ಕರ್ನಾಟಕ ನೆರೆ ಪರಿಸ್ಥಿತಿ : ಕೇಂದ್ರದಿಂದ 1200 ಕೋಟಿ ಪರಿಹಾರ ಪ್ರಕಟ
Team Udayavani, Oct 4, 2019, 9:17 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಭೀಕರ ನೆರೆಗೆ ತುತ್ತಾಗಿದ್ದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೆರೆ ಪರಿಹಾರ ಕಾರ್ಯಕ್ರಮಗಳನ್ನು ಚುರುಕುಗೊಳಿಸಲು ಕೇಂದ್ರ ಸರಕಾರವು ಮಧ್ಯಂತರ ಪರಿಹಾರ ಧನವಾಗಿ 1200 ಕೋಟಿ ರೂಪಾಯಿಗಳನ್ನು ಇಂದು ಘೋಷಣೆ ಮಾಡಿದೆ.
ವಿಚಿತ್ರವೆಂದರೆ ಈ ಬಾರಿ ಕರ್ನಾಟಕದಲ್ಲಿ ಸಂಭವಿಸಿದ್ದ ಭೀಕರ ನೆರೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಜೀವ ಮತ್ತು ಸ್ವತ್ತು ಹಾನಿ ಸಂಭವಿಸಿತ್ತು. ನೆರೆ ಪರಿಸ್ಥಿತಿ ಅಧ್ಯಯನ ಮಾಡಿದ್ದ ಕೇಂದ್ರದ ತಂಡವೂ ಸಹ ಮಳೆ ಹಾನಿ ಕುರಿತಾಗಿ ಕೇಂದ್ರಕ್ಕೆ ವರದಿ ಸಲ್ಲಿಸಿತ್ತು. ನೆರೆಯಿಂದಾಗಿ ಒಟ್ಟಾರೆ 38,000 ಕೋಟಿ ರೂಪಾಯಿಗಳ ಹಾನಿ ಆಗಿದೆ ಎಂದು ಅಂದಾಜಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿತ್ತು.
ರಾಜ್ಯ ಮತ್ತು ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷವೇ ಅಧಿಕಾರದಲ್ಲಿದ್ದರೂ ಕರ್ನಾಟಕದ ನೆರೆಪೀಡಿತ ಪ್ರದೇಶಗಳ ಪುನರ್ ನಿರ್ಮಾಣಕ್ಕಾಗಿ ಕೇಂದ್ರಸರಕಾರವು ಸಾಕಷ್ಟು ಪರಿಹಾರ ಮೊತ್ತವನ್ನು ನೀಡಿಲ್ಲ ಹಾಗೂ ರಾಜ್ಯದ ಪಾಲನ್ನು ನೀಡುವಲ್ಲಿ ಬೇಕೆಂದೆ ವಿಳಂಬ ನೀತಿಯನ್ನು ಅನುಸರಿಸುತ್ತಿದೆ ಎಂದು ಕಾಂಗ್ರೆಸ್, ಜೆಡಿಎಸ್ ಮಾತ್ರವಲ್ಲದೇ ಕೆಲವು ಬಿಜೆಪಿ ಶಾಸಕರೇ ಬಹಿರಂಗ ಅಸಮಧಾನ ತೋಡಿಕೊಂಡಿದ್ದರು.
ಮಾತ್ರವಲ್ಲದೇ ಈ ಬಾರಿಯ ಕರ್ನಾಟಕ ನೆರೆ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕೆಂಬ ಕೂಗೂ ಸಹ ಕೇಳಿಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ