ಅಪಾಯಕಾರಿ ರಾಸಾಯನಿಕ ತುಂಬಿದ ಹಡಗಿಗೆ ಬೆಂಕಿ; ಶ್ರೀಲಂಕಾದಿಂದ ಆ್ಯಸಿಡ್ ಮಳೆಯ ಎಚ್ಚರಿಕೆ!
ವೈಭವ್, ಐಸಿಜಿ ಡೋರ್ನಿಯರ್ ಮತ್ತು ಟಗ್ ವಾಟರ್ ಲಿಲ್ಲಿಯನ್ನು ರವಾನಿಸಿರುವುದಾಗಿ ವರದಿ ತಿಳಿಸಿದೆ.
Team Udayavani, May 29, 2021, 2:43 PM IST
ಕೊಲೊಂಬೊ: ಕಳೆದ ವಾರ ಕೊಲೊಂಬೊ ಸಮುದ್ರದಲ್ಲಿ ಸಿಂಗಾಪುರ್ ಮೂಲದ ಹಡಗಿಗೆ ಬೆಂಕಿ ಹೊತ್ತುಕೊಂಡಿದ್ದು, ಹಗಡಿನಲ್ಲಿದ್ದ ನೈಡ್ರೋಜನ್ ಡೈಆಕ್ಸೈಡ್ ಹೊರಸೂಸುವಿಕೆಯ ಪರಿಣಾಮವಾಗಿ ಆ್ಯಸಿಡ್ (ಆಮ್ಲ) ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಶ್ರೀಲಂಕಾದ ಉತ್ನತ ಪರಿಸರ ಸಂಸ್ಥೆ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಚರಂಡಿಯಲ್ಲಿ ಬಿದ್ದು ಮಗು ಸಾವು : ಗ್ರಾಮ ಪಂಚಾಯತ್ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸಿಂಗಾಪುರ್ ಮೂಲದ ಸರಕು ಹಡಗು ಎಂವಿ-ಎಕ್ಸ್ ಪ್ರೆಸ್ ಪರ್ಲ್ ಗುಜರಾತ್ ನ ಹಜೀರಾದಿಂದ ಕೊಲಂಬೊ ಬಂದರಿಗೆ ಸೌಂದರ್ಯವರ್ಧಕಗಳ ರಾಸಾಯನಿಕ ಮತ್ತು ಕಚ್ಛಾ ವಸ್ತುಗಳನ್ನು ಸಾಗಿಸುತ್ತಿತ್ತು. ಆದರೆ ಕೊಲಂಬೋದ ಕರಾವಳಿಯಿಂದ 9.5 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಹಡಗಿಗೆ ಬೆಂಕಿ ಹೊತ್ತುಕೊಂಡಿತ್ತು. ಇದರಿಂದಾಗಿ ಮೇ 20ರಂದು ಹಡಗು ಕೊಲಂಬೊ ಬಂದರಿನ ಹೊರಗೆ ಲಂಗರು ಹಾಕಿರುವುದಾಗಿ ವರದಿ ವಿವರಿಸಿದೆ.
ಎಂವಿ ಎಕ್ಸ್ ಪ್ರೆಸ್ ಪರ್ಲ್ ಹಡಗಿನಲ್ಲಿ 325 ಮೆಟ್ರಿಕ್ ಟನ್ ಗಳಷ್ಟು ಇಂಧನ ಇದ್ದು, ಜೊತೆಗೆ 25 ಟನ್ ಗಳಷ್ಟು ಅಪಾಯಕಾರಿ ನೈಟ್ರಿಕ್ ಆ್ಯಸಿಡ್ ಗಳ ರಾಸಾಯನಿಕ ವಸ್ತುಗಳು ಇದ್ದಿರುವುದಾಗಿ ವರದಿ ತಿಳಿಸಿದೆ. ಎಂವಿ ಎಕ್ಸ್ ಪ್ರೆಸ್ ಪರ್ಲ್ ಹಡಗಿನಿಂದ ಅಪಾರ ಪ್ರಮಾಣದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಹೊರಸೂಸುವುದನ್ನು ನಾವು ಗಮನಿಸಿದ್ದೇವೆ. ಮಳೆಗಾಲದಲ್ಲಿ ನೈಟ್ರೋಜನ್ ಡೈಆಕ್ಸೈಡ್ ಅನಿಲ ಹೊರಸೂಸುವ ಮೂಲಕ ಸ್ವಲ್ಪ ಆಮ್ಲ ಮಳೆಯಾಗಬಹುದು ಎಂದು ಸಮುದ್ರ ಪರಿಸರ ಸಂರಕ್ಷಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನಿ ಲಹಂದಾಪುರ್ ತಿಳಿಸಿರುವುದಾಗಿ ವೆಬ್ ಸೈಟ್ ವರದಿಯೊಂದು ವಿವರಿಸಿದೆ.
ಮುಖ್ಯವಾಗಿ ಲಂಕಾದ ಕರಾವಳಿ ಪ್ರದೇಶದಲ್ಲಿರುವ ಜನರು ಜಾಗರೂಕರಾಗಿರಬೇಕು. ಈ ಸಂದರ್ಭದಲ್ಲಿ ಸುರಿಯುವ ಮಳೆಗೆ ಸಿಲುಕದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕೊಲಂಬೊ ಕರಾವಳಿ ಪ್ರದೇಶದಲ್ಲಿನ ಸಿಂಗಾಪುರ್ ಮೂಲದ ಹಡಗಿನ ಬೆಂಕಿಯನ್ನು ನಂದಿಸಲು ಶ್ರೀಲಂಕಾದ ನೌಕಾಪಡೆಗೆ ನೆರವು ನೀಡಲು ಭಾರತ ಐಸಿಜಿ ವೈಭವ್, ಐಸಿಜಿ ಡೋರ್ನಿಯರ್ ಮತ್ತು ಟಗ್ ವಾಟರ್ ಲಿಲ್ಲಿಯನ್ನು ರವಾನಿಸಿರುವುದಾಗಿ ವರದಿ ತಿಳಿಸಿದೆ.
ಏನಿದು ಆ್ಯಸಿಡ್ ಮಳೆ:
ಸಾಮಾನ್ಯವಾಗಿ ಮಳೆ, ಮಂಜು ಮೊದಲಾದ ರೂಪದಲ್ಲಿ ಆಮ್ಲಗಳು ವಾತಾವರಣದಿಂದ ಭೂಮಿಯ ಮೇಲೆ ಚೆಲ್ಲಲ್ಪಡುವ ಪ್ರಕ್ರಿಯೆಯನ್ನು ಆಮ್ಲ ಮಳೆ ಎಂದು ಕರೆಯಲಾಗುತ್ತದೆ. ಮುಖ್ಯವಾಗಿ ವಾತಾವರಣದಲ್ಲಿ ರೂಪುಗೊಳ್ಳುವ ಗಂಧಕಾಮ್ಲ(ಸಲ್ಫರಿಕ್ ಆಮ್ಲ) ಮತ್ತು ನೈಟ್ರಿಕ್ ಆಮ್ಲಗಳು ಮಳೆ ನೀರಿನ ಜತೆ ಬೆರೆತು ಭೂಮಿಯ ಮೇಲೆ ಸುರಿಯುವುದನ್ನು ಆಮ್ಲ ಮಳೆ ಎನ್ನುತ್ತಾರೆ. ಕೊಲಂಬೋದಲ್ಲಿನ ಸಿಂಗಾಪುರ್ ಹಡಗಿನಲ್ಲಿ ನೈಟ್ರೋಜನ್ ಡೈಆಕ್ಸೈಡ್ ಇದ್ದು, ಇದು ಹೊರಸೂಸುತ್ತಿದೆ. ಮಳೆಯ ಕಾರಣದಿಂದ ಇದು ವಾತಾವರಣದ ಜತೆ ಸೇರಿ ಆಮ್ಲ ಮಳೆ ಸುರಿಸಲು ಕಾರಣವಾಗಬಹುದು ಎಂದು ಲಂಕಾ ಹವಾಮಾನ ಇಲಾಖೆ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ