ಬಸ್ ಗೆ ಬೆಂಕಿ : 12 ಮಕ್ಕಳು ಸೇರಿ ನಿದ್ದೆಯ ಮಂಪರಿನಲ್ಲಿದ್ದ 45 ಪ್ರವಾಸಿಗರು ಸಜೀವ ದಹನ
Team Udayavani, Nov 23, 2021, 4:00 PM IST
ಬಲ್ಗೇರಿಯಾ : ಪಶ್ಚಿಮ ಬಲ್ಗೇರಿಯಾದ ಹೆದ್ದಾರಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಉತ್ತರ ಮೆಸಿಡೋನಿಯನ್ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗೆ ಆಹುತಿಯಾಗಿ 12 ಮಕ್ಕಳು ಸೇರಿದಂತೆ ಕನಿಷ್ಠ 45 ಜನರು ಸಾವನ್ನಪಿರುವ ಘಟನೆ ಸಂಭವಿಸಿದೆ.
ಸೋಫಿಯಾದ ಪಶ್ಚಿಮಕ್ಕೆ ಸುಮಾರು 30 ಮೈಲಿ (45 ಕಿಮೀ) ದೂರದಲ್ಲಿರುವ ಸ್ಟ್ರೂಮಾ ಹೆದ್ದಾರಿಯಲ್ಲಿ ಸ್ಥಳೀಯ ಸಮಯ ಸುಮಾರು 2 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಬಲ್ಗೇರಿಯನ್ ಅಧಿಕಾರಿಗಳು ತಿಳಿಸಿದ್ದಾರೆ.
ನಿದ್ದೆಯ ಮಂಪರಿನಲ್ಲಿದ್ದ ಪ್ರವಾಸಿಗರಿಗೆ ಬಸ್ ಗೆ ಬೆಂಕಿ ಆವರಿಸಿದ್ದೆ ಗೊತ್ತಾಗಲಿಲ್ಲ, ಬೆಂಕಿ ಆವರಿಸಿದ ಬಸ್ ನಿಂದ ಏಳು ಮಂದಿ ಜಿಗಿದಿದ್ದು ಅವರನ್ನು ಸೋಫಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಅಲ್ಲದೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಬಸ್ಸಿನಲ್ಲಿದ್ದ ದೇಹಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಬೂದಿಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ ಅಲ್ಲದೆ ಅಪಘಾತದ ಕಾರಣ ಅಸ್ಪಷ್ಟವಾಗಿದೆ ಆದರೆ ಬೆಂಕಿ ಹೊತ್ತಿಕೊಳ್ಳುವ ಮೊದಲು ಅಥವಾ ನಂತರ ಬಸ್ ಹೆದ್ದಾರಿ ತಡೆಗೋಡೆಗೆ ಅಪ್ಪಳಿಸಿದೆ ಎಂದು ಬಲ್ಗೇರಿಯನ್ ಅಧಿಕಾರಿಗಳು ತಿಳಿಸಿದ್ದಾರೆ.
ಬಲಿಯಾದವರಲ್ಲಿ ಹೆಚ್ಚಿನವರು ಉತ್ತರ ಮೆಸಿಡೋನಿಯಾದವರು ಎಂದು ಸೋಫಿಯಾದಲ್ಲಿನ ಉತ್ತರ ಮೆಸಿಡೋನಿಯಾ ರಾಯಭಾರ ಕಚೇರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ : ಸಿದ್ದು ಅಸಂಬದ್ದ ಮಾತು ಪ್ರಜಾಪ್ರಭುತ್ವಕ್ಕೆ ಅವಮಾನ
ಅಪಘಾತದ ಕುರಿತು ಪ್ರತಿಕ್ರೀಯೆ ನೀಡಿರುವ ಬಲ್ಗೇರಿಯಾದ ಹಂಗಾಮಿ ಪ್ರಧಾನಿ ಸ್ಟೀಫನ್ ಯಾನೆವ್ “ನಾವು ಇಲ್ಲಿ ಅಗಾಧ ದುರಂತವನ್ನು ಹೊಂದಿದ್ದೇವೆ.” ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ