ಮಸೀದಿಗಳಲ್ಲಿ ಧ್ವನಿವರ್ಧಕ ಶಬ್ದ ಕಡಿತ ಮಾಡಿ : ಪೊಲೀಸ್ ಆಯುಕ್ತ ಕಮಲ್‌ ಪಂತ್‌ ಸೂಚನೆ


Team Udayavani, Feb 20, 2022, 3:52 PM IST

ಮಸೀದಿ, ಮಂದಿರಗಳಲ್ಲಿ ಧ್ವನಿವರ್ಧಕ ಶಬ್ದ ಕಡಿತ ಮಾಡಿ : ಪೊಲೀಸ್ ಆಯುಕ್ತ ಕಮಲ್‌ ಪಂತ್‌

ಬೆಂಗಳೂರು:  “ಆಜಾನ್‌’ ಕೂಗುವ ವೇಳೆ ಮಸೀದಿಯಲ್ಲಿ ಧ್ವನಿವರ್ಧಕಗಳ ಶಬ್ದ ನಿಗದಿತ ಡೆಸಿಬಲ್‌ಗಿಂತ ಜೋರಾಗಿದ್ದು, ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶ್ರೀರಾಮ್‌ ಎಂಬುವವರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರಿಗೆ ದೂರು ನೀಡಿದ್ದಾರೆ. ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಶನಿವಾರ ಹಮ್ಮಿಕೊಂಡಿದ್ದ “ಟ್ವಿಟರ್‌ ಲೈವ್‌’ನಲ್ಲಿ ನಾಗರಿಕರು, ಹತ್ತಾರು ದೂರುಗಳನ್ನು ನೀಡಿದ್ದು ಹಿಜಾಬ್‌ ಪ್ರಕರಣ, ಹೆಲ್ಮೆಟ್‌ ಕಡ್ಡಾಯ, ಪೊಲೀಸ್‌ ಇಲಾಖೆಯಲ್ಲಿ ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ
ಆಯುಕ್ತರು ಮುಕ್ತವಾಗಿ ಚರ್ಚಿಸಿದರು.

ಈ ವೇಳೆ ಶ್ರೀರಾಮ್‌ ಎಂಬುವವರು, ನಮ್ಮ ಮನೆ ಬಳಿ ಇರುವ ಮಸೀದಿಯಲ್ಲಿ ಅಜಾನ್‌ ಕೂಗುವ ಶಬ್ದದ ಪ್ರಮಾಣ ಕಡಿಮೆ ಮಾಡಿಸುವಂತೆ ಹಲವಾರು ಬಾರಿ ಮಲ್ಲೇಶ್ವರ ಪೊಲೀಸ್‌ ಠಾಣೆಗೆ ಕರೆ ಮಾಡಿ ದೂರು ನೀಡಲಾಗಿದೆ. ದೂರು ನೀಡಿದ 2 ದಿನಗಳು ಮಾತ್ರ ಅಜಾನ್‌ ಶಬ್ದ ಕಡಿಮೆ ಇರುತ್ತದೆ. ಮತ್ತೆ ಅದೇ ಶಬ್ದ ಶುರುವಾಗುತ್ತದೆ. ಇದರಿಂದ ಮನೆಯಲ್ಲಿ ಇರಲು ಕಿರಿಕಿರಿ ಎನಿಸುತ್ತಿದೆ ಎಂದು ದೂರು ನೀಡಿದರು. ಮಂದಿರ, ಮಸೀದಿಗಳಲ್ಲಿ ಧ್ವನಿವರ್ಧಕಗಳ ಶಬ್ದದ ಡೆಸಿಬಲ್‌ ಕಡಿಮೆ ಮಾಡುವಂತೆ ನೋಟಿಸ್‌ ನೀಡಲಾಗಿದೆ. ಇಷ್ಟಾದರೂ ಶಬ್ದ ಕಡಿಮೆ ಮಾಡದಿರುವುದು ಕಂಡು ಬಂದರೆ ಅಂಥ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ. ಸಂಬಂಧಪಟ್ಟ ಠಾಣೆ ಇನ್ಸ್‌ಪೆಕ್ಟರ್‌ ಗೆ ಸೂಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಇಲಾಖೆಯಲ್ಲಿ ಭ್ರಷ್ಟಾಚಾರ ಕಂಡುಬಂದ್ರೆ ಕ್ರಮ:
ಪೊಲೀಸ್‌ ಇಲಾಖೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಹೇಗೆ ಕ್ರಮ ಕೈಗೊಳ್ಳುತ್ತೀರಿ, ಕೆಲ ಪ್ರಕರಣಗಳಲ್ಲಿ ಪೊಲೀಸರ ಮೇಲೂ ಭ್ರಷ್ಟಾಚಾರ ಆರೋಪ ಕೇಳಿ ಬರುತ್ತಿವೆ ಎಂದು ಅಶೋಕ್‌ಕುಮಾರ್‌ ಎಂಬುವವರು ಪ್ರಶ್ನೆ ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಂತ್‌, ನಗರ ಪೊಲೀಸರು ಬೆಂಗಳೂರು ಜನರ ಸೇವೆ ಮಾಡುವ ಪ್ರತಿಜ್ಞೆ ಮಾಡಿದ್ದೇವೆ. ಭ್ರಷ್ಟಾಚಾರ ಎಸಗುವವರ ವಿರುದ್ಧ ದೂರು ನೀಡಿದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ರೇವನಾಥ್ ವಿಧಿವಶ

ಪೊಲೀಸರು ಸ್ಪಂದಿಸದಿದ್ದರೆ ನನಗೇ ದೂರು ನೀಡಿ
ಗೂಂಡಾಗಳಿಂದ ಗಲಾಟೆ, ಹಲ್ಲೆ ಅಥವಾ ಯಾವುದೇ ಅಪರಾಧ ಚಟುವಟಿಕೆಗೆ ಸಂಬಂಧಿಸಿದಂತೆ ಸಮೀಪದ ಠಾಣೆಗೆ ದೂರು ನೀಡಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಒಂದು
ವೇಳೆ ಪೊಲೀಸರು ಕ್ರಮ ವಹಿಸದಿದ್ದರೆ, ಖುದ್ದಾಗಿ ನನಗೇ ದೂರು ನೀಡಿದರೆ ನ್ಯಾಯ ಒದಗಿಸುತ್ತೇನೆ ಎಂದು ಭರವಸೆ ನೀಡಿದರು. ಆ ವೇಳೆ ಸೈಯದ್‌ ಫಾರುಕ್‌ ಎಂಬುವರು, ಕೆಲವು
ಗೂಂಡಾಗಳು ತನ್ನ ಮೇಲೆ ಹಲ್ಲೆ ನಡೆಸಿದ ಪರಿಣಾಮ ಗಾಯಗೊಂಡಿದ್ದೇನೆ. ಈ ಸಂಬಂಧ ಪೊಲೀಸರು ಕ್ರಮ ಕೈಗೊಂಡಿಲ್ಲ, ನಂತರ ವಿಧಾನಪರಿಷತ್‌ ಸದಸ್ಯರಿಗೆ ದೂರು ನೀಡಿದರೂ
ಪ್ರಯೋಜನವಾಗಿಲ್ಲ ಎಂದು ಟ್ವಿಟರ್‌ನಲ್ಲಿ ಸಮಸ್ಯೆ ಹೇಳಿಕೊಂಡರು. ಇದಕ್ಕೆ ಪ್ರತಿಕ್ರೀಯಿಸಿದ ಆಯುಕ್ತ ಕಮಲ್‌ ಪಂತ್‌, ಗೂಂಡಾಗಳಿಂದ ಗಲಾಟೆ, ಹಲ್ಲೆ ಅಥವಾ ಯಾವುದೇ ಅಪರಾಧ ಚಟುವಟಿಕೆಗೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್‌ ಠಾಣೆಗೆ ಭೇಟಿ ನೀಡಿ ದೂರು ನೀಡಿದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.