2006ರ ಬೋಟ್ ದುರಂತದ ವಾಟ್ಸಪ್ ಸ್ಟೇಟಸ್; ಯುವ ಪತ್ರಕರ್ತನ ವಿರುದ್ಧ ಎಫ್ ಐಆರ್ ದಾಖಲು
ಎಫ್ ಐಆರ್ ಹಿಂಪಡೆಯುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದಾರೆ.
Team Udayavani, Jun 8, 2021, 1:05 PM IST
ಶ್ರೀನಗರ್: 2006ರಲ್ಲಿ ನಡೆದಿದ್ದ ಬೋಟ್ ದುರಂತದ 15ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಯುವ ಪತ್ರಕರ್ತನೊಬ್ಬ ವಾಟ್ಸಪ್ ಸ್ಟೇಟಸ್ ಹಾಕಿದ್ದು ತೊಂದರೆಯಲ್ಲಿ ಸಿಲುಕುವಂತಾಗಿದೆ. ಅಂದು ಬೋಟ್ ದುರಂತದಲ್ಲಿ 20 ಶಾಲಾ ಮಕ್ಕಳು ಸಾವಿಗೀಡಾಗಿದ್ದರು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಈಶ್ವರಮಂಗಲ: ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ಆತ್ಮಹತ್ಯೆ
ಬಂಡಿಪೋರಾ ಜಿಲ್ಲೆಯ ಸ್ಥಳೀಯ ಪತ್ರಿಕೆಯ ವರದಿಗಾರ ಸಾಜಿದ್ ರೈನಾ(23ವರ್ಷ) ಮೇ 30ರಂದು ವಾಲೂರು ಬೋಟ್ ದುರಂತಕ್ಕೆ ಸಂಬಂಧಪಟ್ಟಂತೆ “ವಾಲೂರು ದುರಂತದ ಹುತಾತ್ಮರು ಎಂದು ವಾಟ್ಸಪ್ ಸ್ಟೇಟಸ್ ಹಾಕಿದ್ದು, ಇದರಿಂದ ಶಾಂತಿ ಭಂಗ, ಗಲಭೆಗೆ ಎಡೆ ಮಾಡಿಕೊಡುವ ಸಾಧ್ಯತೆ ಇದ್ದಿರುವುದಾಗಿ ಆರೋಪಿಸಿ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಎನ್ ಡಿಟಿವಿ ವರದಿ ತಿಳಿಸಿದೆ.
ಎಫ್ ಐಆರ್ ಹಿಂಪಡೆಯುವಂತೆ ಬೇಡಿಕೊಂಡೆ…
“ನನ್ನ ವಿರುದ್ಧ ದಾಖಲಿಸಿದ್ದ ಎಫ್ ಐಆರ್ ಹಿಂಪಡೆಯುವಂತೆ ಪೊಲೀಸರಲ್ಲಿ ಬೇಡಿಕೊಂಡೆ. ಇದೊಂದು ಬೋಟ್ ದುರಂತದಲ್ಲಿ ಸಾವನ್ನಪ್ಪಿರುವ 20 ಶಾಲಾ ವಿದ್ಯಾರ್ಥಿಗಳ ಘಟನೆಯನ್ನು ನೆನಪಿಸುವ ವಾಟ್ಸಪ್ ಸ್ಟೇಟಸ್ ಆಗಿದೆ. ಆದರೆ ಪೊಲೀಸರು ನನ್ನ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ ಎಂದು ರೈನಾ ತಿಳಿಸಿರುವುದಾಗಿ ವರದಿ ವಿವರಿಸಿದೆ.
ಏತನ್ಮಧ್ಯೆ ಯುವ ಪತ್ರಕರ್ತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದನ್ನು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ. ವಾಟ್ಸಪ್ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡಿಪೋರಾ ಪೊಲೀಸ್ ಠಾಣೆಯಲ್ಲಿ ಸಾಜಿದ್ ರೈನಾ ಎಂಬಾತನ ವಿರುದ್ಧ ಎಫ್ ಐಆರ್ ದಾಖಲಿಸಿದ್ದೇವೆ. ಯಾವ ಉದ್ದೇಶದಿಂದ ಈ ಫೋಟೊ ಮತ್ತು ಕಂಟೆಂಟ್ ಹಾಕಲಾಗಿದೆ ಎಂಬ ಬಗ್ಗೆ ತನಿಖೆ ನಡೆಸುವುದು ನಮ್ಮ ಉದ್ದೇಶವಾಗಿದೆ ಎಂದು ಜೂನ್ 4ರಂದು ಪೊಲೀಸರು ಟ್ವೀಟ್ ಮಾಡಿರುವುದಾಗಿ ವರದಿ ತಿಳಿಸಿದೆ.
ಈಗಾಗಲೇ ಪೊಲೀಸರು ಎರಡು ಬಾರಿ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಪ್ರಕರಣ ದಾಖಲಾದ ಕೂಡಲೇ ನಾನು ವಾಟ್ಸಪ್ ಸ್ಟೇಟಸ್ ಅನ್ನು ಡಿಲೀಟ್ ಮಾಡಿರುವುದಾಗಿ ಸಾಜಿದ್ ತಿಳಿಸಿದ್ದು, ಅಲ್ಲದೇ ತನ್ನ ವಿರುದ್ಧ ದಾಖಲಿಸಿದ ಎಫ್ ಐಆರ್ ಹಿಂಪಡೆಯುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ಭರವಸೆ ನೀಡಿದ್ದಾರೆ. ನನ್ನ ಭವಿಷ್ಯ ಮತ್ತು ಉದ್ಯೋಗವನ್ನು ಗಮನದಲ್ಲಿರಿಸಿಕೊಂಡು ಎಫ್ ಐಆರ್ ಹಿಂಪಡೆಯಲಿದ್ದಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ಸಾಜಿದ್ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ