ಕೋವಿಡ್ನಿಂದಾಗಿ ಚೀನಾದಿಂದ ಭಾರತಕ್ಕೆ ಬಂದರೂ ಸೋಂಕಿಗೆ ಬಲಿಯಾದ ಸಂಶೋಧಕ
Team Udayavani, May 23, 2021, 8:37 PM IST
ಚಾಮರಾಜನಗರ: ಚೀನಾದಲ್ಲಿ ಕೋವಿಡ್ ಕಾಣಿಸಿಕೊಂಡ ಕಾರಣ 2019ರಲ್ಲಿ ಭಾರತಕ್ಕೆ ಮರಳಿದ್ದ ಹಿರಿಯ ಸಂಶೋಧಕರೋರ್ವರು ಕೋವಿಡ್ನಿಂದಾಗಿಯೇ ಮೃತಪಟ್ಟಿರುವ ವಿಪರ್ಯಾಸದ ಘಟನೆ ಜಿಲ್ಲೆಯ ಹನೂರು ತಾಲೂಕಿನ ಗುಂಡಾಪುರದಲ್ಲಿ ನಡೆದಿದೆ.
ಗುಂಡಾಪುರ ಗ್ರಾಮದ ಸೆಲ್ವನಾಯಕ್ (36) ಮೃತಪಟ್ಟವರು. ಇವರಿಗೆ 15 ದಿನಗಳ ಹಿಂದೆ ಕೋವಿಡ್ ಲಕ್ಷಣಗಳು ಕಾಣಿಸಿಕೊಂಡಿತ್ತು. ಹೋಂ ಐಸೋಲೇಷನ್ ನಲ್ಲಿದ್ದರು. ವಾರದ ಬಳಿಕ ತೀವ್ರ ರೋಗ ಲಕ್ಷಣಗಳು ಕಾಣಿಸಿಕೊಂಡ ಕಾರಣ ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾರೆ. ಮೃತರು ತಂದೆ ತಾಯಿ, ಪತ್ನಿ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಇದನ್ನೂ ಓದಿ :Airforce Test Pilot ಪದವೀಧರೆಯಾದ ಮೊದಲ ಭಾರತೀಯ ಮಹಿಳೆ: ಚಾ.ನಗರ ಜಿಲ್ಲೆಯ ಆಶ್ರಿತಾ ಒಲೇಟಿ
ಸೆಲ್ವ ನಾಯಕ್ ಅವರು, ಚೀನಾದ ಚೋಂಗ್ಕ್ವಿಂಗ್ ನಲ್ಲಿರುವ ಸೌತ್ವೆಸ್ಟ್ ವಿಶ್ವವಿದ್ಯಾಲಯದಲ್ಲಿ ಹಿರಿಯ ಸಂಶೋಧಕ ಸಹಾಯಕರಾಗಿ ನಾಲ್ಕು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. 2019ರ ಡಿಸೆಂಬರ್ನಲ್ಲಿ ಚೀನಾದಲ್ಲಿ ಕೊರೊನಾ ವೈರಸ್ ಕಾಣಸಿಕೊಂಡ ಕಾರಣ, ಭಾರತಕ್ಕೆ ಮರಳಿ, ಸ್ವಗ್ರಾಮ ಹನೂರು ತಾಲೂಕು ಗುಂಡಾಪುರದಲ್ಲಿದ್ದರು. ಕೋವಿಡ್ ಮೊತ್ತ ಮೊದಲ ಬಾರಿಗೆ ಚೀನಾದಲ್ಲಿ ಕಾಣಿಸಿಕೊಂಡ ಕಾರಣ ಅಲ್ಲಿಂದ ಭಾರತಕ್ಕೆ ಬಂದರೂ, ಎರಡನೇ ಅಲೆ ಸಂದರ್ಭದಲ್ಲಿ ಅವರು ಕೋವಿಡ್ಗೇ ಬಲಿಯಾಗಿದ್ದು ವಿಪರ್ಯಾಸ.
ಸೆಲ್ವ ನಾಯಕ್ ಅವರ ನಿಧನಕ್ಕೆ ಜಿಲ್ಲಾ ಲಂಬಾಣಿ ನೌಕರರ ಬಳಗದವರು ಹಾಗೂ ಲೇಖಕ ಪಳನಿಸ್ವಾಮಿ ಜಾಗೇರಿ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ