ಉಡುಪಿ: ಮಕ್ಕಳ ಐಸಿಯು ನಿರ್ಮಾಣಕ್ಕೆ ನಿರ್ಣಯ : ಸಚಿವ ಬಸವರಾಜ ಬೊಮ್ಮಾಯಿ
Team Udayavani, Jun 29, 2021, 7:00 AM IST
ಉಡುಪಿ: ಕೋವಿಡ್ ಮೂರನೇ ಅಲೆಗೆ ಮುನ್ನೆಚ್ಚರಿಕೆಯಾಗಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳ ಐಸಿಯು ವಾರ್ಡ್ ನಿರ್ಮಿಸುವುದು ಮತ್ತು ರಾಜ್ಯ ವಿಪತ್ತು ಪ್ರತಿ ಸ್ಪಂದನ ಪಡೆ (ಎಸ್ಡಿಆರ್ಎಫ್)ಯ ಘಟಕ ವನ್ನು ಮಂಗಳೂರಿನಿಂದ ಉಡುಪಿಗೆ ಸ್ಥಳಾಂತರಿ ಸುವ ಪ್ರಮುಖ ನಿರ್ಣಯಗಳನ್ನು ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಸೋಮವಾರ ಜಿ.ಪಂ. ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.
ಉಡುಪಿ ಜಿಲ್ಲೆಯಲ್ಲಿ ನಿತ್ಯ 10 ಸಾವಿರ ಡೋಸ್ ಲಸಿಕೆ ವಿತರಣೆ, ಮಕ್ಕಳ ಆರೋಗ್ಯ ತಪಾಸಣೆಯಲ್ಲಿ ಸೂಕ್ತ ಚಿಕಿತ್ಸೆಗೆ ಕ್ರಮ, ಉಡುಪಿಯ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಮರಳಿ ಸರಕಾರ ವಶಕ್ಕೆ ಪಡೆಯುವುದಕ್ಕೂ ನಿರ್ಣಯಿಸಲಾಗಿದೆ.
ಆಮ್ಲಜನಕ ಘಟಕ, ಮಕ್ಕಳ ಐಸಿಯು ಬೆಡ್ ಸ್ಥಾಪಿಸಿ
ಜಿಲ್ಲಾಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸಿಆರ್ಎಸ್ ನಿಧಿಯಡಿ ಆಮ್ಲಜನಕ ಉತ್ಪಾದನ ಘಟಕಗಳನ್ನು ಸ್ಥಾಪಿಸಿ ಜುಲೈ ಅಂತ್ಯದೊಳಗೆ ಆರಂಭಿಸಬೇಕು. ಜಿಲ್ಲಾಸ್ಪತ್ರೆಯಲ್ಲಿ 30 ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತಲಾ 10 ಐಸಿಯು ಹಾಸಿಗೆಗಳನ್ನು ಅಭಿವೃದ್ಧಿಪಡಿಸಬೇಕು. ಇವುಗಳ ಕನಿಷ್ಠ ಐದು ಮಕ್ಕಳ ಹಾಸಿಗೆ ಆಗಿರಬೇಕು. ಈ ಎಲ್ಲ ಪ್ರಕ್ರಿಯೆಗಳು ಇನ್ನೆರಡು ತಿಂಗಳಲ್ಲಿ ಪೂರ್ಣ ಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.
3-4 ತಿಂಗಳಲ್ಲಿ ಲಸಿಕೆ ಪೂರ್ಣ
ಹೆಚ್ಚು ಸಂಖ್ಯೆಯಲ್ಲಿ ಲಸಿಕೆ ವಿತರಿಸುವ ಮೂಲಕ ಮೂರ್ನಾಲ್ಕು ತಿಂಗಳೊಳಗೆ ಈ ಪ್ರಕ್ರಿಯೆ ಮುಗಿಸಬಹುದು. 10 ಲಕ್ಷ ಜನಸಂಖ್ಯೆಗೆ 20 ಲಕ್ಷ ಡೋಸ್ ಲಸಿಕೆ ಅಗತ್ಯವಿದೆ.
ಎಸ್ಡಿಆರ್ಎಫ್ ಘಟಕ ಉಡುಪಿಗೆ
ಕರಾವಳಿಗೆ ಸಂಬಂಧಿಸಿ ರಾಷ್ಟ್ರೀಯ ವಿಪತ್ತು ಪ್ರತಿಸ್ಪಂದನ ಪಡೆ (ಎನ್ಡಿಆರ್ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಸ್ಪಂದನ ಘಟಕ (ಎಸ್ಡಿಆರ್ಎಫ್) ಗಳೆರಡೂ ಮಂಗಳೂರಿನಲ್ಲಿ ಇರುವುದರಿಂದ ಎಸ್ಡಿ ಆರ್ಎಫ್ ಘಟಕವನ್ನು ಉಡುಪಿಗೆ ಸ್ಥಳಾಂತ ರಿಸುವುದಾಗಿ ಬೊಮ್ಮಾಯಿ ಪ್ರಕಟಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ