ಚೀನದ‌ ಜೈವಿಕ ಸಮರದ ಹುನ್ನಾರ: ಮನುಕುಲಕ್ಕೇ ಮಾರಕ


Team Udayavani, May 10, 2021, 6:45 AM IST

ಚೀನದ‌ ಜೈವಿಕ ಸಮರದ ಹುನ್ನಾರ: ಮನುಕುಲಕ್ಕೇ ಮಾರಕ

2019ರ ಅಂತ್ಯದಲ್ಲಿ ಚೀನದ ವುಹಾನ್‌ ನಗರದಲ್ಲಿನ ಜನನಿಬಿಡ ಮಾಂಸ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ ಪತ್ತೆಯಾದ ಕೊರೊನಾ ವೈರಸ್‌ ವಾರಗಳ ಅಂತರದಲ್ಲಿ ಇಡೀ ಚೀನವನ್ನೇ ಆವರಿಸಿ ಅದರ ಕರಾಳ ಮುಖವನ್ನು ಪ್ರದರ್ಶಿಸಿತ್ತು. ಇದಾದ ಕೆಲವೇ ತಿಂಗಳುಗಳಲ್ಲಿ ವಿಶ್ವದೆಲ್ಲೆಡೆ ಪಸರಿಸಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು. ಕೊರೊನಾ ವ್ಯಾಪಿಸಲಾರಂಭಿಸಿ ಒಂದೂವರೆ ವರ್ಷ ಕಳೆದಿದ್ದು, ಇದಿನ್ನೂ ಪೂರ್ಣ ವಾಗಿ ಹತೋಟಿಗೆ ಬಂದಿಲ್ಲ. ವೈರಸ್‌ ರೂಪಾಂತರಗೊಂಡು ಜನರನ್ನು ಬಾಧಿಸುತ್ತಿದೆ. ವಿಶ್ವದ ಬಹುತೇಕ ರಾಷ್ಟ್ರಗಳು ಇದರ ಹೊಡೆತದಿಂದ ಮೇಲೇಳಲು ಹರಸಾಹಸ ಪಡುತ್ತಿವೆ.

ಕೊರೊನಾ ವೈರಸ್‌ನ ಮೂಲ ಹುಡುಕಾಟದಲ್ಲಿ ಇಡೀ ವಿಶ್ವ ಸಮುದಾಯ ತೊಡಗಿಕೊಂಡಿದ್ದು ಇನ್ನೂ ತಾರ್ಕಿಕ ಅಂತ್ಯಕ್ಕೆ ಬರಲು ಸಾಧ್ಯ ವಾಗಿಲ್ಲ. ಆದರೆ ಆರಂಭದಿಂದಲೂ ರಕ್ಷಣ ಮತ್ತು ಆರೋಗ್ಯ ತಜ್ಞರು, ವಿಜ್ಞಾನಿಗಳು ಚೀನದತ್ತಲೇ ಬೆಟ್ಟು ಮಾಡುತ್ತ ಬಂದಿದ್ದರೂ ಚೀನ ಮಾತ್ರ ಈ ಆರೋಪವನ್ನು ಅಲ್ಲಗಳೆಯುತ್ತಲೇ ಬಂದಿದೆ. ಕೊರೊನಾ ವೈರಸ್‌ ಅನ್ನು ಚೀನ ಜೈವಿಕ ಅಸ್ತ್ರವನ್ನಾಗಿ ಬಳಸಿಕೊಳ್ಳುವ ಮೂಲಕ ಇಡೀ ವಿಶ್ವ ಸಮುದಾಯದ ವಿರುದ್ಧ ಜೈವಿಕ ಸಮರಕ್ಕೆ ಮುಂದಾಗಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ತಜ್ಞರ ತಂಡ ಕೂಡ ವೈರಸ್‌ ಪತ್ತೆಯಾದ ವುಹಾನ್‌ಗೆ ಭೇಟಿ ನೀಡಿ ಪರಿಶೀಲಿಸಲು ತೆರಳಿದ ವೇಳೆ ಆರಂಭದಲ್ಲಿ ಮೊಂಡಾಟ ತೋರಿದ್ದ ಚೀನ ಕೊನೆಗೆ ಜಾಗತಿಕ ಸಮುದಾಯದ ಪ್ರಬಲ ಒತ್ತಡಕ್ಕೆ ಮಣಿದಿತ್ತು. ತಜ್ಞರ ತಂಡಕ್ಕೆ ವುಹಾನ್‌ಮಾರುಕಟ್ಟೆ ಪ್ರದೇಶಕ್ಕೆ ಭೇಟಿ ನೀಡಲು ಅನುಮತಿ ನೀಡಿತ್ತಾದರೂ ತನ್ನ ಷಡ್ಯಂತ್ರ ಎಲ್ಲೂ ಬಹಿರಂಗಗೊಳ್ಳದಂತೆ ಎಚ್ಚರಿಕೆ ವಹಿಸುವಲ್ಲಿ ಯಶಸ್ವಿ ಯಾಗಿತ್ತು. ಆದರೆ ಈ ನಡೆಗಳು ಅನುಮಾನಗಳನ್ನು ಇನ್ನಷ್ಟು ಹೆಚ್ಚಿಸಿದ್ದವು. ಈಗ ಆಸ್ಟ್ರೇಲಿಯನ್‌ ಮ್ಯಾಗಜಿನ್‌ ಸಹಿತ ಕೆಲವು ವೆಬ್‌ಸೈಟ್‌ಗಳಲ್ಲಿ ಅಮೆರಿಕದ ಅಧಿಕಾರಿಗಳನ್ನು ಉಲ್ಲೇಖೀಸಿ ಪ್ರಕಟವಾಗಿರುವ ವರದಿಗಳು ಕೊರೊನಾ ವೈರಸ್‌ನ ಸೃಷ್ಟಿಕರ್ತನೇ ಚೀನ ಎಂಬ ಬಗ್ಗೆ ಮತ್ತಷ್ಟು ಪುರಾವೆ ಒದಗಿಸಿಕೊಟ್ಟಿವೆ. ಈ ಷಡ್ಯಂತ್ರವನ್ನು ಆರು ವರ್ಷಗಳ ಹಿಂದೆಯೇ ಅಂದರೆ 2015ರಲ್ಲಿಯೇ ಚೀನ ರೂಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಈಗ ಹೊರಬಿದ್ದಿದ್ದು ಚೀನದ ಕುತಂತ್ರಕ್ಕೆ ಕನ್ನಡಿ ಹಿಡಿದಿದೆ. ವೈರಸ್‌ ಅನ್ನು ಕೃತಕವಾಗಿ ಬದಲಿಸಿ ಸೋಂಕನ್ನು ಮನುಷ್ಯರಿಗೆ ಪಸರಿಸುವ ಮೂಲಕ ವಿಶ್ವವನ್ನು ವಿನಾಶಕ್ಕೆ ತಳ್ಳುವ ಇರಾದೆ ಚೀನದ್ದಾಗಿತ್ತು ಎಂಬುದು ಈಗ ಲಭಿಸಿರುವ ದಾಖಲೆಗಳಿಂದ ಸಾಬೀತಾ ಗಿದೆ. ವಿಶ್ವದ ಬಲಾಡ್ಯ ರಾಷ್ಟ್ರಗಳ ಮೇಲೆ ಈ ಜೈವಿಕ ಅಸ್ತ್ರ ಪ್ರಯೋಗಿಸಿ ಅವುಗಳನ್ನು ಸಾಮಾಜಿಕವಾಗಿ, ಆರ್ಥಿಕವಾಗಿ ಜರ್ಝ ರಿತಗೊಳಿಸಿ ಪಾರಮ್ಯ ಮೆರೆಯುವ ಹುನ್ನಾರ ಚೀನದ್ದಾಗಿದೆ ಎಂಬುದಂತೂ ಇದರಿಂದ ಸ್ಪಷ್ಟ. ಇನ್ನಾದರೂ ವಿಶ್ವಸಂಸ್ಥೆ ಗಂಭೀರವಾಗಿ ಪರಿಗಣಿಸಿ ಚೀನದ ಮುಖವಾಡವನ್ನು ಕಳಚುವ ಕಾರ್ಯಕ್ಕೆ ಮುಂದಾಗಬೇಕು. ಜಾಗತಿಕ ಶಾಂತಿಗೆ ಬೆದರಿಕೆ ಒಡ್ಡುವ ಮತ್ತು ಆ ಮೂಲಕ ಇಡೀ ಮನುಕುಲದ ಅಳಿವಿಗೆ ಮುಂದಾಗಿರುವ ಚೀನದ ಹುನ್ನಾರ ಬಯಲಿಗೆಳೆಯಲೇ ಬೇಕಿದೆ. ಈ ನಿಟ್ಟಿನಲ್ಲಿ ಇಡೀ ವಿಶ್ವ ಸಮು ದಾಯ ಚೀನದ ವಿರುದ್ಧ ಒಗ್ಗೂಡಿ ಹೋರಾಟ ನಡೆಸಿ ಅದನ್ನು ಏಕಾಂಗಿ ಯಾಗಿಸಬೇಕಿದೆ. ಕೊರೊನಾ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಿ ಜನತೆಯನ್ನು ಭಯಮುಕ್ತರಾಗಿಸಬೇಕಿದೆ ಮತ್ತು ಜೈವಿಕ ಸಮರ ದಂತಹ ಪ್ರವೃತ್ತಿಗೆ ಕಡಿವಾಣ ಹೇರುವ ದೃಢಸಂಕಲ್ಪ ಕೈಗೊಳ್ಳಬೇಕು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

14-editorial

Campaigns: ಪ್ರಚಾರದಲ್ಲಿ ದ್ವೇಷ ಭಾಷಣ: ಸ್ವಯಂ ನಿಯಂತ್ರಣ ಅಗತ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.