ಸಿ.ಡಿ. ಪ್ರಕರಣದ ತನಿಖೆ ರಾಜಕಾರಣಿಗಳತ್ತ?
Team Udayavani, Mar 18, 2021, 12:20 AM IST
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿ.ಡಿ. ಸಂಬಂಧ ಪೊಲೀಸ್ ವಿಚಾರಣೆಗೆ ಒಳಗಾಗಿರುವ ಟಿವಿ ಚಾನೆಲ್ ಸಿಬಂದಿ ನೀಡಿರುವ ಮಾಹಿತಿಗಳು ರಾಜಕಾರಣಿಯೊಬ್ಬರತ್ತಲೇ ಬೊಟ್ಟು ಮಾಡುತ್ತಿವೆ.
ಮೂಲಗಳ ಪ್ರಕಾರ, “ಸೆಕ್ಸ್ ಸಿ.ಡಿ.’ ಡೀಲ್ ಮಾಡುತ್ತಿರುವ ಚಾನೆಲ್ ಸಿಬಂದಿ “ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಈ ಹಿಂದೆಯೂ ಹಲವು ರಾಜಕಾರಣಿಗಳು ಹಾಗೂ ಗಣ್ಯರನ್ನು ವೀಡಿಯೋ ಮೂಲಕ ಬ್ಲ್ಯಾಕ್ವೆುಲ್ ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆಯೂ ಮೂವರು ರಾಜಕಾರಣಿಗಳ ವೀಡಿಯೋಗಳನ್ನು ಆರೋಪಿಗಳ ತಂಡ ಸಂಗ್ರಹಿಸಿಕೊಂಡಿದ್ದು, 2019ರಲ್ಲಿ ಇಬ್ಬರು ಪ್ರಮುಖ ರಾಜಕಾರಣಿಗಳಿಂದ ತಲಾ 1 ಕೋ. ರೂ. ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪ್ರಮುಖನ ಜತೆ ಆರೋಪಿಗಳು
ಪ್ರಕರಣದಲ್ಲಿ ಸಿಲುಕಿರುವ ಆರೋಪಿಗಳ ಪೈಕಿ ಇಬ್ಬರು ರಾಷ್ಟ್ರೀಯ ಪಕ್ಷವೊಂದರ ಇಬ್ಬರು ನಾಯಕರ ಜತೆ ಗುರುತಿಸಿಕೊಂಡಿದ್ದಾರೆ. ಆ ಪಕ್ಷದ ಒಬ್ಬ ಮಹಾನಾಯಕನ ಹೆಸರು ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ.
ಪ್ರಮುಖ ಆರೋಪಿ ಈ ಹಿಂದೆ ಕೆಲವು ಸುದ್ದಿ ವಾಹಿನಿಗಳ ಸ್ಟಿಂಗ್ ಆಪರೇಷನ್ ತಂಡದಲ್ಲಿದ್ದ. ಈ ವೇಳೆ ಹಲವು ಮಂದಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ಸಂಪಾದಿಸಿದ್ದಾನೆ. ಈ ವಸೂಲಿ ದಂಧೆ ವಿಚಾರ ತಿಳಿದ ಸಂಸ್ಥೆಯ ಮುಖ್ಯಸ್ಥರು ಮೂರು ತಿಂಗಳ ಹಿಂದೆ ಆತನನ್ನು ಕೆಲಸದಿಂದ ಕಿತ್ತು ಹಾಕಿದ್ದರು ಎನ್ನಲಾಗಿದೆ.
ಇದನ್ನೂ ಓದಿ :ಮಸೀದಿ ಮತ್ತು ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ: ವಕ್ಫ್ ಬೋರ್ಡ್ ಸ್ಪಷ್ಟನೆ
ಚಿಕ್ಕಮಗಳೂರಿನ ಮತ್ತೂಬ್ಬ ಆರೋಪಿಯೂ ಈ ಹಿಂದೆ ಕೆಲವು ಸುದ್ದಿವಾಹಿನಿಗಳ ಸ್ಟಿಂಗ್ ಆಪರೇಷನ್ ತಂಡದಲ್ಲಿದ್ದ. ಈತ, ಚಿಕ್ಕಮಗಳೂರಿನ ಆಲ್ದೂರಿನಲ್ಲಿ ಸ್ವಂತ ಹೋಮ್ ಸ್ಟೇ ನಡೆಸುತ್ತಿದ್ದಾನೆ. ಈ ಮಧ್ಯೆ ಬೆಂಗಳೂರಿನಲ್ಲಿ ವಾಸವಾಗಿದ್ದುಕೊಂಡು ರಾಷ್ಟ್ರೀಯ ಪಕ್ಷದ ಇನ್ನೊಬ್ಬ ನಾಯಕರೊಬ್ಬರ ಸಾಮಾಜಿಕ ಜಾಲತಾಣಗಳ ನಿರ್ವಹಣೆ ನೋಡಿಕೊಳ್ಳುತ್ತಿದ್ದ ಎನ್ನಲಾಗಿದೆ.
ನಿರ್ಭಯಾ ಗೈಡ್ಲೈನ್ಸ್ ಉಲ್ಲಂಘನೆ ಆರೋಪ
ಸಿ.ಡಿ. ಪ್ರಕರಣ ಸಂಬಂಧ “ನಿರ್ಭಯಾ ನಿಯಮ’ ಉಲ್ಲಂಘಿಸಿದ ಆರೋಪದಡಿ ನಗರ ಪೊಲೀಸ್ ಆಯುಕ್ತರಿಗೆ ಕೊಡಿಗೇ ಹಳ್ಳಿಯ ವಕೀಲ ಜಗದೀಶ್ ಎಂಬವರು ದೂರು ನೀಡಿದ್ದಾರೆ. ಯುವತಿಗೆ ಇದುವರೆಗೂ ಯಾವುದೇ ರಕ್ಷಣೆ ನೀಡಿಲ್ಲ. ಸಂತ್ರಸ್ತೆಯ ವೀಡಿಯೋ ಹೇಳಿಕೆ ಮೇಲೂ ಕ್ರಮ ಕೈಗೊಂಡಿಲ್ಲ. ಜಾರಕಿಹೊಳಿ ದೂರಿಗೆ ಮನ್ನಣೆ ನೀಡಿದಂತೆ ಯುವತಿಗೂ ಮನ್ನಣೆ ಕೊಡಬೇಕಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್