ಟಿಕೆಟ್ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ
Team Udayavani, Jul 24, 2022, 11:26 PM IST
ಬೆಂಗಳೂರು : ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ಅಂತಿಮಗೊಳಿಸುವುದು ಪಕ್ಷದ ಸಂಸದೀಯ ಮಂಡಳಿ. ಇದು ಯಡಿಯೂರಪ್ಪ ಅವರಿಗೂ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೇವಲ ಸಲಹೆ ನೀಡಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಅಂದಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆ ಎಂದಿಲ್ಲ. ಅವರೊಬ್ಬ ಜನನಾಯಕ. ಮುಖ್ಯಮಂತ್ರಿಗಳಾಗಿಯೂ ಕೆಲಸ ಮಾಡಿದವರು. ಪಕ್ಷವನ್ನು ಕಟ್ಟಿದವರಲ್ಲಿ ಅವರೂ ಒಬ್ಬರು ಎಂದರು.
ಮುಖವಾಡ ಕಳಚಿದ ರಮೇಶ್ ಕುಮಾರ್
ರಮೇಶ್ ಕುಮಾರ್ ಈ ಬಾರಿ ಸತ್ಯ ಹೇಳಿದ್ದಾರೆ. ಯಾವಾಗಲೂ ಮುಖವಾಡ ಧರಿಸಿರುವ ಅವರು ಈ ಬಾರಿ ಕಳಚಿದ್ದಾರೆ. ಜತೆಗೆ ಕಾಂಗ್ರೆಸ್ ಮುಖವಾಡವನ್ನು ಕಳಚಿದ್ದಾರೆ ಎಂದು ರವಿ ಹೇಳಿದರು.
ಒಕ್ಕಲಿಗರಲ್ಲಿ ಸಣ್ಣ ಮನಸ್ಥಿತಿಯಿಲ್ಲ
ಒಕ್ಕಲಿಗರು ಸಣ್ಣ ಮನಸ್ಥಿತಿಯಿಂದ ಯೋಚಿಸುವುದಿಲ್ಲ ಹಾಗೂ ಭ್ರಷ್ಟಾಚಾರವನ್ನು ಬಯಸುವುದಿಲ್ಲ. ಯಾರ ಯೋಗ್ಯತೆ ಏನು ಎಂಬುದು ಅವರಿಗೆ ಗೊತ್ತಿದೆ. ಒಕ್ಕಲಿಗರು ಇಷ್ಟಪಡೋದು ಸರ್ವಹಿತ ಬಯಸುವ ರಾಜಕೀಯವನ್ನು ಎಂದರು.
ಎಲ್ಲರಿಗೂ ಒಂದೇ ಕಾನೂನು
ಫ್ಲೆಕ್ಸ್ ಹಾಕಿದವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿ ಸಿದ ಅವರು, ನಾನು ಹುಟ್ಟುಹಬ್ಬದ ಫ್ಲೆಕ್ಸ್ ಹಾಕಲು ಹೇಳಿಲ್ಲ. ಹಾಕಿದ್ದನ್ನು ಸಮರ್ಥಿಸುವುದಿಲ್ಲ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಲಿ. ಕಾನೂನು ಸಿದ್ದರಾಮಯ್ಯ ಅವರಿಗೂ ಒಂದೇ; ಸಿಟಿ ರವಿಗೂ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!