ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌


Team Udayavani, Nov 27, 2021, 9:45 PM IST

ವಂಚಕ ಕಂಪನಿಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಿ : ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಬೆಂಗಳೂರು: ಅಧಿಕಬಡ್ಡಿ ಹಾಗೂ ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಹೇಳಿ ಹಣ ವಸೂಲಿ ಮಾಡುವ ಕಂಪನಿಗಳ ಬಗ್ಗೆ  ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಹೇಳಿದರು.

ಜೆ.ಪಿ.ನಗರ ಪೊಲೀಸ್‌ ಠಾಣೆಯಲ್ಲಿ ಶನಿವಾರ ಆಯೋಜಿಸಿದ್ದ ಮಾಸಿಕ ಜನಸಂಪರ್ಕ ದಿವಸ ಕಾರ್ಯಕ್ರಮದಲ್ಲಿ  ವಂಚನೆ ಪ್ರಕರಣಗಳ ಸಂಬಂಧ ತ್ವರಿತಗತಿಯಲ್ಲಿ ತನಿಖೆ ನಡೆಸಬೇಕು, ಅಧಿಕ ಬಡ್ಡಿ ಮತ್ತು ಮನಿ ಡಬ್ಲಿಂಗ್‌ ಮಾಡಿಕೊಡುವುದಾಗಿ ಆಮಿಷವೊಡ್ಡಿ ವಂಚಿಸುವುದು ನಿಯಂತ್ರಿಸಬೇಕು ಎಂಬ ಸಾರ್ವಜನಿಕರ ಮನವಿಗೆ ಪ್ರತಿಕಿಯಿಸಿ, ಅಂತಹ ವ್ಯಕ್ತಿಗಳು, ಕಂಪನಿಗಳು ನಗರದಲ್ಲಿ ಹೆಚ್ಚಾಗಿವೆ. ಅವರ ಬಗ್ಗೆ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಅದರೊಂದಿಗೆ ಸಾರ್ವಜನಿಕರು ಕೂಡ ಕಷ್ಟ ಪಟ್ಟು ಸಂಪಾದಿಸಿದ ಹಣವನ್ನು ಅಪರಿಚಿತ ವ್ಯಕ್ತಿಯೊಬ್ಬ ಅಧಿಕ ಬಡ್ಡಿ ಕೊಡುತ್ತೇನೆ. ಹಣ ಎರಡು ಪಟ್ಟು ಮಾಡಿಕೊಡುತ್ತೇನೆ ಎಂದು ನಂಬಿಸಿದಾಗ, ಹೂಡಿಕೆ ಮಾಡುವ ಮೊದಲು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ರಸ್ತೆಯ ಇಕ್ಕೆಲಗಳಲ್ಲಿ ಹುಡುಗರ ಗುಂಪುಕಟ್ಟಿಕೊಂಡು ನಿಂತಿರುತ್ತಾರೆ. ಅದನ್ನು ಪ್ರಶ್ನಿಸಿದರೆ, ತಮ್ಮ ಮೇಲೆಯೇ ಕೂಗಾಡುತ್ತಾರೆ. ಅಲ್ಲಡೆ ಗಸ್ತು ಹೆಚ್ಚಳ ಮಾಡಬೇಕು ಎಂದು ಸಾರ್ವಜನಿಕರೊಬ್ಬರು ಹೇಳಿದರು. ಅದಕ್ಕೆ ಉತ್ತರಿಸಿದ ಆಯುಕ್ತರು, ಪೊಲೀಸ್‌ ಗಸ್ತು ಹೆಚ್ಚಳ ಮಾಡಲಾಗುತ್ತದೆ. ಜತೆಗೆ ಸಾರ್ವಜನಿಕರು ಅಂತಹ ಪುಂಡ ಯುವಕರ ಗುಂಪು ಕಂಡಾಗ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಇದನ್ನೂ ಓದಿ : ಕಾಂಗ್ರೆಸ್‌ನಿಂದ ಮಾತ್ರ ಗ್ರಾಮೀಣ ಅಭಿವೃದ್ಧಿ ಸಾಧ್ಯ: ಹೆಚ್.ಸಿ.ಮಹದೇವಪ್ಪ

ಪಾದಚಾರಿ ಮಾರ್ಗ ತೆರವು ಮಾಡಿ

ರಸ್ತೆಗಳ ಎರಡು ಕಡೆ ಪಾದಚಾರಿ ಮಾರ್ಗಗಳಲ್ಲಿ ತರಕಾರಿ, ಆಹಾರ ಪದಾರ್ಥ ಮಾರಾಟಗಾರರು ಹೆಚ್ಚಾಗಿದ್ದಾರೆ. ಕಿರಿದಾದ ರಸ್ತೆಗಳಲ್ಲಿ ನಡೆದುಕೊಂಡು ಹೋಗಲು ಕಷ್ಟವಾಗುತ್ತದೆ. ಪಾರ್ಕಿಂಗ್‌ ಸಮಸ್ಯೆಯನ್ನು ಪರಿಹಾರ ಮಾಡಬೇಕು ಎಂದು ಸಾರ್ವಜನಿಕರು ದೂರುಗಳನ್ನು ನೀಡಿದರು.

ಅದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತರು, ಸಂಚಾರ ಪೊಲೀಸರು ಪಾದಚಾರಿ ಮಾರ್ಗ ತೆರವು ಕಾರ್ಯವನ್ನು ಕೈಗೊಂಡಿದ್ದಾರೆ. ಹಂತ-ಹಂತವಾಗಿ ತೆರವು ಮಾಡಲಾಗುತ್ತದೆ. ಹಾಗೆಯೇ ಪಾರ್ಕಿಂಗ್‌ ಸಮಸ್ಯೆ ನಿವಾರಣೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ವಿಭಾಗ ಡಿಸಿಪಿ ಹರೀಶ್‌ ಪಾಂಡೆ, ಜಯನಗರ ಉಪವಿಭಾಗ ಎಸಿಪಿ ಕೆ.ವಿ.ಶ್ರೀನಿವಾಸ್‌, ದಕ್ಷಿಣ ಉಪವಿಭಾಗ ಎಸಿಪಿ ಶ್ರೀನಿವಾಸ್‌ ಹಾಗೂ ಇತರೆ ಅಧಿಕಾರಿಗಳು ಇದ್ದರು.

ಇದೇ ವೇಳೆ ಎಲ್ಲ ವಿಭಾಗಗಳ ಡಿಸಿಪಿಗಳು ತಮ್ಮ ವ್ಯಾಪ್ತಿಯ ಠಾಣೆಗಳಲ್ಲಿ ದೂರುಗಳನ್ನು ಸ್ವೀಕರಿಸಿ ಸಾರ್ವಜನಿಕರಿಗೆ ಸಲಹೆ, ಸೂಚನೆಗಳನ್ನು ನೀಡಿದರು. ಕೆಲವೊಂದು ಸ್ಥಳದಲ್ಲೇ ಬಗೆಹರಿಸಿದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.