ಕೇಂದ್ರದ ಪರವಾನಿಗೆ ಮುಕ್ತಿ ಪ್ರಸ್ತಾವನೆಗೆ ರಾಜ್ಯ ನಕಾರ

22 ಆಸನ ಮೇಲ್ಪಟ್ಟ ಎಸಿ ಬಸ್‌ಗಳಿಗೆ ಪರವಾನಿಗೆ ಕಡ್ಡಾಯ ನಿಯಮ ರದ್ದತಿಗೆ ಮುಂದಾದ ಕೇಂದ್ರ

Team Udayavani, Feb 26, 2020, 6:15 AM IST

state-govt

ಬೆಂಗಳೂರು: ಖಾಸಗಿ ಸಾರಿಗೆ ಸೇವೆಗೆ ಪೂರಕ ಮತ್ತು ಸರಕಾರಿ ಸಾರಿಗೆ ಸಂಸ್ಥೆಗಳಿಗೆ ಮಾರಕವಾದ ಐಷಾರಾಮಿ ಬಸ್‌ಗಳನ್ನು “ಪರವಾನಿಗೆ ಮುಕ್ತ’ಗೊಳಿಸುವ ಕೇಂದ್ರದ ಪ್ರಸ್ತಾವನೆಗೆ ರಾಜ್ಯ ಸರಕಾರ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ತನ್ನ ಸಮ್ಮತಿ ಇಲ್ಲ ಎಂದು ನಿಷ್ಠುರವಾಗಿ ಪ್ರತಿಕ್ರಿಯಿಸಿದೆ.

22 ಆಸನಕ್ಕಿಂತ ಹೆಚ್ಚಿನ ಎಸಿ ಡಿಲಕ್ಸ್‌ ಬಸ್‌ಗಳ ಕಾರ್ಯಾಚರಣೆಗೆ ಪ್ರಸ್ತುತ ಸಾರಿಗೆ ಇಲಾಖೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯ. ಆದರೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ನಗರಗಳಲ್ಲಿ ಕೈಗೆಟಕುವ ಮತ್ತು ಆರಾಮದಾಯಕ ಸಾರಿಗೆ ಸೇವೆ ಕಲ್ಪಿಸುವ ಸಲುವಾಗಿ ಇಂತಹ ಬಸ್‌ಗಳನ್ನು ಪರವಾನಿಗೆಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಉದ್ದೇಶಿಸಿದ್ದು, ಪ್ರಸ್ತಾವನೆ ಯನ್ನು ಎಲ್ಲ ರಾಜ್ಯ ಸಾರಿಗೆ ಇಲಾಖೆಗಳ ಮುಂದಿಟ್ಟಿತ್ತು. ಆದರೆ ಇದನ್ನು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ತಳ್ಳಿಹಾಕಿದೆ. ಈ ಕುರಿತು ಕೇಂದ್ರದ ಸಚಿವಾಲಯಕ್ಕೆ ಈಚೆಗೆ ಪತ್ರ ಬರೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ರಾಜ್ಯದ ಅಸಮ್ಮತಿ: ಆಯುಕ್ತರು
ಈಗಾಗಲೇ ರಸ್ತೆಗಿಳಿದ ಮತ್ತು ಮುಂದೆ ಇಳಿಯಲಿರುವ 22 ಆಸನಗಳಿಗಿಂತ ಹೆಚ್ಚಿನ ಸಾಮರ್ಥ್ಯದ ಎಸಿ ಡಿಲಕ್ಸ್‌ ಬಸ್‌ಗಳನ್ನು ಪರವಾನಿಗೆಯಿಂದ ಮುಕ್ತಗೊಳಿಸುವ ಕರಡು ಪ್ರಸ್ತಾ ವನೆಗೆ 30 ದಿನಗಳಲ್ಲಿ ಅಭಿಪ್ರಾಯ ತಿಳಿಸುವಂತೆ ಸೂಚಿಸಲಾಗಿತ್ತು. ಇದು ಖಾಸಗಿ ಸಾರಿಗೆಯನ್ನು ಉತ್ತೇಜಿಸುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಅಸಮ್ಮತಿ ಸೂಚಿಸಲಾಗಿದೆ ಎಂದು ಸಾರಿಗೆ ಆಯುಕ್ತ ಎನ್‌. ಶಿವಕುಮಾರ್‌ “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ತೆರಿಗೆ ಗೊಂದಲ
ರಾಜ್ಯದ ಮೊದಲ ಮತ್ತು ಎರಡನೇ ಹಂತದ ನಗರಗಳಲ್ಲಿ 22 ಸೀಟುಗಳಿಗಿಂತ ಹೆಚ್ಚು ಸಾಮರ್ಥ್ಯದ ಲಕ್ಷಕ್ಕೂ ಅಧಿಕ ಎಸಿ ವಾಹನಗಳಿವೆ. ಅವೆಲ್ಲವುಗಳನ್ನು ಪರವಾನಿಗೆಯಿಂದ ಮುಕ್ತಗೊಳಿಸಿದರೆ ತೆರಿಗೆಗೆ ಕತ್ತರಿ ಬೀಳುವುದು ಒಂದೆಡೆಯಾದರೆ, ಯಾವ ಮಾದರಿಯ ತೆರಿಗೆ ವಿಧಿಸಬೇಕು ಎನ್ನುವುದು ಗೊಂದಲವಾಗಲಿದೆ. ಇದಕ್ಕಾಗಿ ಕೇಂದ್ರ ಮೋಟಾರು ವಾಹನ ಕಾಯ್ದೆ ಜತೆಗೆ ಕರ್ನಾಟಕ ಮೋಟಾರು ವಾಹನ ಕಾಯ್ದೆಗೂ ತಿದ್ದುಪಡಿ ತರಬೇಕಾಗುತ್ತದೆ ಎಂದು ಸಾರಿಗೆ ಇಲಾಖೆಯ ಉನ್ನತ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

ಬಿಎಂಟಿಸಿಗೆ ದೊಡ್ಡ ಪೆಟ್ಟು
ಈ ಕರಡು ಅಧಿಸೂಚನೆಗೆ ಒಂದು ವೇಳೆ ಅಂತಿಮ ಆದೇಶ ಹೊರಡಿಸಿದರೆ, ಮೊದಲ ಪೆಟ್ಟು ನಿತ್ಯ 40 ಲಕ್ಷಕ್ಕೂ ಅಧಿಕ ಪ್ರಯಾಣಿಕರನ್ನು ಹೊತ್ತೂಯ್ಯುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ ಬೀಳಲಿದೆ. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂಸ್ಥೆಗೆ ಇದು ನುಂಗಲಾರದ ತುತ್ತಾಗಲಿದೆ ಎನ್ನಲಾಗಿದೆ.

ಕೇಂದ್ರದ ಪ್ರಸ್ತಾವನೆ ಏನು?
– 22 ಆಸನಗಳಿಗಿಂತ ಮೇಲ್ಪಟ್ಟ ಎಸಿ ಡಿಲಕ್ಸ್‌ ಬಸ್‌ಗಳು ಪರವಾನಿಗೆಯಿಂದ ಮುಕ್ತ
– ಮೋಟಾರು ವಾಹನ ಕಾಯ್ದೆ 1988ರ ಸೆಕ್ಷನ್‌ 66ರ ಉಪನಿಯಮ 1ರಲ್ಲಿ ಈ ಅವಕಾಶ
– ನಗರಗಳಲ್ಲಿ ಸಂಚರಿಸುವ ಎಸಿ ಡಿಲಕ್ಸ್‌ ಬಸ್‌ಗಳಿಗೆ ಪರ್ಮಿಟ್‌ನಿಂದ ಮುಕ್ತಿ
– ನಗರದಲ್ಲಿ ಜನರಿಗೆ ಕೈಗೆಟಕುವ ಮತ್ತು ಆರಾಮದಾಯಕ ನಗರ ಸಾರಿಗೆ ಸೇವೆ ಲಭ್ಯ

ರಾಜ್ಯದ ವಿರೋಧವೇನು?
– ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿ ನಾಲ್ಕೂ ಸಾರಿಗೆ ಸಂಸ್ಥೆಗಳಿಗೆ ಕೊಡಲಿ ಪೆಟ್ಟು
– ಉದ್ದೇಶಿತ ಪ್ರಸ್ತಾವನೆಯು ಖಾಸಗಿ ಸಾರಿಗೆ ಸೇವೆಗಳಿಗೆ ಪೂರಕ
– ಖಾಸಗಿ ಬಸ್‌ಗಳ ವಿಪರೀತ ಹಾವಳಿ ಇದೆ
– ಪರವಾನಿಗೆಯಿಂದ ಮುಕ್ತಗೊಳಿಸುವುದು ಸಮಂಜಸವಲ್ಲ
– ಈ ಕ್ರಮ ದಿಂದ ಪ್ರಯಾಣಿಕರ ಮೇಲೂ ಅಡ್ಡ ಪರಿಣಾಮ

ಟಾಪ್ ನ್ಯೂಸ್

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.