ಕೃಷಿಗೆ ಒತ್ತು ನೀಡಿದ ಸಮಗ್ರ ಬಜೆಟ್ : ಸಚಿವ ಬಿ.ಸಿ.ಪಾಟೀಲ್
Team Udayavani, Mar 5, 2020, 3:17 PM IST
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಡಿಸಿರುವ ಬಜೆಟ್ ಕೃಷಿಗೆ ಪೂರಕವಾಗಿದ್ದು ಇದು ರೈತರ ಅಭಿವೃದ್ಧಿಗೆ ಮಂಡಿಸಿದ ಸಮಗ್ರ ಬಜೆಟ್ ಆಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಆಯವ್ಯಯ ಮಂಡನೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದ ರೈತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಭಾವಚಿತ್ರಯುಕ್ತ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಜಾರಿಗೆ ತರಲಾಗಿದೆ. ಹನಿ ನೀರಾವರಿಗೆ ಆದ್ಯತೆ ನೀಡಿದ್ದಾರೆ. ಫಸಲ್ ಭೀಮಾ ಯೋಜನೆಗೆ 900ಕೋಟಿ ಹಣ ಮೀಸಲಿಟ್ಟಿದ್ದಾರೆ. ಫಸಲ್ ಭೀಮಾ ಯೋಜನೆಯ ರಾಜ್ಯದ ವಿಮಾ ಕಂತಿನ ಪಾಲು 900ಕೋಟಿ ರೂ. ಬಿಡುಗಡೆಯಾಗಿದೆ . ರೈತರ ಮನೆ ಬಾಗಿಲಿನಲ್ಲಿಯೇ ಮಣ್ಣು, ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಆರಂಭಿಸಲಾಗುವುದು ಎಂದರು.
ಸಾವಯವ ಕೃಷಿಯನ್ನು ಪ್ರೋತ್ಸಾಹಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಒಟ್ಟಾರೆಯಾಗಿ ರೈತರ ಆದಾಯ ದ್ವಿಗುಣಗೊಳಿಸಲು ಅನ್ನದಾತರ ಬದುಕನ್ನು ಹಸನು ಮಾಡಲು ಇಲಾಖೆ ಹಾಗೂ ಸರ್ಕಾರ ಬದ್ಧವಾಗಿದೆ. ಇನ್ನಷ್ಟು ಹೊಸಹೊಸ ಯೋಜನೆಗಳನ್ನು ಹಾಗೂ ರೈತರಿಗಾಗಿ ಪ್ರಾತ್ಯಕ್ಷಿಕೆಗಳನ್ನು ಸಹ ಮಾಡಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!