ಕಟ್ಟಡಗಳ ಅವಶೇಷ ವಿಲೇವಾರಿ ನಿಗೂಢ : ಟನ್‌ಗಟ್ಟಲೆ ಅವಶೇಷ ನಿರ್ಜನ ಪ್ರದೇಶದಲ್ಲಿ ಡಂಪ್‌


Team Udayavani, Jan 24, 2021, 11:40 AM IST

ಕಟ್ಟಡಗಳ ಅವಶೇಷ ವಿಲೇವಾರಿ ನಿಗೂಢ : ಟನ್‌ಗಟ್ಟಲೆ ಅವಶೇಷ ನಿರ್ಜನ ಪ್ರದೇಶದಲ್ಲಿ ಡಂಪ್‌

ಬೆಂಗಳೂರು: ನಗರದಲ್ಲಿ ಸ್ಮಾರ್ಟ್‌ ಸಿಟಿ ಹಾಗೂ ಮೆಟ್ರೋ ಸಂಸ್ಥೆ ಕೈಗೆತ್ತಿಕೊಂಡಿರುವ ಕಾಮಗಾರಿ ಸೇರಿದಂತೆ ವಿವಿಧ ಕಟ್ಟಡ ನಿರ್ಮಾಣದ ವೇಳೆ ಉತ್ಪತ್ತಿಯಾಗುವ ತ್ಯಾಜ್ಯ (ಮಣ್ಣು)ಹಾಗೂ ಕಟ್ಟಡ ಅವಶೇಷಗಳ ವಿಲೇವಾರಿ ಎಲ್ಲಿ ಆಗುತ್ತಿದೆ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಏಕೆಂದರೆ, ನಗರದಲ್ಲಿ ಮೆಟ್ರೋ ಹಾಗೂ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಹಾಗೂ ಖಾಸಗಿ ವಲಯದ ಕಾಮಗಾರಿಗಳಿಂದ ನಿತ್ಯ ಎರಡೂವರೆ ಸಾವಿರದಿಂದ ಮೂರು ಸಾವಿರ ಮೆಟ್ರಿಕ್‌ ಟನ್‌ ಕಟ್ಟಡ ಅವಶೇಷಗಳು ಸಂಗ್ರಹವಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ ಸುಮಾರು ಎರಡು ಸಾವಿರ ಮೆಟ್ರಿಕ್‌ ಟನ್‌ ವಿಲೇವಾರಿ ಸಾಮರ್ಥ್ಯದ ಘಟಕ ಇದೆ. ಆದರೆ, ಅಲ್ಲಿಗೆ ಬರುತ್ತಿರುವುದು ನಿತ್ಯ ಕೇವಲ 100 ಮೆಟ್ರಿಕ್‌ ಟನ್‌ ಮಾತ್ರ. ಉಳಿದ ಕಟ್ಟಡ ಅವಶೇಷ ತಾಜ್ಯ ಎಲ್ಲಿ ವಿಲೇವಾರಿ ಆಗುತ್ತಿದೆ ಎಂಬುದೇ ನಿಗೂಢವಾಗಿದೆ.

ಕೆರೆ, ನಿರ್ಜನ ಪ್ರದೇಶಕ್ಕೆ ಡಂಪ್‌: ನಗರದಲ್ಲಿ ಎಲ್ಲೆಂದರಲ್ಲಿ ಕಟ್ಟಡ ನಿರ್ಮಾಣ, ಕಟ್ಟಡ ಕೆಡವುವುದು ಹಾಗೂ ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಉತ್ಪತ್ತಿಯಾಗುವ ಮಣ್ಣು, ಕಬ್ಬಿಣ, ಜೆಲ್ಲಿ ಹಾಗೂ ಸಿಮೆಂಟ್‌ ತ್ಯಾಜ್ಯಎಲ್ಲೆಂದರಲ್ಲಿ ಸುರಿಯುವುದು ತಪ್ಪಿಸುವ ಉದ್ದೇಶದಿಂದ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಚಿಕ್ಕಜಾಲ ಹಾಗೂ ಕಣ್ಣೂರಿನಲ್ಲಿ ಕಾಮಗಾರಿ ಹಾಗೂ ಕಟ್ಟಡ ನಿರ್ಮಾಣ ತ್ಯಾಜ್ಯ ಸಂಸ್ಕರಣಾ (ಸಿ ಮತ್ತು ಡಿ)ಘಟಕಗಳನ್ನು ನಿರ್ಮಿಸಲಾಗಿದೆಯಾದರೂ, ಈ ಘಟಕದ ಸಾಮರ್ಥ್ಯದ ಶೇ. 5 ತ್ಯಾಜ್ಯ ಬರುತ್ತಿಲ್ಲ.

ಹೀಗಾಗಿ, ನಗರದಲ್ಲಿನ ಕೆರೆಗಳು, ರಾಜಕಾಲುವೆ ಭಾಗ, ನಿರ್ಜನ ಪ್ರದೇಶ ಹಾಗೂ ಖಾಲಿ ನಿವೇಶನಗಳಲ್ಲಿ ಡಂಪ್‌ ಆಗುತ್ತಿದೆಯೇ ಎಂಬ ಅನುಮಾನ ಶುರುವಾಗಿದೆ.

ಇದನ್ನೂ ಓದಿ:ಡಿಕೆಶಿಗೆ ಧಮ್‌ ಇದ್ರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಈಶ್ವರಪ್ಪ

ಪ್ರತಿ ನಿತ್ಯ ಚಿಕ್ಕಜಾಲದಲ್ಲಿ ಒಂದು ಸಾವಿರ ಮೆಟ್ರಿಕ್ಟನ್‌ ಸಾಮರ್ಥ್ಯ ಹಾಗೂ ಕಣ್ಣೂರು 750 ಮೆಟ್ರಿಕ್‌ ಟನ್‌ ಸಾಮರ್ಥ್ಯದ ತ್ಯಾಜ್ಯ ಸಂಸ್ಕರಣೆ ಹಾಗೂ ಮರುಬಳಕೆ ಮಾಡಬಹುದಾದ ಸಂಸ್ಕರಣಾ ಘಟಕಗಳು ಇವೆ. ಕಟ್ಟಡ ನಿರ್ಮಾಣ, ಮರು ನಿರ್ಮಾಣ ಹಾಗೂ ನಗರದ ವಿವಿಧ ಇಲಾಖೆಗಳಿಂದ ಉತ್ಪತ್ತಿಯಾಗುತ್ತಿರುವ ಮಣ್ಣು ಹಾಗೂ ಕಟ್ಟಡ ಅವಶೇಷಗಳನ್ನು ಸಂಸ್ಕರಣೆ ಮಾಡುವ ಉದ್ದೇಶದಿಂದ ಬಿಬಿಎಂಪಿ ಚಿಕ್ಕಜಾಲ ಹಾಗೂ ಕಣ್ಣೂರಿನಲ್ಲಿ ಎರಡು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡಿದೆ.

ಮೆಟ್ರೋ ಹಾಗೂ ಸ್ಮಾರ್ಟ್‌ ಸಿಟಿ ಯೋಜನೆಗಳ ಮೇಲೆ ಅನುಮಾನ?: ಮೆಟ್ರೋ ಸಂಸ್ಥೆಯು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಗಳ ನಿರ್ದೇಶನದ ಮೇಲೆ ಮೆಟ್ರೋದಿಂದ ಕೈಗೆತ್ತಿಕೊಳ್ಳಲಾಗಿರುವ ಕಾಮಗಾರಿಗಳ ವೇಳೆ (ಬನ್ನೇರುಘಟ್ಟದಿಂದ ನಾಗವಾರದ ವರೆಗೆ ಮೆಟ್ರೋ ನಿರ್ಮಾಣ ಹಾಗೂ ಜಯದೇವ ಮೇಲ್ಸೇತುವೆ ಕೆಡವಿದ ಸಂದರ್ಭ)ದಲ್ಲಿ ಇದರಿಂದ ಅಂದಾಜು 98,940 ಮೆಟ್ರಿಕ್‌ ಟನ್‌ ನ ತ್ಯಾಜ್ಯ ಉತ್ಪತ್ತಿಯಾಗುವ ಸಾಧ್ಯತೆ ಇದ್ದು, ಇದನ್ನು ಸಂಸ್ಕರಣಾ ಘಟಕಗಳಿಗೆ ರವಾನಿಸಲಾಗುವುದು ಎಂದು ಹೇಳಿತ್ತು.

ಆದರೆ, ಇದರಲ್ಲಿ ಕೇವಲ ಐದು ಸಾವಿರ ಮೆಟ್ರಿಕ್‌ಟನ್‌ ನಿರ್ಮಾಣ ಹಂತದ ತ್ಯಾಜ್ಯ ಮಾತ್ರ ಸಂಸ್ಕರಣಾ ಘಟಕಕ್ಕೆ ಬಂದಿದೆ. ಅದೂ ಒಂದು ನಿರ್ದಿಷ್ಟ ಕಾಮಗಾರಿಯಲ್ಲಿ ಉಳಿದ ಯೋಜನೆಗಳ ಪ್ರಗತಿ ವೇಳೆ ನಿರ್ಮಾಣವಾಗುವ ತ್ಯಾಜ್ಯದ ಬಗ್ಗೆ ಪ್ರಸ್ತಾವನೆಯನ್ನೂ ಸಲ್ಲಿಸಿಲ್ಲ. ಇನ್ನು ಸ್ಮಾರ್ಟ್‌ ಸಿಟಿ ವತಿಯಿಂದ ಒಂದೇ ಒಂದು ಮೆಟ್ರಿಕ್‌ ಟನ್‌ ತ್ಯಾಜ್ಯವೂ ಸಂಸ್ಕರಣಾ ಘಟಕಗಳಿಗೆ ಬಂದಿಲ್ಲ
ಎಂದು ಸಂಸ್ಕರಣಾ ಘಟಕದ ಅಧಿಕಾರಿಗಳು ಆರೋಪಿಸಿದ್ದಾರೆ.

ಸೂಚನೆ: ಪಾಲಿಕೆಯಿಂದ ಮೆಟ್ರೋ, ಜಲಮಂಡಳಿ ಹಾಗೂ ಸ್ಮಾರ್ಟ್‌ ಸಿಟಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್‌ ಬಿ.ಅಡಿ ತಿಳಿಸಿದರು.

ಈ ಸಂಬಂಧ ಉದಯವಾಣಿಯೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯವರೇ ಆಗಿರಲಿ. ಕಟ್ಟಡ
ನಿರ್ಮಾಣ, ಕಟ್ಟಡ ಕೆಡವಿದ ಮೇಲೆ ಅಥವಾ ಕಾಮಗಾರಿಗೆ ಪರವಾನಗಿ ನೀಡುವ ಸಂದರ್ಭದಲ್ಲೇ ಸಿ ಮತ್ತು ಡಿ ಶುಲ್ಕವನ್ನೂ ಪಾವತಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಮತ್ತೂಂದು ಸುತ್ತಿನ ಸಭೆಯನ್ನೂ ಕರೆಯಲಾಗುವುದು ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.