಎಲ್ಲವೂ ಸ್ಪಷ್ಟವಾಗುತ್ತೆ ಎಂದರು.
ರಾಜ್ಯದಲ್ಲಿ ಒಂದು ಹೊಸ ಸಂದೇಶ ಹೋಗಬೇಕಿದೆ. ಯತ್ನಾಳ ಅವರಿಗೆ ಈಗಿನ್ನು 55 ವಯಸ್ಸು, ರಾಜಕೀಯದಲ್ಲಿ ಅವರಿಗೆ ಇನ್ನೂ 25 ವರ್ಷ ಉತ್ತಮ ಭವಿಷ್ಯವಿದೆ, ಯತ್ನಾಳ ಅನುಭವ ಬಳಸಿಕೊಳ್ಳಲು ಹೆಚ್ಚಿನ ಆದ್ಯತೆ ಸಿಗಲಿದೆ. ಯತ್ನಾಳ ಜೊತೆ ಮಾತುಕತೆ ಯಶಸ್ವಿಯಾಗಿದೆ. ಅವರೂ ಖುಷಿ ಆಗಿರುವುದನ್ನು ನೀವೇ ನೋಡುತ್ತಿದ್ದೀರಿ ಎಂದು ಸಚಿವ ಸೋಮಣ್ಣ ಹೇಳಿದರು.
ಇದನ್ನೂ ಓದಿ:ಚುನಾವಣೆಯಲ್ಲಿ ಜಾತಿ, ದುಡ್ಡು, ಗೂಂಡಾ ರಾಜಕಾರಣ ಯಾವುದು ನಡೆಯಲ್ಲ: ಈಶ್ವರಪ್ಪ
ಯತ್ನಾಳ ಸಚಿವರಾಗಬಾರದೇ, ಆದರೆ ಯಾರನ್ನು ಸಚಿರನ್ನಾಗಿ ಮಾಡಬೇಕೆಂದು ಸಿ.ಎಂ. ನಿರ್ಧರಿಸಲಿದ್ದಾರೆ, ಅದು ಅವರ ಪರಮಾಧಿಕಾರ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಅದು ಸಿಎಂ ಪರಮಾಧಿಕಾರ.
ಹೈಕಮಾಂಡ ಜೊತೆ ಸಮಾಲೋಚನೆ ಮಾಡುವುದು ಅವರಿಗೆ ಬಿಟ್ಟಿದ್ದು. ಸಂಪುಟ ಸಚಿವರಲ್ಲಿ ಯಾರು ಕೆಲಸ ಮಾಡುತ್ತಾರೆ, ಇಲ್ಲ ಎಂಬುದು ಸಿಎಂ ಅವರಿಗೆ ಗೊತ್ತಿದೆ ಎಂದರು.
ನಾನು ಯಾವ ಖಾತೆ ನೀಡಿದರೂ ಸಮರ್ಥವಾಗಿ ಕೆಲಸ ಮಾಡುತ್ತೇನೆ. ಈಗ ನೀಡಿರುವ ವಸತಿ ಖಾತೆಯಲ್ಲೂ ನನಗೆ ತೃಪ್ತಿ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ