ಹೊಸ ಸೋಂಕಿಗೆ ಚೀನವೇ ಹಾಟ್‌ ಸ್ಪಾಟ್‌?

16.12 ದಶಲಕ್ಷ ಡೋಸ್‌ಗಳು ಬಳಕೆಗೆ ಬಾಕಿ ಉಳಿದಿವೆ' ಎಂದು ಆರೋಗ್ಯ ಇಲಾಖೆ ಹೇಳಿದೆ.

Team Udayavani, Jun 3, 2021, 8:39 AM IST

ಹೊಸ ಸೋಂಕಿಗೆ ಚೀನವೇ ಹಾಟ್‌ ಸ್ಪಾಟ್‌?

ನ್ಯೂಯಾರ್ಕ್‌/ಹೊಸದಿಲ್ಲಿ: ಈಗಾಗಲೇ ಕೊರೊನಾ ವೈರಸ್‌ ಜಾಗತಿಕವಾಗಿ ವ್ಯಾಪಿಸಿ ಮನು ಕುಲವನ್ನು ಹೈರಾಣಾಗಿಸಿದೆ. ಹೀಗಿರುವಾಗ ಭವಿಷ್ಯದಲ್ಲಿ ಕಾಡಲಿರುವ ಕೊರೊನಾ ವೈರಾಣುವಿಗೆ ಚೀನ, ಜಪಾನ್‌, ಫಿಲಿ ಪ್ಪೀನ್ಸ್‌ ಮತ್ತು ಥಾಯ್ಲೆಂಡ್‌ಗಳೇ “ಹಾಟ್‌ ಸ್ಪಾಟ್‌’ ಗಳಾಗಬಹುದು ಎಂಬ
ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಈ ಕುರಿತ ಅಧ್ಯಯನ ವರದಿಯೊಂದು ನೇಚರ್‌ ಫಂಡ್ ಜರ್ನಲ್‌ ನಲ್ಲಿ ಪ್ರಕಟವಾಗಿದೆ. ಜಾಗ ತಿಕವಾಗಿ ಬದಲಾಗುತ್ತಿರುವ ಭೂಮಿಯ ಬಳಕೆ, ಅರಣ್ಯಗಳ ವಿಭಾಗೀಕರಣ, ಕೃಷಿ ವ್ಯಾಪ್ತಿ ವಿಸ್ತ ರಣೆ, ಜಾನುವಾರು ಕೇಂದ್ರಿತ ಉದ್ದಿಮೆಗಳು ಹೆಚ್ಚಿರುವ ಪ್ರದೇಶಗಳಲ್ಲಿ ಬಾವಲಿಯಂಥ ಸೋಂಕಿನ ವಾಹಕಗಳು ಯಥೇಚ್ಛವಾಗಿ ಸೃಷ್ಟಿಯಾಗುತ್ತಿವೆ. ಬಾವಲಿಗಳಿಂದಾಗಿ ವಿವಿಧ ರೀತಿಯ ಸೋಂಕು ಗಳು ಮಾನವನಿಗೆ ಹರಡುತ್ತವೆ ಎಂದು ವರದಿ ಹೇಳಿದೆ.

ಅದರಂತೆ, ಬಾವಲಿಗಳ ಸಂತಾನವೃದ್ಧಿಗೆ ಚೀನ, ಜಪಾನ್‌, ಫಿಲಿಪ್ಪೀನ್ಸ್‌, ಥಾಯ್ಲೆಂಡ್‌ ಗಳು ಹೇಳಿ ಮಾಡಿಸಿದಂತಿವೆ. ಇಲ್ಲಿ ಮಾಂಸದ ಉತ್ಪನ್ನಗಳಿಗೆ ಹೆಚ್ಚು ಬೇಡಿಕೆಯಿರುವ ಕಾರಣ ಜಾನು ವಾರು ಉದ್ದಿಮೆ ವಿಸ್ತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕೊರೊನಾದಂಥ ಹಲವು ಸಾಂಕ್ರಾ ಮಿಕಗಳಿಗೆ ಈ ನೆಲಗಳೇ ಮೂಲಗಳಾಗುವ ಸಾಧ್ಯತೆ ಹೆಚ್ಚಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಪಾಸಿಟಿವಿಟಿ ಇಳಿಕೆ: ಈ ನಡುವೆ, ಭಾರತದಲ್ಲಿ ದೈನಂದಿನ ಸೋಂಕಿನ ಪಾಸಿಟಿವಿಟಿ ಪ್ರಮಾಣ ಶೇ.6.57ಕ್ಕೆ ಇಳಿಕೆಯಾಗಿದೆ. ಮಂಗಳವಾರದಿಂದ ಬುಧವಾರಕ್ಕೆ 1.32 ಲಕ್ಷ ಹೊಸ ಪ್ರಕರಣ ದೃಢಪಟ್ಟಿದ್ದರೆ, 3,207 ಮಂದಿ ಅಸುನೀಗಿದ್ದಾರೆ. ಚೇತರಿಕೆ ಪ್ರಮಾಣ ಶೇ.92.48ಕ್ಕೆ ಏರಿಕೆಯಾಗಿದೆ.

ಲಸಿಕೆ ವರದಿಗೆ ಕೇಂದ್ರ ಆಕ್ಷೇಪ: ಈ ತಿಂಗಳಲ್ಲಿ ರಾಜ್ಯಗಳಿಗೆ 120 ದಶ ಲಕ್ಷ ಡೋಸ್‌ ಲಸಿಕೆ ನೀಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಮೇನಲ್ಲಿ ಲಭ್ಯವಿದ್ದ 79 ದಶ ಲಕ್ಷ ಡೋಸ್‌ ಪೈಕಿ 58 ದಶ ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ. ಜೂ.1 ಬೆಳಗ್ಗೆ 7 ಗಂಟೆವರೆಗಿನ ಮಾಹಿತಿಯಂತೆ ಮೇ 1-31ರ ಅವಧಿಯಲ್ಲಿ ರಾಜ್ಯಗಳಲ್ಲಿ 61.06 ದಶಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ. 16.12 ದಶಲಕ್ಷ ಡೋಸ್‌ಗಳು ಬಳಕೆಗೆ ಬಾಕಿ ಉಳಿದಿವೆ’ ಎಂದು ಆರೋಗ್ಯ ಇಲಾಖೆ ಹೇಳಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.