ತಾಲಿಬಾನ್ ಪ್ರತಿನಿಧಿಗಳ ಜತೆಗೆ ಕೇಂದ್ರ ಸರಕಾರದ ಮಾತುಕತೆ
Team Udayavani, Jun 23, 2021, 10:00 AM IST
ವಾಷಿಂಗ್ಟನ್: ಅಫ್ಘಾನಿಸ್ಥಾನದಲ್ಲಿರುವ ತಾಲಿಬಾನ್ ಉಗ್ರ ಸಂಘಟನೆಯ ಪ್ರತಿನಿಧಿಗಳ ಜತೆಗೆ ಭಾರತ ಸರಕಾರ ಮಾತುಕತೆ ನಡೆಸಿದೆ. ಈ ಬಗ್ಗೆ ಕತಾರ್ ಸರಕಾರದ ವಿಶೇಷ ಪ್ರತಿನಿಧಿ ಮುತಾಲಿಕ್ ಬಿನ್ ಮಜೀದ್ ಅಲ್ ಖತಾನಿ ಮಾಹಿತಿ ನೀಡಿದ್ದಾರೆ.
ವಾಷಿಂಗ್ಟನ್ ಡಿ.ಸಿ.ಯಲ್ಲಿರುವ ಅರಬ್ ಸೆಂಟರ್ ಅಫ್ಘಾನಿಸ್ಥಾನದ ಶಾಂತಿ ಪ್ರಕ್ರಿಯೆ ಬಗ್ಗೆ ಆಯೋಜಿಸಿದ್ದ ಆನ್ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಇದನ್ನು ಪ್ರಕಟಿಸಿದ್ದಾರೆ. ಆಫ್ಘಾನಿಸ್ಥಾನದಲ್ಲಿ ಭಾರತ ಹೊಂದಿರುವ ಭಾಗೀದಾರಿಕೆ ಬಗ್ಗೆ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಅಫ್ಘಾನಿಸ್ಥಾನದಲ್ಲಿ ಅಮೆರಿಕದ ಪ್ರತಿನಿಧಿ ಝಲ್ಮೆ„ ಖಾಲಿಝಾದ್ “ಶಾಂತಿ ಸ್ಥಾಪನೆಗಾಗಿ ಎಲ್ಲರೂ ವಿವಿಧ ರೀತಿಯಲ್ಲಿ ಪ್ರಯತ್ನಿಸಬೇಕಾಗಿದೆ. ಅದುವೇ ಈಗಿನ ಅಗತ್ಯತೆ’ ಎಂದರು.
ಅಫ್ಘಾನ್ ನಿಂದ ಅಮೆರಿಕದ ಸೇನೆ ವಾಪಸಾಗುವ ಪ್ರಕ್ರಿಯೆ ನಡೆದಿರುವಂತೆಯೇ ಕುವೈಟ್ ಮತ್ತು ಕೀನ್ಯಾ ಪ್ರವಾಸಕ್ಕಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ದೋಹಾಕ್ಕೆ 2 ಬಾರಿ ಭೇಟಿ ನೀಡಿದ್ದರು. ಅಲ್ಲಿ ಅಫ್ಘಾನಿಸ್ಥಾನದಲ್ಲಿ ಅಮೆರಿಕದ ಪ್ರತಿನಿಧಿ ಝಲ್ಮೆ„ ಖಾಲಿಝಾದ್ ಅವರನ್ನೂ ಭೇಟಿಯಾಗಿದ್ದರು. ಕತಾರ್ ಸರಕಾರದ ಪ್ರತಿನಿಧಿಯ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಕೇಂದ್ರ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ