ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಖಚಿತ
Team Udayavani, Jan 5, 2023, 7:15 AM IST
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವುದು ಖಚಿತ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವೇಳೆಗಾಗಲೇ ಸಂಪುಟ ವಿಸ್ತರಣೆ ಆಗಬೇಕಿತ್ತು. ಇನ್ನೂ ಆಗಿಲ್ಲ, ಶೀಘ್ರ ಆಗಲಿದೆ ಎಂದು ಹೇಳಿದರು.
ನಳಿನ್ ಕುಮಾರ್ ಕಟೀಲು ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅರುಣ್ಸಿಂಗ್, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಮ್ಮ ಚುನಾವಣಾ ಅಜೆಂಡಾ ಸಿದ್ಧವಾಗಿದೆ. ಕಟೀಲ್ ಹೇಳಿಕೆ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಮಾತನಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ರಾಜ್ಯದ ಜನರು ಅದಕ್ಕೆ ಉತ್ತರಿಸುತ್ತಾರೆ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಮುಖ್ಯಮಂತ್ರಿ ಬಗ್ಗೆ ಆ ರೀತಿ ಹೇಳುವುದು ರಾಜ್ಯಕ್ಕೆ ಮಾಡುವ ಅವಮಾನ. ಕೀಳು ಸಂಸ್ಕೃತಿ ಕಾಂಗ್ರೆಸ್ನವರ ರಕ್ತದಲ್ಲೇ ಇದೆ ಎಂದು ಟೀಕಿಸಿದರು.