ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ
ಬಿಬಿಸಿ ಚೀನಾದ ಕಾರ್ಯಸೂಚಿಯಂತೆ ಕೆಲಸ ಮಾಡುತ್ತಿದೆ.
Team Udayavani, Jan 31, 2023, 5:48 PM IST
ನವದೆಹಲಿ: ವಿಷಮ ಪರಿಸ್ಥಿತಿಯಲ್ಲಿರುವ ಬಿಬಿಸಿಗೆ ಹಣಕಾಸಿನ ಅಗತ್ಯವಿದ್ದು, ಅದನ್ನು ಚೀನಾ ಮೂಲದ ಹುವಾವೈಯಿಂದ ಪಡೆದುಕೊಳ್ಳುತ್ತಿದೆ ಎಂದು ಭಾರತೀಯ ಜನತಾ ಪಕ್ಷದ ಸಂಸದ, ಹಿರಿಯ ವಕೀಲ ಮಹೇಶ್ ಜೇಠ್ಮಲಾನಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಪೋಷಕಾಂಶ ಹಾಗೂ ಖನಿಜಾಂಶಗಳ ಆಗರ: ನಿತ್ಯ ಸಂಜೀವಿನಿ ಈ ಎಳನೀರು…
ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಬಿಬಿಸಿಯ ವಿವಾದ ಸಾಕ್ಷ್ಯಚಿತ್ರದ ಪ್ರಸಾರದ ಹಿನ್ನೆಲೆಯಲ್ಲಿ ರಾಜ್ಯಸಭಾ ಸದಸ್ಯರಾಗಿರುವ ಜೇಠ್ಮಲಾನಿ ಬಿಬಿಸಿ ವಿರುದ್ಧ ವಾಗ್ದಾಳಿ ನಡೆಸಿರುವುದಾಗಿ ವರದಿಯಾಗಿದೆ.
“ಬಿಬಿಸಿ ಯಾಕೆ ಭಾರತ ವಿರೋಧಿಯಾಗಿದೆ? ಯಾಕೆಂದರೆ ವಿಷಮ ಸ್ಥಿತಿಯಲ್ಲಿರುವ ಬಿಬಿಸಿಗೆ ಹಣಕಾಸಿನ ಅಗತ್ಯವಿದ್ದು, ಅದನ್ನು ಚೀನಾ ಮೂಲದ ಹುವಾವೈಯಿಂದ ಪಡೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಬಿಬಿಸಿ ಚೀನಾದ ಕಾರ್ಯಸೂಚಿಯಂತೆ ಕೆಲಸ ಮಾಡುತ್ತಿದೆ. ಇದೊಂದು ನಗದು-ಪ್ರಚಾರದ ಒಪ್ಪಂದವಾಗಿದೆ ಎಂದ ಜೇಠ್ಮಲಾನಿ ಬಿಬಿಸಿ ಮಾರಾಟಕ್ಕಿದೆ ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ.
ಬಿಜೆಪಿ ರಾಜ್ಯಸಭಾ ಸದಸ್ಯ ಜೇಠ್ಮಲಾನಿ ಅವರು, 2022ರ ಆಗಸ್ಟ್ ನಲ್ಲಿ ಬ್ರಿಟನ್ ನಿಯತಕಾಲಿಕೆ ದಿ ಸ್ಪೆಕ್ಟೇಟರ್ ನಲ್ಲಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ಹಂಚಿಕೊಂಡಿದ್ದು, ಇದು ಬಿಬಿಸಿ ಹುವಾವೈಯಿಂದ ಹಣವನ್ನು ಪಡೆದುಕೊಂಡಿರುವುದಕ್ಕೆ ಪುರಾವೆಯಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ