ಚಾಮರಾಜನಗರ: 72 ಮಂದಿ ಗುಣಮುಖ: 48 ಹೊಸ ಪ್ರಕರಣಗಳು
Team Udayavani, Aug 9, 2020, 7:00 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಭಾನುವಾರ 72 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 48 ಹೊಸ ಪ್ರಕರಣಗಳು ದಾಖಲಾಗಿವೆ. 357 ಸಕ್ರಿಯ ಪ್ರಕರಣಗಳಿವೆ. ಕೋವಿಡೇತರ ಕಾರಣದಿಂದ ಇಬ್ಬರು ಮೃತಪಟ್ಟಿದ್ದಾರೆ.
ನಗರದ 55 ವರ್ಷದ ಮಹಿಳೆ ಹೃದ್ರೋಗದಿಂದ ಬಳಲುತ್ತಿದ್ದರು. ಆ.7ರಂದು ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ನಗರದ 48 ವರ್ಷದ ವ್ಯಕ್ತಿ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದು, ಆ. 6ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದು ಭಾನುವಾರ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಕಾರಣದಿಂದ 14 ಮಂದಿ ಹಾಗೂ ಕೋವಿಡೇತರ ಕಾರಣದಿಂದ 7 ಮಂದಿ ಮೃತಪಟ್ಟಿದ್ದಾರೆ.
ಭಾನುವಾರ 740 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 691 ಮಾದರಿಗಳ ಫಲಿತಾಂಶ ನೆಗೆಟಿವ್ ಆಗಿದೆ. ಇದುವರೆಗೆ ಜಿಲ್ಲೆಯಲ್ಲಿ 1165 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಇದರಲ್ಲಿ 773 ಮಂದಿ ಗುಣಮುಖರಾಗಿದ್ದಾರೆ.
ಭಾನುವಾರದ ಪ್ರಕರಣಗಳಲ್ಲಿ, ಚಾಮರಾಜನಗರ ತಾಲೂಕಿನಿಂದ 18, ಕೊಳ್ಳೇಗಾಲ ತಾಲೂಕಿನಿಂದ 16, ಗುಂಡ್ಲುಪೇಟೆ ತಾಲೂಕಿನಿಂದ 12 ಮತ್ತು ಯಳಂದೂರು ತಾಲೂಕಿನಿಂದ 02 ಪ್ರಕರಣಗಳು ವರದಿಯಾಗಿವೆ.
ಕೋವಿಡ್ ಅಂಕಿ ಅಂಶ :
ಚಾಮರಾಜನಗರ 09.08.20
ಇಂದಿನ ಪ್ರಕರಣಗಳು- 48
ಇಂದು ಗುಣಮುಖ-72
ಒಟ್ಟು ಗುಣಮುಖ-773
ಇಂದಿನ ಸಾವು-0
ಒಟ್ಟು ಸಾವು-14
ಸಕ್ರಿಯ ಪ್ರಕರಣ-357
ಒಟ್ಟು ಸೋಂಕಿತರು-1151
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ