ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ‌: ಬೆಂಗಳೂರು ರಸ್ತೆಗಳ ಕುರಿತು ಚರ್ಚೆ


Team Udayavani, Sep 9, 2022, 11:52 AM IST

ನಿತಿನ್ ಗಡ್ಕರಿ ಭೇಟಿ ಮಾಡಿದ ಸಿಎಂ ಬೊಮ್ಮಾಯಿ‌: ಬೆಂಗಳೂರು ರಸ್ತೆಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳು ಹಾಗೂ ಬೆಂಗಳೂರು ನಗರ ಸುಗಮ ಸಂಚಾರದ ಕುರಿತು ಚರ್ಚಿಸಿದರು. ಕೇಂದ್ರ ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್, ರಾಜ್ಯದ ಸಾರಿಗೆ ಸಚಿವ ವಿ.ಶ್ರೀರಾಮುಲು, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಇವತ್ತು ಪಿಡಬ್ಲುಡಿ, ಬಿಬಿಎಂಪಿ ಅಧಿಕಾರಿಗಳು, ಫೈನಾನ್ಸ್ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೀವಿ. ಯಾವ ರೀತಿ ಇಡೀ ರಾಜ್ಯದ‌ ನ್ಯಾಷನಲ್ ಹೈವೇ ಪ್ರಾಜೆಕ್ಟ್ ಜಾರಿಗೆ ತರಬೇಕು, ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗೊರಗುಂಟೆ ಪಾಳ್ಯ ಫ್ಲೈಓವರ್ ನ ಎಲೆವೇಟರ್ ರೋಡ್‌ನ ಹೇಗೆ ಆಪರೇಟ್ ಮಾಡಬೇಕು, ಭಾರೀ ವಾಹನಗಳು ಈಗಾಗಲೇ ಬಂದ್ ಆಗಿವೆ. ಕೇಬಲ್ ಮಾಡೋದಕ್ಕೆ ಯಾರಿಗೆ ವಹಿಸಬೇಕು ಎನ್ನುವುದನ್ನು ಅವರೇ‌ ನಿರ್ಧರಿಸುತ್ತಾರೆ ಎಂದರು.

ಬೆಂಗಳೂರು ಸಂಬಂಧ ಎಸ್ ಟಿಆರ್ ಆರ್ ರಸ್ತೆಯಲ್ಲಿ ಕೆಲವು ವಿನಾಯತಿ ಕೊಡಬೇಕಿದೆ. ಆ ವಿನಾಯತಿಗಳನ್ನು ಕೊಡುವ ಬಗ್ಗೆ ನಾವು ಒಪ್ಪಿಕೊಂಡಿದ್ದೇವೆ. ಇದು ಕೂಡ ವೇಗದಲ್ಲಿ‌ ನಡೆಯಲಿದೆ. ಒಂದು ಸಣ್ಣ ಪ್ಯಾಚ್ ಇತ್ತು, ಅದನ್ನು ಕೂಡ ಜೋಡಣೆ ಮಾಡಲು ಹೇಳಿದ್ದೇವೆ. ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದೇವೆ. ಬೆಂಗಳೂರು ಮೈಸೂರು ಹೈವೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಅದನ್ನು ಪೂರ್ಣ ಆಡಿಟ್ ಮಾಡಲು ಹೇಳಿದ್ದೇವೆ. ರೋಡ್ ಆಡಿಟ್ ಮತ್ತು ಡ್ರೈ ನೇಜ್ ಆಡಿಟ್ ಮಾಡಲಾಗುವುದು. ಡ್ರೈನೇಜ್ ಕ್ಯಾರಿಂಗ್ ಕೆಪಾಸಿಟಿ ಹೆಚ್ಚಿಸಬೇಕಿದೆ ಎಂದರು.

ಇದನ್ನೂ ಓದಿ:ಪ್ರತ್ಯೇಕ ಲಾಂಛನ: ಗ್ರಾ. ಪಂ. ಜನಪ್ರತಿನಿಧಿಗಳ ಬೇಡಿಕೆ  

ಬೆಂಗಳೂರಿಗೆ ಬರುವ ಬಾಂಬೆ ಎಕ್ಸ್ ಪ್ರೆಸ್ ಇರಬಹುದು, ಚೆನ್ನೈ ಎಕ್ಸ್ ಪ್ರೆಸ್ ಇರಬಹುದು, ಇವುಗಳಿಗೆ ಸಿಟಿಇ ಇಂಟರ್‌ ಕನೆಕ್ಟಿವಿಟಿ ಹೇಗೆ ಮಾಡಬೇಕು ಎನ್ನುವ ಬಗ್ಗೆ ತೀರ್ಮಾನ ಮಾಡಲಾಗಿದೆ. ನ್ಯಾಷನಲ್‌ ಹೈವೇಯಲ್ಲಿ ಕೆಲವೆಡೆ ಸ್ಕೈವಾಕ್, ಬ್ರಿಡ್ಜ್, ಅಂಡರ್ ಪಾಸ್ ಮಾಡುವುದಿದೆ. ಅದರ ಬಗ್ಗೆಯೂ ಪ್ರಸ್ತಾಪ ಮಾಡಿದ್ದೇವೆ. ಇವತ್ತು ಚರ್ಚೆ‌ ಮಾಡಿರುವ ಎಲ್ಲಾ ವಿಚಾರಗಳು ತುರ್ತಾಗಿ ನಡೆಯುತ್ತವೆ. ಇದೇ ವರ್ಷ ಕೆಲಸಗಳು ಪ್ರಾರಂಭವಾಗಬೇಕೆನ್ನುವುದೇ ನಮ್ಮ ಉದ್ದೇಶ. ಆ ನಿಟ್ಟಿನಲ್ಲಿ ಕೆಲಸಗಳು ನಡೆಯಲಿವೆ. ರಾ.ಹೆದ್ದಾರಿ ಪ್ರಾಧಿಕಾರ‌ ಕಡೆಯಿಂದ ಹಣ ಒದಗಿಸಿ ಕೊಡುವುದಾಗಿ ಹೇಳಿದ್ದಾರೆ. ಒಟ್ಟಾರೆ‌ ಸಂಚಾರಕ್ಕಾಗಿಯೇ ಒಂದು ಅಥಾರಿಟಿ ಮಾಡಬೇಕಿದೆ. ಅದನ್ನ ಬರುವಂತಹ ಸದನದಲ್ಲಿ‌ ಜಾರಿಗೆ ತರುತ್ತೇವೆ ಎಂದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.