ಸಿವಿಲ್‌ ಪೊಲೀಸ್‌ ಹುದ್ದೆ ಕನಸಿಗೆ ತಣ್ಣೀರು!

ಲಕ್ಷಕ್ಕೂ ಅಧಿಕ ಡಿಪ್ಲೊಮಾ ವಿದ್ಯಾರ್ಥಿಗಳು ಅವಕಾಶ ವಂಚಿತರು

Team Udayavani, Jul 6, 2021, 3:16 AM IST

ಸಿವಿಲ್‌ ಪೊಲೀಸ್‌ ಹುದ್ದೆ ಕನಸಿಗೆ ತಣ್ಣೀರು!

ಕಾರ್ಕಳ: ರಾಜ್ಯ ಪೊಲೀಸ್‌ ಇಲಾಖೆ ಸಿವಿಲ್‌ ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳಿಗೂ ಅವಕಾಶವಿದೆ. ಆದರೆ ಅರ್ಜಿ ಸಲ್ಲಿಕೆಯ ನೋಟಿಫಿಕೇಶನ್‌ನ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಎನ್‌ಐಒಎಸ್‌ ಪ್ರಮಾಣ ಪತ್ರ ಸಲ್ಲಿಸಬೇಕೆಂದು ಉಲ್ಲೇಖೀಸಿರುವುದು ಲಕ್ಷಕ್ಕೂ ಮಿಕ್ಕಿದ ಡಿಪ್ಲೊಮಾ ಅಭ್ಯರ್ಥಿಗಳ ಕನಸಿಗೆ ತಣ್ಣೀರೆರಚಿದೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ತತ್ಸಮಾನ ವಿದ್ಯಾರ್ಹತೆಗೆ ಅನುಗುಣವಾಗಿ ಪಿಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಪಿಯುಸಿ ವಿದ್ಯಾರ್ಹತೆ. ಸಿಬಿಎಸ್‌ಸಿ, ಐಸಿಎಸ್‌ಇ ವಿಷಯದಲ್ಲಿ 12ನೇ ತರಗತಿ ಕಲಿತವರಿಗೆ, ಎನ್‌ಐಒಸಿಯಲ್ಲಿ ಹೈಯರ್‌ ಸೆಕೆಂಡರಿ ಪ್ರಮಾಣ ಪತ್ರ ಪಡೆದವರಿಗೆ ಸಮಸ್ಯೆಯಿಲ್ಲ. ಡಿಪ್ಲೊಮಾ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿದೆ.

ನಿಗದಿತ ವಿದ್ಯಾರ್ಹತೆಯಲ್ಲಿ ಪಿಯುಸಿ ಅರ್ಹತೆ ಹೊಂದದೆ, 3 ವರ್ಷಗಳ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೆ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಓಪನ್‌ ಸ್ಕೂಲಿಂಗ್‌ (ಎನ್‌ಐಒಎಸ್‌) ನಡೆಸುವ ಒಂದು ಭಾಷಾ ಕೋರ್ಸ್‌ ಮತ್ತೂಂದು ಶೈಕ್ಷಣಿಕ ವಿಷಯದಲ್ಲಿ ಉತ್ತೀರ್ಣರಾಗಬೇಕೆಂಬ ಮಾನ ದಂಡವಿದೆ. ಈ ನಿಯಮ ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳಿಗೆ ಲಾಭದಾಯಕ ವಾಗಿಲ್ಲ. ಎನ್‌ಐಒಎಸ್‌ನ ಪರೀಕ್ಷೆ ಬರೆದು ಪ್ರಮಾಣ ಪತ್ರ ಪಡೆಯಲು ಹಲವು ತಿಂಗಳುಗಳು ಹಿಡಿಯುತ್ತವೆ. ಪ್ರಸ್ತುತ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು. 12 ಆಗಿದೆ.

ಅರ್ಜಿ ಸಲ್ಲಿಕೆ ಹಂತದಲ್ಲೇ ಹೊರಕ್ಕೆ
ಎನ್‌ಐಒಎಸ್‌ ಪ್ರಮಾಣ ಪಡೆದಿರಬೇಕೆಂಬ ಕಡ್ಡಾಯ ನಿಯಮದಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಸಾಧ್ಯವಾಗುತ್ತಿಲ್ಲ. ಎನ್‌ಐಒಎಸ್‌ ಕಾಲಂ ಭರ್ತಿ ಮಾಡದೆ ಪ್ರಕ್ರಿಯೆ ಮುಂದೆ ಹೋಗುತ್ತಿಲ್ಲ. ಇದರಿಂದಾಗಿ ರಾಜ್ಯದ 1 ಲಕ್ಷಕ್ಕೂ ಮಿಕ್ಕ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಕೆ ಹಂತದಲ್ಲೇ ಹೊರಗುಳಿಯುತ್ತಿದ್ದಾರೆ.

ಸ್ಪಷ್ಟ ಮಾಹಿತಿ ಯಾರಲ್ಲೂ ಇಲ್ಲ
ಎನ್‌ಐಒಎಸ್‌ ಪ್ರಮಾಣ ಪತ್ರ ಕುರಿತು ಮತ್ತು ಹೊಂದುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಸರಿಯಾದ ಮಾಹಿತಿ ಇಲ್ಲ. ಡಿಪ್ಲೊಮಾ ಕಾಲೇಜು ಸಂಸ್ಥೆಗಳ ಮುಖ್ಯಸ್ಥರಲ್ಲಿ ಕೂಡ ಎನ್‌ಐಒಎಸ್‌ ಬಗ್ಗೆ ಸ್ಪಷ್ಟತೆಯಿಲ್ಲ. ನಮ್ಮಲ್ಲಿ ಎನ್‌ಐಒಎಸ್‌ ಪ್ರಮಾಣ ಪತ್ರ ನೀಡುವ ಕ್ರಮವಿಲ್ಲ. ಡಿಪ್ಲೊಮಾ ಸರ್ಟಿಫಿಕೆಟ್‌ ತಾಂತ್ರಿಕ ಬೋರ್ಡ್‌ ನೀಡುವುದಾದ ಕಾರಣ ಅದರ ಆವಶ್ಯಕತೆ ಇರುವುದಿಲ್ಲ ಎನ್ನುವುದು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಮೆಮೋರಿಯಲ್‌ ಪಾಲಿಟೆಕ್ನಿಕ್‌ ಸಂಸ್ಥೆಯ ಪ್ರಾಂಶುಪಾಲ ಪ್ರಶಾಂತ್‌ ಕುಮಾರ್‌ ಹೊಳ್ಳ ಅವರ ಅಭಿಪ್ರಾಯ.

ತಾಂತ್ರಿಕ ಸಂಸ್ಥೆಗಳ ಹಲವು ಮುಖ್ಯಸ್ಥರಲ್ಲೂ ಎನ್‌ಐಒಎಸ್‌ ಬಗ್ಗೆ ಸ್ಪಷ್ಟ ಉತ್ತರ ಇಲ್ಲ. ಆದ್ದರಿಂದ ಈ ವಿಚಾರ ವಿದ್ಯಾರ್ಥಿಗಳಿಗಂತೂ ತಿಳಿದಿರಲು ಸಾಧ್ಯವೇ ಇಲ್ಲ. ಪೊಲೀಸ್‌ ಪರೀಕ್ಷೆ ಈಗ ಸಾಮಾನ್ಯ ವಿಷಯವಲ್ಲ. ಯಾಕೆಂದರೆ ಪದವಿ, ಸ್ನಾತಕೋತ್ತರ ಪದವಿ, ಬಿಇ ಆದವರೂ ಇದಕ್ಕೆ ಬರುತ್ತಿದ್ದಾರೆ. ಸರಕಾರ ನಿಯಮ ತರುವ ಸಾಕಷ್ಟು ಮುಂಚಿತವಾಗಿ ಈ ಬಗ್ಗೆ ನಮಗೆ ಮಾಹಿತಿ ನೀಡಿದ್ದರೆ ನಾವದನ್ನು ಪಾಲಿಸುತ್ತಿದ್ದೆವು ಎನ್ನುವುದು ವಿದ್ಯಾರ್ಥಿಗಳ ಅಭಿಪ್ರಾಯ.

ಕೆಇಸಿ ಪರೀಕ್ಷೆ ಸರ್ಟಿಫಿಕೆಟ್‌ ಬರಲು 3-4 ತಿಂಗಳ ತೆಗೆದುಕೊಳ್ಳುವುದರಿಂದ ಈ ಬಾರಿಗೆ ಅದು ಸಾಧ್ಯವಿಲ್ಲ. ಸರಕಾರದ ಗಮನ ಸೆಳೆದು ನೊಟಿಫಿಕೇಶನ್‌ನಲ್ಲಿ ಬದಲಾವಣೆ ತರುವುದೊಂದೇ ದಾರಿ. ಅದಕ್ಕೂ ಸಮಯವಿಲ್ಲದ್ದರಿಂದ ವಿದ್ಯಾರ್ಥಿ ಸಂಘಟನೆಗಳು, ಜನಪ್ರತಿನಿಧಿಗಳು ಪ್ರಯತ್ನಿಸಿದರೆ ನೊಟಿಫಿಕೇಶನ್‌ನಲ್ಲಿ ಸಣ್ಣ ಬದಲಾವಣೆ ತಂದು ಸರಿಪಡಿಸಬಹುದು. ಗೃಹ ಸಚಿವರ ಗಮನ ಸೆಳೆಯುವ ಪ್ರಯತ್ನ ಆಗಬೇಕು ಎನ್ನುತ್ತಾರೆ ಕೆಇಸಿ ಗೈಡ್‌ ನೀಡುವ ಸಂಸ್ಥೆಯ ಮುಖ್ಯಸ್ಥರೊಬ್ಬರು.

ಕರ್ನಾಟಕ ಅಡ್ಮಿಸ್ಟ್ರೇಟ್‌ ಟ್ರಿಬ್ಯೂನಲ್‌ (ಕೆಇಟಿ)ಯಲ್ಲಿ ಕೂಡ ನ್ಯಾಯ ಕೇಳಲು ಅವಕಾಶವಿದೆ. ನಮಗೆ ಮಾಹಿತಿ ಇಲ್ಲದೆ ನೋಟಿಫಿಕೇಶನ್‌ ಮಾಡಿರುವುದು ಸಮಂಜಸವಲ್ಲ. ಇದರಿಂದ ನಾವು ವಂಚಿತರಾಗುತ್ತಿದ್ದೇವೆ. ನಮಗೂ ಅವಕಾಶ ಕೊಡಿ ಎನ್ನ‌ಬಹುದು. ಅಲ್ಲಿ ನ್ಯಾಯ ಸಿಕ್ಕರೂ ಸಿಗಬಹುದು ಎನ್ನುವ ಅಭಿಪ್ರಾಯ ಶಿಕ್ಷಣ ಸಂಸ್ಥೆಯ ತಜ್ಞರದ್ದು.

ಸದ್ಯಕ್ಕೆ ಏನು ಮಾಡಬಹುದು?
ರಾಜ್ಯ ಸರಕಾರದ ಮಾನ್ಯತೆ ಇರುವ ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಪ್ರಮಾಣ ಪತ್ರ ಪಡೆದ ಅಭ್ಯರ್ಥಿಗೆ ಸಿಪಿಎಸ್‌ ಪರೀಕ್ಷೆಗೆ ಅನುವು ಮಾಡಿಕೊಡಬೇಕು. ಪ್ರಸ್ತುತ ಮಾರ್ಗಸೂಚಿಯಲ್ಲಿ ಬದಲಾವಣೆಗಳಾಗಬೇಕು. ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ವಿಷಯಕ್ಕೆ ಸಂಬಂಧಿಸಿ ನೇಮಕಾತಿ ಸಂದರ್ಭ ಪ್ರತ್ಯೇಕ ಪರೀಕ್ಷೆ ನಡೆಸಿ ಅವಕಾಶ ಕಲ್ಪಿಸಿಕೊಡುವುದು. ಪ್ರೊಬೆಷನರಿ ಒಳಗಡೆ ಸರ್ಟಿಫಿಕೆಟ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕು ಎನ್ನುವುದು ವಂಚಿತ ಅಭ್ಯರ್ಥಿಗಳ ಬೇಡಿಕೆ.

– ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.