ಚಿಂಚೋಳಿ: ಜಾಧವ್ ಪುತ್ರನಿಗೆ ಟಿಕೆಟ್?
ದಿಢೀರ್ ಬೆಳವಣಿಗೆಯಲ್ಲಿ ಹೆಸರು ಬದಲು
Team Udayavani, Apr 27, 2019, 8:43 AM IST
ಬೆಂಗಳೂರು: ಚಿಂಚೋಳಿ ವಿಧಾನ ಸಭೆ ಉಪಚುನಾವಣೆಗೆ ಬಿಜೆಪಿಯಿಂದ ಡಾ| ಉಮೇಶ್ ಜಾಧವ್ ಸಹೋದರ ರಾಮ ಚಂದ್ರ ಜಾಧವ್ ಹೆಸರು ಗುರುವಾರ ಶಿಫಾ ರಸು ಗೊಂಡ 24 ಗಂಟೆಗಳಲ್ಲಿ ಅಚ್ಚರಿಯ ಬೆಳವಣಿಗೆ ಯಲ್ಲಿ ಉಮೇಶ್ ಜಾಧವ್ ಪುತ್ರ ಡಾ| ಅವಿನಾಶ್ ಜಾಧವ್ ಹೆಸರನ್ನು ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಶುಕ್ರವಾರ ಶಿಫಾರಸು ಮಾಡಿದ್ದಾರೆ. ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತ ಎನ್ನಲಾಗಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಮಚಂದ್ರ ಜಾಧವ್ ಹೆಸರು ಅಂತಿಮಗೊಳಿಸಿ ಒಂದೇ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು. ಆದರೆ ಉಮೇಶ್ ಜಾಧವ್ ಅವರು ಕುಟುಂಬದವರೊಂದಿಗೆ ಚರ್ಚಿಸಿ ಬಳಿಕ ತನ್ನ ಪುತ್ರ ಡಾ| ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
ಶುಕ್ರವಾರ ಯಡಿಯೂರಪ್ಪ ಅವರನ್ನು ಎರಡು ಬಾರಿ ಭೇಟಿ ಮಾಡಿದ ಉಮೇಶ್ ಜಾಧವ್ ತನ್ನ ಪುತ್ರನಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದರು. ಇದೇ ವೇಳೆ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಕೂಡ ಯಡಿ ಯೂರಪ್ಪ ಅವರನ್ನು ಭೇಟಿಯಾಗಿ ಸ್ಪರ್ಧೆಗೆ ಅವಕಾಶ ನೀಡುವಂತೆ ಕೋರಿದರು.
ಬಿಎಸ್ವೈ ಭೇಟಿ ಮಾಡಿದ ವಲ್ಯಾಪುರೆ
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅವರು ತಮಗೂ ಅವಕಾಶ ನೀಡುವಂತೆ ಮನವಿ ಮಾಡಿ ದರು. ಆದರೆ ಅವರಿಗೆ ಸಮಧಾನಕಾರ ಭರವಸೆ ಸಿಕ್ಕಿಲ್ಲ. ಶನಿವಾರ ಕ್ಷೇತ್ರದ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆಯಲಾಗಿದೆ. ಆ ಸಭೆಯ ನಿರ್ಧಾರದಂತೆ ಮುಂದುವರಿಯುವೆ ಎಂದು ಸುನಿಲ್ ತಿಳಿಸಿದರು.
ಈ ಮಧ್ಯೆ, ಕುಂದಗೋಳ ಕ್ಷೇತ್ರಕ್ಕೆ ಸಂಬಂಧಿಸಿ ದಂತೆ ಮಾಜಿ ಶಾಸಕ ಎಸ್.ಐ. ಚಿಕ್ಕನಗೌಡರ್ ಹೆಸರು ಶಿಫಾರಸು ಮಾಡಲಾಗಿದೆ. ಅದರಲ್ಲಿ ಬದಲಾವಣೆ ಇಲ್ಲ ಎಂದು ಹೇಳಲಾಗಿದೆ.
ಶನಿವಾರ ವೇಣು ಆಗಮನ
ಕಾಂಗ್ರೆಸ್ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದು, ಅನಂತರವಷ್ಟೇ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎರಡೂ ಕ್ಷೇತ್ರಗಳ ಮುಖಂಡರ ಜತೆ ಚರ್ಚಿಸಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಜೆಡಿಎಸ್ ರಣತಂತ್ರ
ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣ ಕ್ಕಿಳಿಸದೆ ಕಾಂಗ್ರೆಸ್ಗೆ ಬೆಂಬಲ ನೀಡಲು ಜೆಡಿಎಸ್ ತೀರ್ಮಾನಿಸಿದೆ. ಹೀಗಾಗಿ ಜೆಡಿಎಸ್ ನಾಯಕರು ಉಪ ಚುನಾವಣೆ ಯನ್ನು ಗಂಭೀರವಾಗಿಯೇ ಪರಿಗಣಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಲ್ಲ ರೀತಿಯ ಬೆಂಬಲ-ನೆರವು-ಸಹಕಾರ ನೀಡಲು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು