ಬೆಳ್ತಂಗಡಿ, ಚಿಕ್ಕಮಗಳೂರಿನಿಂದ ಪಾಕ್ಗೆ ಕರೆ!
ರಾಜ್ಯದಲ್ಲಿ ಹೈಅಲರ್ಟ್-ಭದ್ರತೆ ಹೆಚ್ಚಳ, ಪೊಲೀಸರಿಂದ ತೀವ್ರ ಗಸ್ತು
Team Udayavani, Aug 19, 2019, 5:55 AM IST
ಬೆಂಗಳೂರು: ರಾಜ್ಯದ ಮೇಲೆ ಉಗ್ರರ ಕರಿ ನೆರಳು ಬಿದ್ದಿದೆ ಎಂಬ ಕೇಂದ್ರ ಗುಪ್ತಚರ ಇಲಾಖೆ ಮಾಹಿತಿಗೆ ಪೂರಕವಾಗಿ ರಾಜ್ಯದಲ್ಲಿ 2 ಕಡೆ ಅಪರಿಚಿತ ವ್ಯಕ್ತಿಗಳು ಪಾಕಿಸ್ಥಾನಕ್ಕೆ ಸೆಟಲೈಟ್ ಫೋನ್ ಕರೆ ಮಾಡಿರುವುದು ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮತ್ತು ಚಿಕ್ಕ ಮಗಳೂರಿನಿಂದ ಈ ಕರೆಗಳು ಪಾಕಿಸ್ಥಾನಕ್ಕೆ ಹೋಗಿದೆ ಎನ್ನಲಾಗುತ್ತಿದೆ. ಒಬ್ಬನೇ ವ್ಯಕ್ತಿ ಬೆಳ್ತಂಗಡಿಯಿಂದ ಚಿಕ್ಕಮಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ಈ ಕರೆಗಳನ್ನು ಮಾಡಲಾಗಿದೆಯೇ ಅಥವಾ ಪ್ರತ್ಯೇಕ ವ್ಯಕ್ತಿಗಳು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ತೀವ್ರಗೊಂಡಿದೆ. ಇದರಿಂದಾಗಿ ಪೊಲೀಸರು ತಮ್ಮ ಮುಂಜಾಗ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ್ತಷ್ಟು ಭದ್ರತೆ ಹೆಚ್ಚಳ ಮಾಡಿಕೊಂಡಿರುವ ರಾಜ್ಯ ಪೊಲೀಸರು ರಾಜ್ಯದ ಎಲ್ಲ ಗಡಿ ಪ್ರದೇಶಗಳು, ಕರಾವಳಿ ಭಾಗಗಳು, ಬಸ್, ರೈಲು ನಿಲ್ದಾಣ, ವಿಮಾನ ನಿಲ್ದಾಣ, ಧಾರ್ಮಿಕ ಕೇಂದ್ರಗಳ ಮೇಲೆ ಹೆಚ್ಚಿನ ನಿಗಾ ವಹಿಸಿ ದ್ದಾರೆ. ಇದೇ ವೇಳೆ ರವಿವಾರ ಹೆಚ್ಚುವರಿ ಕೆಎಸ್ಆರ್ಪಿ ತುಕಡಿಗಳನ್ನು ರಾಜ್ಯಾದ್ಯಂತ ನಿಯೋಜಿಸಿ ಕೊಳ್ಳಲಾಗಿದೆ. ರಾಜ್ಯದ ಗಡಿಭಾಗದಲ್ಲಿ ಶಸ್ತ್ರಸಜ್ಜಿತ ಸಿಬಂದಿ ಜತೆ ಸ್ಥಳೀಯ ಪೊಲೀಸರು ಬರುವ ಮತ್ತು ಹೊರ ಹೋಗುವ ಪ್ರತಿ ಯೊಂದು ವಾಹನಗಳನ್ನು ತಪಾಸಣೆ ನಡೆಸ ಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ ವಶಕ್ಕೆ ಪಡೆದು ಅವರ ಪೂರ್ವಾಪರ ಮಾಹಿತಿ ಪಡೆಯಬೇಕು ಎಂದು ಸೂಚಿಸಲಾಗಿದೆ.
ಗಂಟೆಗೊಮ್ಮೆ ಮಾಹಿತಿ
ಖುದ್ದು ಜಿಲ್ಲಾ ವರಿಷ್ಠಾಧಿಕಾರಿಗಳು ಪ್ರತಿ ಗಂಟೆಗೊಮ್ಮೆ ತಮ್ಮ ಅಧೀನ ಅಧಿಕಾರಿಗಳಿಂದ ಭದ್ರತೆ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಸಾರ್ವ ಜನಿಕ ಸ್ಥಳಗಳಲ್ಲಿ ಸಮವಸ್ತ್ರದಲ್ಲಿ ಮಾತ್ರವಲ್ಲದೆ, ಮಫ್ತಿಯಲ್ಲಿ ಗಸ್ತು ತಿರುಗಬೇಕು. ಸಂಶಯ ಬಂದಲ್ಲಿ ತೀವ್ರ ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಹೀಗಾಗಿ ಪ್ರಮುಖ ಪ್ರವಾಸಿ ತಾಣಗಳು, ಜಲಾಶಯ ಗಳಲ್ಲಿ ನಿಗದಿಗಿಂತ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಮುಖವಾಗಿ ಬೆಂಗಳೂರಿನಲ್ಲಿಯೂ ಹೈಅಲರ್ಟ್ ಸೂಚಿಸಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ಹೆಚ್ಚಳಕ್ಕೆ ಸೂಚಿಸಿದ್ದಾರೆ. ಜತೆಗೆ ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಕಳುಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ವಿಶೇಷ ಭದ್ರತೆ ಪಡೆಗಳು, ಗರುಡ ಪಡೆಗಳು ತಮ್ಮ ವಾಹನಗಳಲ್ಲಿ ಮೆಟ್ರೋ, ರೈಲು ನಿಲ್ದಾಣ, ಬಸ್ ನಿಲ್ದಾಣಗಳಲ್ಲಿ ಗಸ್ತು ತಿರುಗುತ್ತಿದ್ದಾರೆ. ಇದೇ ವೇಳೆ ಪ್ರತಿ ಠಾಣೆಯ ಬೀಟ್ ಸಿಬಂದಿಗೆ ಹೆಚ್ಚು ನಿಗಾವಹಿಸುವಂತೆ ಸೂಚಿಸಲಾಗಿದೆ. ನಗರಕ್ಕೆ ಪ್ರವೇಶಿಸುವ ನಾಲ್ಕು ಕಡೆಗಳಲ್ಲೂ ವಾಹನ ತಪಾಸಣೆ ಕಾರ್ಯ ಮುಂದುವರಿದಿದೆ.
ಸೆಟಲೈಟ್ ಕರೆ ಸಮುದ್ರ
ಕಡೆಯಿಂದ ಬಂತೇ?
ಈ ಮಧ್ಯೆ ಚಿಕ್ಕಮಗಳೂರು ಮತ್ತು ದ.ಕ. ಜಿಲ್ಲೆಗೆ ಸಂಪರ್ಕ ಕಲ್ಪಿಸಿದ ಸೆಟಲೈಟ್ ಫೋನ್ ಕರೆ ಸಮುದ್ರ ಮಾರ್ಗದಿಂದ ಬಂದಿರುವ ಸಾಧ್ಯತೆ ಇದೆ ಎಂಬ ಮಾತು ಕೇಳಿ ಬಂದಿದೆ.
ಹಡಗಿನಲ್ಲಿ ಸಮುದ್ರ ಮಾರ್ಗದಲ್ಲಿ ಸಂಚರಿಸುವ ಸಂದರ್ಭ ನೆಟ್ವರ್ಕ್ ಸಮಸ್ಯೆಯಿಂದ ಏನಾದರೂ ಇಂತಹ ಗೊಂದಲ ಉಂಟಾಗಿದೆಯೇ ಎಂಬ ಕುರಿತೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಯಾವುದೇ ದೃಢೀಕರಣ ಪೊಲೀಸರ ಕಡೆಯಿಂದ ವ್ಯಕ್ತವಾಗಿಲ್ಲ.ಸೆಟಲೈಟ್ ಫೋನ್ ಕರೆ ಬಗ್ಗೆ ತಮಗೆ ಯಾವುದೇ ಮಾಹಿತಿ ಗೊತ್ತಾಗಿಲ್ಲ ಎಂದು ಮಂಗಳೂರಿನ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಎರಡು ಪ್ರತ್ಯೇಕ ಪ್ರಕರಣಗಳ ತನಿಖೆ
ಮಂಗಳೂರಿನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತನಿಖೆ ಚುರುಕುಗೊಳಿಸಲಾಗಿದೆ. ಬೆಳ್ತಂಗಡಿಯ ಗ್ರಾಮವೊಂದರ ಗಡಿ ಭಾಗದಿಂದ ಸೆಟಲೈಟ್ ಕರೆ ಮಾಡಿರುವುದನ್ನು ಗಂಭೀರ ವಾಗಿ ಪರಿಗಣಿಸಿರುವ ಪೊಲೀಸರು ಆ ಭಾಗದಲ್ಲಿ ತಪಾಸಣೆ ಕೈಗೊಂಡಿದ್ದಾರೆ. ಕರೆ ಮಾಡಿರುವ ವ್ಯಕ್ತಿ ಯಾರು ಎಂಬುದು ಗೊತ್ತಾಗಿಲ್ಲ. ಅನುಮಾನಾಸ್ಪದ ವ್ಯಕ್ತಿಗಳು ಗಡಿ ಭಾಗದಿಂದ ಸೆಟಲೈಟ್ ಕರೆ ಮಾಡಿ ಅನಂತರ ಪರಾರಿಯಾಗಿರುವ ಶಂಕೆ ಇದೆ. ಅವರು ಮುಂದೆ ಯಾವ ಕಡೆ ಹೋಗಿದ್ದಾರೆ ಎಂಬುದು ತಿಳಿದಿಲ್ಲ. ಹೀಗಾಗಿ ಗಡಿಭಾಗದಲ್ಲಿ ಕೇಂದ್ರ ಗುಪ್ತಚರ ದಳ, ರಾಜ್ಯ ಆಂತರಿಕ ಭದ್ರತಾ ದಳದ ಜತೆಗೆ ದಿಲ್ಲಿ ಮತ್ತು ಬೆಂಗ ಳೂರು ಎನ್ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಚಿಕ್ಕಮಗಳೂರಿನಲ್ಲಿಯೂ ಕಿಡಿಗೇಡಿಗಳು ಸೆಟಲೈಟ್ ಕರೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಖಚಿತವಾಗುತ್ತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ