Chandrayaan 3: ಚಂದ್ರಯಾನ-3ರ 5ನೇ ಹಂತ ಯಶಸ್ವಿ-ದಕ್ಷಿಣದತ್ತ ಪಯಣ: ಇಸ್ರೋ
Team Udayavani, Jul 25, 2023, 4:47 PM IST
ಬೆಂಗಳೂರು: ಬಹುನಿರೀಕ್ಷೆಯ ಚಂದ್ರಯಾನ 3ರ ಬಾಹ್ಯಾಕಾಶ ನೌಕೆಯ 5ನೇ ಹಂತದ ಕಕ್ಷೆ ಏರಿಸುವ ಪ್ರಕ್ರಿಯೆಯನ್ನು ಮಂಗಳವಾರ (ಜುಲೈ 25) ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ ಎಂದು ಇಸ್ರೋ ತಿಳಿಸಿದೆ.
ಇದನ್ನೂ ಓದಿ:Udupi ಕಾಲೇಜು ಘಟನೆ;ತಪ್ಪೊಪ್ಪಿಕೊಂಡ ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇವೆಂದ ಕಾಲೇಜು
ಬೆಂಗಳೂರಿನಲ್ಲಿರುವ ಇಸ್ರೋದ ಟೆಲಿಮೆಟ್ರಿ, ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್ ವರ್ಕ್ (ISTRAC) ಚಂದ್ರಯಾನ-3ರ ನೌಕೆಯ ಕಕ್ಷೆಯನ್ನು ಯಶಸ್ವಿಯಾಗಿ ಏರಿಸಿರುವುದಾಗಿ ವಿವರಿಸಿದೆ.
ಭೂಮಿಯಿಂದ ಚಂದ್ರನ ಪಥಕ್ಕೆ ವರ್ಗಾಯಿಸುವ ಕಾರ್ಯದಲ್ಲಿ ನಿರತವಾಗಿದ್ದ ಇಸ್ರೋ ಈಗಾಗಲೇ ಜುಲೈ15 ಮತ್ತು 20ರ ನಡುವೆ ನಾಲ್ಕನೇ ಹಂತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು. ಇದರೊಂದಿಗೆ ಆಗಸ್ಟ್ 1ರಂದು ಅಂತಿಮ ಹಂತದ ಕಕ್ಷೆ ಏರಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ ಮಾಹಿತಿ ನೀಡಿದೆ.
ಟ್ರಾನ್ಸ್ ಲೂನಾರ್ ಇಂಜೆಕ್ಷನ್ (TLI) ಆಗಸ್ಟ್ 1ರಿಂದ ಆಗಸ್ಟ್ 12ರ ಮಧ್ಯರಾತ್ರಿಯ ನಡುವೆ ಪ್ರಕ್ರಿಯೆ ನಡೆಸಲು ಸಿದ್ಧತೆ ನಡೆಸಲಾಗಿದೆ.
ಜುಲೈ 14ರಂದು ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ 3 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿತ್ತು. ಈ ಬಾರಿಯ ಚಂದ್ರಯಾನ ಯಶಸ್ವಿಗೊಂಡಲ್ಲಿ(ನಿರೀಕ್ಷಿತ ದಿನಾಂಕ ಆಗಸ್ಟ್ 23 ಅಥವಾ 24) ಚಂದ್ರನ ದಕ್ಷಿಣ ಅಂಗಳಕ್ಕೆ ಕಾಲಿಟ್ಟ ಮೊದಲ ದೇಶ ಭಾರತ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಇತಿಹಾಸ ಸೃಷ್ಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ