Financial crisis; ದಿವಾಳಿಯಂಚಿನಲ್ಲಿರುವ ಪಾಕ್…‌ಬಂದರು ಸೇರಿ ಸಾರ್ವಜನಿಕ ಆಸ್ತಿ ಮಾರಾಟ

ಪಾಕಿಸ್ತಾನ ಕಳೆದ ವರ್ಷವೇ ಸಾರ್ವಜನಿಕ ಆಸ್ತಿಗಳನ್ನು ಅಡಮಾನ ಇಡಲು ಆಫರ್‌ ನೀಡಿತ್ತು.

Team Udayavani, Jul 1, 2023, 2:45 PM IST

Financial crisis; ದಿವಾಳಿಯಂಚಿನಲ್ಲಿರುವ ಪಾಕ್…‌ ಬಂದರು ಸೇರಿ ಸಾರ್ವಜನಿಕ ಆಸ್ತಿ ಮಾರಾಟ,

ಇಸ್ಲಾಮಾಬಾದ್:‌ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದಿವಾಳಿಯಂಚಿಗೆ ಸಿಲುಕಿರುವ ಪಾಕಿಸ್ತಾನ ಇದೀಗ ವಿದೇಶಿ ಸಾಲವನ್ನು ತೀರಿಸಲಾಗದ ಪರಿಣಾಮ ರಾಜಧಾನಿ ಇಸ್ಲಾಮಾಬಾದ್‌ ನಲ್ಲಿರುವ ಸಾರ್ವಜನಿಕ ಆಸ್ತಿಗಳನ್ನು ಮೂರನೇ ದೇಶಗಳಿಗೆ ಮಾರಾಟ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.

ಈ ನಿಟ್ಟಿನಲ್ಲಿ ಪಾಕಿಸ್ತಾನ ಯುಎಇ ಮೂಲದ ಕಂಪನಿಗೆ 220 ಮಿಲಿಯನ್‌ ಡಾಲರ್‌ ಗೆ ಕರಾಚಿ ಬಂದರಿನಲ್ಲಿರುವ 9 ಹಡಗು ನಿಲ್ದಾಣವನ್ನು ಗುತ್ತಿಗೆಗೆ ನೀಡಿದೆ. 50 ವರ್ಷಗಳ ಕಾಲದ ರಿಯಾಯ್ತಿ ಒಪ್ಪಂದದ ಮೇರೆಗೆ ಹಡಗು ನಿಲ್ದಾಣವನ್ನು ಗುತ್ತಿಗೆಗೆ ನೀಡಲಾಗಿದ್ದು, ಇದನ್ನು ನೂತನವಾಗಿ ರಚಿಸಲಾಗಿದ್ದ ಕರಾಚಿ ಗೇಟ್‌ ವೇ ಟರ್ಮಿನಲ್‌ ಲಿಮಿಟೆಡ್‌ (KGTL) ಬಂದರು ಅಭಿವೃದ್ಧಿ, ಹಡಗು ಸಂಚಾರ, ಸಾಗಣೆಯ ಕಾರ್ಯವನ್ನು ನಿರ್ವಹಿಸಲಿದೆ.

ಆರ್ಥಿಕ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನ ಕಳೆದ ವರ್ಷವೇ ಸಾರ್ವಜನಿಕ ಆಸ್ತಿಗಳನ್ನು ಅಡಮಾನ ಇಡಲು ಆಫರ್‌ ನೀಡಿತ್ತು. ಆದರೆ ಯಾವ ದೇಶವೂ ಗುತ್ತಿಗೆ ಪಡೆಯಲು ಮುಂದಾಗಿಲ್ಲವಾಗಿತ್ತು. ಇದೀಗ ಸ್ನೇಹಿತ ರಾಷ್ಟ್ರವಾದ ಯುಎಇ ಕರಾಚಿ ಬಂದರನ್ನು ಗುತ್ತಿಗೆಗೆ ಪಡೆಯಲು ಮುಂದಾಗುವ ಮೂಲಕ ವಿದೇಶಿ ಅಗತ್ಯತೆಯನ್ನು ಪೂರೈಸಲು ನೆರವಾದಂತಾಗಿದೆ.

ಅದೇ ರೀತಿ ಇಸ್ಲಾಮಾಬಾದ್‌ ಇದೀಗ ನ್ಯೂ ಇಸ್ಲಾಮಾಬಾದ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುತ್ತಿಗೆಗೆ ನೀಡಲು ನಿರ್ಧರಿಸಿದೆ. ಏತನ್ಮಧ್ಯೆ ಪಾಕಿಸ್ತಾನ ಇಂಟರ್‌ ನ್ಯಾಷನಲ್‌ ಏರ್‌ ಲೈನ್ಸ್‌ ಬಾಕಿ ಹಣವನ್ನು ಪಾವತಿಸದೇ ಇದ್ದ ಪರಿಣಾಮ ಕರಾಚಿ ಮತ್ತು ಲಾಹೋರ್‌ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುತ್ತಿಗೆ ನೀಡುವಲ್ಲಿ ಸಂಕಷ್ಟ ಅನುಭವಿಸಿತ್ತು ಎಂದು ವರದಿ ತಿಳಿಸಿದೆ.

ಐಎಂಎಫ್‌ ನೆರವು:

ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)‌ ನೆರವಿಗೆ ಧಾವಿಸಿದ್ದು, 3 ಶತಕೋಟಿ ಡಾಲರ್‌ ನಷ್ಟು ನೆರವಾಗಿ ನೀಡಲು ಮುಂದಾಗಿದೆ. ಇದರಿಂದಾಗಿ ಪಾಕಿಸ್ತಾನದ ಆರ್ಥಿಕ ಸ್ಥಿರೀಕರಣಕ್ಕೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.