ಕೆಎಸ್ಸಾರ್ಟಿಸಿ, ಬಿಎಂಟಿಸಿ ಟಿಕೆಟ್ ದರದ ಬರೆ?
ಸರಕಾರಿ ಬಸ್ ಪ್ರಯಾಣ ದರ ಏರಿಕೆಗೆ ಚಿಂತನೆ
Team Udayavani, Feb 13, 2020, 6:55 AM IST
ಬೆಂಗಳೂರು: ಐದು ವರ್ಷಗಳಿಂದ ಡೀಸೆಲ್ ದರ ಹಲವು ಬಾರಿ ಏರಿಕೆಯಾದರೂ ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಆಗದೆ ಇರುವುದರಿಂದ ನಷ್ಟವಾಗುತ್ತಿದೆ ಎಂಬ ಕಾರಣ ನೀಡಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಪ್ರಯಾಣ ದರ ಹೆಚ್ಚಿಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಹಲವು ಬಾರಿ ಪೆಟ್ರೋಲ್, ಡೀಸೆಲ್ ದರ ಏರಿದ್ದರೂ ಬಸ್ ಯಾನ ದರ ಹೆಚ್ಚಿಸಿಲ್ಲ. ಇದ ರಿಂದ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ. ಸಿಎಂ ಯಡಿಯೂರಪ್ಪ ಸಾರಿಗೆ ಇಲಾಖೆಗೆ ಸಂಬಂಧಿಸಿ ನಡೆಸಿದ ಬಜೆಟ್ ಪೂರ್ವಭಾವಿ ಸಭೆ ಯಲ್ಲೂ ಈ ವಿಚಾರ ಚರ್ಚೆಯಾಗಿದೆ. ನಷ್ಟ ತಪ್ಪಿಸಲು ಪ್ರಯಾಣ ದರ ಏರಿಕೆ ಮಾಡಲು ಇಲಾಖೆ ಗಂಭೀರ ಚಿಂತನೆ ನಡೆಸಿದಂತಿದೆ ಎನ್ನಲಾಗಿದೆ.
ಬಜೆಟ್ ಅಧಿವೇಶನಕ್ಕೆ ಮೊದಲು ಇಲ್ಲವೇ ಅಧಿವೇಶನ ಸಂದರ್ಭ ದಲ್ಲೇ ದರ ಪರಿಷ್ಕರಣೆಗೆ ಚಿಂತಿಸ ಲಾಗಿದೆ. ಅಧಿ ವೇಶನದಲ್ಲಿ ವಿಪಕ್ಷಗಳು ಈ ಬಗ್ಗೆ ಚರ್ಚೆ ನಡೆಸಲಿ. ಇಲಾಖೆಯ ಸ್ಥಿತಿಗತಿ ಬಗ್ಗೆಯೂ ವಿಸ್ತೃತ ಚರ್ಚೆಯಾಗಲಿ. ಇದರಿಂದ ದರ ಏರಿಕೆಯ ಅನಿವಾರ್ಯ ಮನವರಿಕೆಯಾಗುವ ನಿರೀಕ್ಷೆ ಇದೆ ಎಂದು ಉನ್ನತ ಮೂಲಗಳು ಹೇಳಿವೆ.
ದರ ಪರಿಷ್ಕರಣೆಗೆ ಕಸರತ್ತು
ಬಸ್ ಯಾನ ದರ ಏರಿಕೆಗೆ ಸರಕಾರ ಮುಂದಾಗಿರುವುದು ಇದೇ ಮೊದಲಲ್ಲ; ಈ ಹಿಂದೆಯೂ ಎರಡು ಬಾರಿ ದರ ಹೆಚ್ಚಳ ಮಾಡಿ, ವಿರೋಧದ ಹಿನ್ನೆಲೆಯಲ್ಲಿ ಆದೇಶ ಹಿಂಪಡೆದ ಉದಾಹರಣೆಗಳಿವೆ.
2018ರ ಸೆಪ್ಟಂಬರ್ನಲ್ಲಿ ಸರಕಾರಿ ಬಸ್ಗಳ ಪ್ರಯಾಣ ದರವನ್ನು ಸರಾಸರಿ ಶೇ.18ರಷ್ಟು ಹೆಚ್ಚಿಸಲಾಗಿತ್ತು. ಆದರೆ ಆದೇಶ ಹೊರಡಿಸಿದ ಒಂದೇ ತಾಸಿನಲ್ಲಿ “ದರ ಏರಿಕೆ ಸದ್ಯಕ್ಕೆ ಬೇಡ. ಆದೇಶ ತಡೆಹಿಡಿಯಿರಿ’ ಎಂದು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚಿಸಿದ್ದರು.
2019ರ ಸೆಪ್ಟಂಬರ್ನಲ್ಲಿ ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆಗೆ ಆದೇಶಿಸಲಾಗಿತ್ತು. ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ್ದರಿಂದ ಕೊನೆ ಕ್ಷಣದಲ್ಲಿ ಹಿಂಪಡೆಯಲಾಯಿತು. ಆಗ ವಿದ್ಯಾರ್ಥಿ ಬಸ್ ಪಾಸ್ ದರವನ್ನು ಕನಿಷ್ಠ 100ರಿಂದ ಗರಿಷ್ಠ 250 ರೂ.ವರೆಗೆ ಹೆಚ್ಚಿಸಲು ನಿರ್ಧರಿಸಲಾಗಿತ್ತು.
2013ರಲ್ಲಿ ಪ್ರಯಾಣ ದರವನ್ನು ಶೇ.10.50ರಷ್ಟು ಹೆಚ್ಚಿಸಲಾಗಿತ್ತು. 2014ರಲ್ಲಿ ಮತ್ತೆ ಸರಾಸರಿ ಶೇ. 7.96ರಷ್ಟು ದರ ಏರಿಕೆ ಶಾಕ್ ನೀಡಲಾಗಿತ್ತು. ಇದಾದ ಅನಂತರ ಅಂದರೆ, ಕಳೆದ ನಾಲ್ಕು ವರ್ಷಗಳಲ್ಲಿ ದರ ಏರಿಕೆ ಮಾಡಿರಲಿಲ್ಲ. ಈ ಮಧ್ಯೆ 2015ರಲ್ಲಿ ಪ್ರಯಾಣಿಕರಿಗೆ ಶೇ. 2ರಷ್ಟು ದರ ಇಳಿಕೆ ಮಾಡುವ ಮೂಲಕ ಕೊಂಚ ಸಮಾಧಾನ ನೀಡಲಾಗಿತ್ತು.
ಕೇಂದ್ರದ ಭಾರೀ ದಂಡ ಜಾರಿ?
ಪ್ರಯಾಣ ದರ ಏರಿಕೆಗೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ರಾಜ್ಯ ಸರಕಾರವು ಸಂಚಾರ ನಿಯಮ ಉಲ್ಲಂಘನೆಗೆ ಕೇಂದ್ರ ವಿಧಿಸಿರುವ ದಂಡ ಮೊತ್ತದ ಅಧಿಸೂಚನೆಯನ್ನು ಯಥಾವತ್ತಾಗಿ ಜಾರಿಗೊಳಿಸಲು ಚಿಂತನೆ ನಡೆಸಿದೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರಿಗೆ ಈ ಬಗ್ಗೆ ಸುಳಿವು ನೀಡಿದ ಸಾರಿಗೆ ಸಚಿವ, ಲಕ್ಷ್ಮಣ ಸವದಿ, ದೇಶದಲ್ಲಿ ವಾರ್ಷಿಕವಾಗಿ ರಸ್ತೆ ಅಪಘಾತದಲ್ಲಿ ಒಂದು ಕೋಟಿಗೂ ಹೆಚ್ಚು ಮಂದಿ ಬಲಿಯಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 200ಕ್ಕೆ ತಿದ್ದುಪಡಿ ತಂದು ದೊಡ್ಡ ಮೊತ್ತದ ದಂಡ ವಿಧಿಸಿತ್ತು. ಆದರೆ ಸಾರ್ವಜನಿಕರಲ್ಲಿ ಈ ಬಗ್ಗೆ ವ್ಯಾಪಕ ಅರಿವು ಮೂಡಿಸದೆ ಏಕಾಏಕಿ ಜಾರಿಗೊಳಿಸುವುದರಿಂದ ಹೊರೆಯಾಗಲಿದೆ ಎಂಬ ಕಾರಣಕ್ಕೆ ರಾಜ್ಯ ಸರಕಾರ ದಂಡ ಮೊತ್ತ ಇಳಿಕೆ ಮಾಡಿತ್ತು ಎಂದರು.
ಈಗ ಜನರಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಹೆಚ್ಚು ಮೊತ್ತದ ದಂಡ ವಿಧಿಸುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಇದರಿಂದ ಆಯ್ದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ಗಳು ಕಡಿಮೆಯಾಗಿವೆ ಎಂದು ಪೊಲೀಸ್ ಇಲಾಖೆಯ ವರದಿಗಳಿಂದ ಗೊತ್ತಾಗಿದೆ ಎಂದರು.
ಅರಿವು ಹೆಚ್ಚಿದಂತೆ ಜನರು ನಿಯಮ ಉಲ್ಲಂಘನೆ ನಡೆಸುವುದಿಲ್ಲ. ಹಾಗಾಗಿ ಕೇಂದ್ರ ವಿಧಿಸಿದ್ದ ಭಾರೀ ದಂಡ ಮೊತ್ತವನ್ನೇ ಜಾರಿ ಮಾಡಲು ಚಿಂತಿಸಲಾಗಿದೆ. ಜಾರಿಗೆ ಕಾಲಮಿತಿ ಇರಿಸಿಕೊಂಡಿಲ್ಲ. ಬಜೆಟ್ ಅಧಿವೇಶನದ ಬಳಿಕ ಪರಿಸ್ಥಿತಿ ಅವಲೋಕಿಸಿ ಚಿಂತನೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು