ಲಾರಿ-ಓಮ್ನಿ ನಡುವೆ ಭೀಕರ ಅಪಘಾತ : ಇಬ್ಬರು ಅಡಿಕೆ ವ್ಯಾಪಾರಿಗಳು ಸಾವು
Team Udayavani, Jun 13, 2021, 7:22 PM IST
ಚನ್ನಗಿರಿ: ಲಾರಿ-ಓಮ್ನಿ ಡಿಕ್ಕಿಯಾದ ಪರಿಣಾಮ ಓಮ್ನಿಯಲ್ಲಿದ ಇಬ್ಬರು ಸಾವನ್ನಪ್ಪಿ ಘಟನೆ ತಾಲೂಕಿನ ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿ ಹೊನ್ನೆಭಾಗಿ ಗ್ರಾಮದ ಸಮೀಪದಲ್ಲಿ ನಡೆದಿದೆ.
ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದ ಯೂಸುಫ್ (45), ಹಾಗೂ ಚನ್ನಗಿರಿ ಪಟ್ಟಣದ ಜಬ್ಬಾರ್ (47) ಮೃತ ದುರ್ದೈವಿ ಗಳು..
ಅಡಿಕೆ ವ್ಯಾಪಾರಿಗಳಾಗಿದ್ದ ಇವರು ಭಾನುವಾರ ಮಧ್ಯಾಹ್ನವೇಳೆ ಚನ್ನಗಿರಿಯಿಂದ ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿ ಮೂಲಕ ಅಜ್ಜಂಪುರಕ್ಕೆ ಹೋಗುವ ಮಾರ್ಗದಲ್ಲಿ ಹೊನ್ನೆಭಾಗಿ ಸಮೀಪದಲ್ಲಿ ಓಮ್ನಿಯು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಬಂದ ಲಾರಿಗೆ ರಭಸವಾಗಿ ಡಿಕ್ಕಿಯಾದ ಪರಿಣಾಮ ಓಮ್ನಿ ಯಲ್ಲಿದ ಓರ್ವ ಸ್ಥಳದಲ್ಲಿ ಮೃತಪಟ್ಟರೆ ಇನ್ನೋರ್ವ ಶಿವಮೊಗ್ಗದ ಮೆಗ್ಗನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ಧಾನೆ.
ಇದನ್ನೂ ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಕೆ: ಅಗತ್ಯ ವಸ್ತು ಖರೀದಿ ಅವಧಿ 1ಗಂಟೆ ಹೆಚ್ಚಳ
ಘಟನೆ ಕುರಿತು ಚನ್ನಗಿರಿ ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ