ಇಂದು ಸಂಜೆ ಸಂಪುಟ ತೀರ್ಮಾನ?

ಮೊದಲ ಹಂತದಲ್ಲಿ 15-20 ಸಚಿವರ ಆಯ್ಕೆ ಸಾಧ್ಯತೆ

Team Udayavani, Aug 17, 2019, 6:00 AM IST

vidhana-soudha-750

ಬೆಂಗಳೂರು: ದಿಲ್ಲಿ ಪ್ರವಾಸ ದಲ್ಲಿರುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಶನಿವಾರ ಸಂಜೆ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಲಿದ್ದು, ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಸಿಗುವುದೇ ಎಂಬ ಕುತೂಹಲ ಮೂಡಿದೆ.

ವರಿಷ್ಠರು ಒಪ್ಪಿಗೆ ನೀಡಿದರೆ ರವಿ ವಾರ ಸಂಜೆ ಇಲ್ಲವೇ ಸೋಮವಾರ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. ಮೊದಲ ಹಂತದಲ್ಲಿ 15ರಿಂದ 20 ಶಾಸಕರಿಗೆ ಸಂಪುಟದಲ್ಲಿ ಅವಕಾಶ ಸಿಗುವ ನಿರೀಕ್ಷೆಯಿದ್ದು, ಆಕಾಂಕ್ಷಿಗಳು ವರಿಷ್ಠರ ನಿಲುವಿನ ಬಗ್ಗೆ ಕಾತರರಾಗಿದ್ದಾರೆ.

ಯಡಿಯೂರಪ್ಪ ಅವರು ಶುಕ್ರವಾರ ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯಾ ಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಯಾಗಿ ಚರ್ಚಿಸಿದರು. ಶನಿವಾರ ಸಂಜೆ ಅಮಿತ್‌ ಶಾ ಅವರೊಂದಿಗಿನ ಚರ್ಚೆ ವೇಳೆ ನೂತನ ಸಚಿವರ ಹೆಸರು, ಸಂಖ್ಯೆ, ಖಾತೆ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆ ಇದೆ.

ಸಂತೋಷ್‌- ಬಿಎಸ್‌ವೈ ಚರ್ಚೆ
ಬಿ.ಎಲ್‌. ಸಂತೋಷ್‌ ಮತ್ತು ಬಿ.ಎಸ್‌. ಯಡಿಯೂರಪ್ಪ ಅವರು ಶುಕ್ರವಾರ ಸಂಜೆ ಪ್ರತ್ಯೇಕವಾಗಿ ಕೆಲವು ಸಮಯ ಚರ್ಚಿಸಿದರು. ಈ ಸಂದರ್ಭ ದಲ್ಲಿ ಸಚಿವಾಕಾಂಕ್ಷಿಗಳು ಹಾಗೂ ಸಂಭಾವ್ಯರ ಬಗ್ಗೆ ಸುದೀರ್ಘ‌ ಚರ್ಚೆ ನಡೆಸಿದರು. ಉತ್ತಮ ಆಡ ಳಿತ ನೀಡುವ ಜತೆಗೆ ಪಕ್ಷ, ಸರ ಕಾರದ ವರ್ಚಸ್ಸು ಹೆಚ್ಚಿಸಲು ಪೂರಕ ವಾಗಿರುವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆಯಾಗಿದೆ. ಈ ಹಂತ ದಲ್ಲಿ ಉಭಯ ನಾಯಕರಿಗೂ ಒಮ್ಮತ ವಿರುವ ಒಂದಿಷ್ಟು ಹೆಸರುಗಳಿದ್ದು, ಉಳಿದವರ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಜೆ.ಪಿ. ನಡ್ಡಾ ಭೇಟಿ
ಚರ್ಚೆ ಬಳಿಕ ಬಿ.ಎಲ್‌. ಸಂತೋಷ್‌ ಹಾಗೂ ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚಿ ಸಿದರು. ಇದರಿಂದ ಸಂಪುಟ ವಿಸ್ತರಣೆಗೆ ಒಂದು ಹಂತದ ಚರ್ಚೆ ಪ್ರಕ್ರಿಯೆ ಪೂರ್ಣಗೊಂಡಂತಾಗಿದೆ ಎನ್ನಲಾಗಿದೆ.

ವರಿಷ್ಠರ ಆಣತಿಯಂತೆ ಸಂಪುಟ
ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾದಾಗಿನಿಂದ ಈವರೆಗೆ ಎಲ್ಲ ಹಂತದ ಪ್ರಮುಖ ನಿರ್ಧಾರಗಳಲ್ಲೂ ವರಿಷ್ಠರ ಪಾತ್ರವಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಆ ಮೂಲಕ ವರಿಷ್ಠರ ಆಣತಿಯಂತೆಯೇ ಮುಂದಿನ ಎಲ್ಲ ಪ್ರಕ್ರಿಯೆ ನಡೆಯಲಿದೆ ಎಂಬ ಸಂದೇಶ ರವಾನಿಸಿದಂತಾಗಿದೆ. ಹಾಗಾಗಿ ಸಂಪುಟ ವಿಸ್ತರಣೆಯಲ್ಲೂ ವರಿಷ್ಠರ ನಿರ್ಧಾರವೇ ಅಂತಿಮವಾಗಿರಲಿದೆ. ಹಾಗಾಗಿ ಯಡಿಯೂರಪ್ಪ ಅವರು ಶಿಫಾರಸು ಮಾಡಿದ ಎಲ್ಲರಿಗೂ ಸಚಿವ ಸ್ಥಾನ ಸಿಗುವ ಬಗ್ಗೆ ಅನುಮಾನ ಮೂಡಿದೆ.

ಗ್ರೀನ್‌ ಸಿಗ್ನಲ್‌ ಪಡೆಯುವೆ
ಜೆ.ಪಿ.ನಡ್ಡಾ ಭೇಟಿ ಬಳಿಕ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಶನಿವಾರ ಸಂಜೆ 5 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದೇನೆ. ಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಪಡೆಯುವ ವಿಶ್ವಾಸವಿದೆ. ಶನಿವಾರ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದರು.

ಸಚಿವ ಸ್ಥಾನಕ್ಕೆ ಸಂಭಾವ್ಯರು
ನಾಯಕರ ಹಿರಿತನ, ಅನುಭವ, ಕಾರ್ಯಕ್ಷಮತೆ, ಪ್ರಾಮಾಣಿಕತೆ, ಬುದ್ಧಿವಂತಿಕೆ, ಖಾತೆಯನ್ನು ನಿಭಾಯಿಸುವ ಸಾಮರ್ಥ್ಯ, ಪಕ್ಷ ನಿಷ್ಠೆಯ ಮಾನ ದಂಡದ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡುವ ಸಾಧ್ಯತೆ ಇದೆ. ಸಚಿವ ಸ್ಥಾನಕ್ಕೆ ಸಂಭಾವ್ಯರು ಎನ್ನಲಾದ ಪ್ರಮುಖರ ಹೆಸರು ಹೀಗಿದೆ.

ಶೆಟ್ಟರ್‌, ಈಶ್ವರಪ್ಪ, ಕಾರಜೋಳ, ಲಿಂಬಾವಳಿ, ಆರ್‌.ಅಶೋಕ್‌, ಶ್ರೀರಾಮುಲು, ಉಮೇಶ್‌ ಕತ್ತಿ, ಬಾಲಚಂದ್ರ ಜಾರಕಿಹೊಳಿ, ಸಿ.ಟಿ.ರವಿ, ಸುರೇಶ್‌ ಕುಮಾರ್‌, ರಾಮದಾಸ್‌, ಅಂಗಾರ, ಓಲೇಕಾರ್‌, ಶಿವನಗೌಡ, ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್‌ ಕುಮಾರ್‌, ಹಾಲಾಡಿ ಶ್ರೀನಿವಾಸ ಶೆಟ್ಟಿ, ಮಾಧುಸ್ವಾಮಿ ಮೊದಲಾದವರ ಹೆಸರು ಕೇಳಿಬಂದಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.