
ಕೇಂದ್ರದಿಂದ ಕರ್ನಾಟಕಕ್ಕೆ ʻಹೆದ್ದಾರಿʼ ಭಾಗ್ಯ
ಉತ್ತರ ಕರ್ನಾಟಕ, ಮೈಸೂರು ಭಾಗಕ್ಕೆ ಕೇಂದ್ರದಿಂದ ಬಂಪರ್ ಗಿಫ್ಟ್
Team Udayavani, Feb 9, 2023, 2:04 PM IST

ನವದೆಹಲಿ: ಸದ್ಯದಲ್ಲೇ ವಿಧಾನಸಭೆ ಚುನಾವಣೆಗೆ ಸಾಕ್ಷಿಯಾಗಲಿರುವ ಕರ್ನಾಟಕದ ವಿವಿಧ ಭಾಗಗಳಿಗೆ ಕೇಂದ್ರ ಸಾರಿಗೆ ಸಚಿವಾಲಯ ಹಲವಾರು ಹೆದ್ದಾರಿಗಳ ನಿರ್ಮಾಣಕ್ಕೆ ಅನುಮೋದನೆ ನೀಡಿದೆ.
ಉತ್ತರ ಕರ್ನಾಟಕ ಮತ್ತು ಮೈಸೂರು ಭಾಗದ ಹೆದ್ದಾರಿಗಳು ಅಭಿವೃದ್ಧಿಯಾಗಲಿವೆ. ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೇ ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕನಮಾಡಿ-ಬಿಜ್ಜರಗಿ-ತಿಕೋಟಾಸಂಪರ್ಕ ಮಾಡುವ ಎನ್ ಎಚ್ 166ಇ ಹೆದ್ದಾರಿ ವಿಸ್ತರಣೆಗಾಗಿ 196.05 ಕೋಟಿ ರೂ.ಗಳ ಅನುಮೋದನೆ ನೀಡಲಾಗಿದೆ.
ಹಾಗೆಯೇ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಯ ಎನ್ಎಚ್ 548 ಬಿ ನಲ್ಲಿರುವ ಮುರ್ರಮ್ನಿಂದ ವಿಜಯಪುರದ ಐಬಿ ವೃತ್ತದವರೆಗಿನ ರಸ್ತೆ ವಿಸ್ತರಣೆಗಾಗಿ 957.09 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಕೊಪ್ಪಳ-ಗದಗ ಜಿಲ್ಲೆಯ ಭಾನಾಪುರ ಗದ್ದನಕೇರಿ ವಲಯದ ಎನ್ ಎಚ್ 367ರಲ್ಲಿ ಬರುವ ಕುಕುನೂರ್, ಯೆಲಬುರ್ಗಾ, ಗಜೇಂದ್ರಗಡದಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 333.96 ಕೋಟಿ ರೂ.
ಇದೇ ವಲ ಯದ ಸರ್ಜಾಪುರದಿಂದ ಪಟ್ಟದಕಲ್ಲಿಗೆ ತೆರಳುವ ರಸ್ತೆ ವಿಸ್ತರಣೆಗಾಗಿ 445.62 ಕೋಟಿ ರೂ. ನೀಡಲು ಹೆದ್ದಾರಿ ಸಚಿವಾಲಯ ಒಪ್ಪಿಗೆ ನೀಡಿದೆ. ಇನ್ನು ಮೈಸೂರಿನಿಂದ ಕುಶಾಲ ನಗರದ ವರೆಗೆ ನಾಲ್ಕು ಪಥದ ರಸ್ತೆ ನಿರ್ಮಾಣಕ್ಕಾಗಿ 1,649.25 ಕೋಟಿ ರೂ. ಅನುದಾನ ಒದಗಿಸಲು ನಿರ್ಧರಿಸಲಾಗಿದೆ. ಕುಶಾಲನಗರ ಬಳಿ ಇರುವ ಗುಡ್ಡೆ ಹೊಸೂರಿನಿಂದ ಮೈಸೂರು ಬಳಿ ಇರುವ ಇಲವಾಲ-ಕೆ.ಆರ್. ನಗರ ಜಂಕ್ಷನ್ಗೆ ಸಂಪರ್ಕಿಸುತ್ತದೆ.
📢 Karnataka
👉 In Karnataka, Rs. 196.05 Cr has been sanctioned for widening the 2-Lane of Kanamadi – Bijjaragi – Tikota section (Maharashtra – Karnataka Border)…
— Nitin Gadkari (@nitin_gadkari) February 8, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ರಾಜಕೀಯ ವಿವಾದ; ಮೊಸರು ಪ್ಯಾಕೆಟ್ಗಳ ಮೇಲೆ ಪ್ರಾದೇಶಿಕ ಹೆಸರು!

ಜೋಸ್ ಆಲುಕ್ಕಾಸ್ನ ಪ್ಯಾನ್ ಇಂಡಿಯಾ ಬ್ರಾಂಡ್ ಅಂಬಾಸಿಡರ್ ಆಗಿ ಆರ್. ಮಾಧವನ್ ಆಯ್ಕೆ

ರಾಮನವಮಿ 2023: ಬಾವಿ ಮೇಲಿನ ಸಿಮೆಂಟ್ ಹಾಸು ಕುಸಿತ; ಬಾವಿಯೊಳಗೆ ಬಿದ್ದ 25 ಭಕ್ತರು…
MUST WATCH
ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!