
ಬಾಂಗ್ಲಾ ವಿಮೋಚನಾ ಯುದ್ಧದ ಸುವರ್ಣ ಸಂಭ್ರಮ: ಗಣ್ಯರ ಸ್ಮರಣೆ
Team Udayavani, Dec 16, 2021, 10:48 AM IST

ಬೆಂಗಳೂರು: 1971ರ ಬಾಂಗ್ಲಾ ವಿಮೋಚನಾ ಯುದ್ಧದ ವಿಜಯೋತ್ಸವಕ್ಕೆ ಇಂದು 50 ವರ್ಷದ ಸಂಭ್ರಮ. ಈ ನಿಟ್ಟಿನಲ್ಲಿ ಇಡೀ ದೇಶಾದ್ಯಂತ ಸಂಭ್ರಮಾಚರಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಗಣ್ಯರು ಈ ಮಹೋನ್ನತದ ದಿನದ ಸ್ಮರಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಮರಣೆ ಮಾಡಿದ್ದು, “ವಿಜಯ್ ದಿವಸ್, ಬಾಂಗ್ಲಾದೇಶದ ವಿಮೋಚನೆಗೆ ಕಾರಣವಾದ 1971 ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ನಿರ್ಣಾಯಕವಾಗಿ ಸೋಲಿಸಿದ ಐತಿಹಾಸಿಕ ದಿನವಾಗಿದೆ. ದೇಶಕ್ಕಾಗಿ ಹೋರಾಡಿದ ನಮ್ಮ ಧೀರ ಹೃದಯಗಳಿಗೆ ನಾನು ವಂದಿಸುತ್ತೇನೆ. ಬನ್ನಿ ಈ #SwarnimVijayVarsh ದಂದು ನಮ್ಮ ಧೀರರನ್ನು ಸ್ಮರಿಸೋಣ ಎಂದು ಕೂ ಮಾಡಿದ್ದಾರೆ.
ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ನೀಡಿ ಅಲ್ಲಿನ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಿದ #VijayDiwas ರಂದು ಭಾರತೀಯ ಯೋಧರ ಶೌರ್ಯ, ತ್ಯಾಗ, ಸಮರ್ಪಣೆಗೆ ಗೌರವದ ಪ್ರಣಾಮಗಳನ್ನು ಸಲ್ಲಿಸೋಣ. ಪಾಕಿಸ್ತಾನಕ್ಕೆ ಪಾಠ ಕಲಿಸಿ ಭಾರತದ ಶಕ್ತಿ ತೋರಿದ ಯೋಧರ ಸಾಹಸ, ರಾಷ್ಟ್ರಪ್ರೇಮ ಸ್ಮರಣಾರ್ಹವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಇದನ್ನೂ ಓದಿ:ಭಾರತ ಸೇನೆಯ ವಿಜಯಗಾಥೆ ಸರಣಿ: ಪಾಕ್ ಸೈನಿಕರ ಹೆಣಗಳ ರಾಶಿ ಮೇಲೆ ನಡೆದಿದ್ದೆವು!
ಮಾಜಿ ಪ್ರಧಾನಿ, ಉಕ್ಕಿನ ಮಹಿಳೆ ಶ್ತೀಮತಿ ಇಂದಿರಾ ಗಾಂಧಿ ಅವರ ದಿಟ್ಟ, ಚಾಣಾಕ್ಷ ನಿರ್ಧಾರಗಳಿಂದ ಪಾಕಿಸ್ತಾನವನ್ನು ಬಗ್ಗು ಬಡಿದು, ಪೂರ್ವ ಪಾಕಿಸ್ತಾನವನ್ನು ಅದರ ಕಪಿಮುಷ್ಠಿಯಿಂದ ವಿಮುಕ್ತಿಗೊಳಿಸಿ ’ಬಾಂಗ್ಲಾದೇಶ’ಉದಯಕ್ಕೆ ಕಾರಣವಾದ, ಐತಿಹಾಸಿಕ ’ವಿಜಯ ದಿನ’ ದಂದು ಭಾರತೀಯ ಸೈನ್ಯದ ಅಪ್ರತಿಮ ಶೌರ್ಯ, ಸಾಹಸ, ಬಲಿದಾನವನ್ನು ಸ್ಮರಿಸುತ್ತೇವೆ ಎಂದು ಕರ್ನಾಟಕ ಕಾಂಗ್ರೆಸ್ ಕೂ ಮಾಡಿದೆ.
“ನೀವು ಶರಣಾಗಿ ಅಥವಾ ನಾವು ನಿಮ್ಮನ್ನು ಅಳಿಸಿ ಹಾಕುತ್ತೇವೆ”- ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್ ಷಾ ಅವರ 13ನೇ ಡಿಸೆಂಬರ್ 1971 ರಂದು ಪಾಕಿಸ್ತಾನಕ್ಕೆ ಹೇಳಿದ ಮಾತು. ಬಾಂಗ್ಲಾದೇಶದ ವಿಮೋಚನೆ ಯುದ್ಧದ ಸಂದರ್ಭದಲ್ಲಿ ವೀರ ಸೇನಾಧಿಕಾರಿ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ದಿಟ್ಟ ನಾಯಕತ್ವದ ಪರಿಣಾಮ, 93,000 ಪಾಕ್ ಸೈನಿಕರು ಭಾರತಕ್ಕೆ ಶರಣಾಗಿದ್ದರು ಎಂದು ಸಚಿವ ಕೆ. ಸುಧಾಕರ್ ಸ್ಮರಣೆ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಮೊದಲ ಬಾರಿ ಮಗಳ ಮುಖ ರಿವೀಲ್ ಮಾಡಿದ ಪಿಂಕಿ: ವೈರಲ್ ಆಯಿತು ಕ್ಯೂಟ್ ಮಾಲ್ತಿ ಫೋಟೋ

ದೆಹಲಿ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಿವಾಹಿತ ಮಹಿಳೆ ಮೇಲೆ ಗುಂಡಿನ ದಾಳಿ; ಮೃತ್ಯು

ರಸ್ತೆ ಬದಿ ನಿಂತಿದ್ದವರ ಮೇಲೆ ಸಾಮೂಹಿಕ ಗುಂಡಿನ ದಾಳಿ: 9 ಮಂದಿಗೆ ಗಾಯ

ಉದ್ದಿಮೆಗಳ ಖಾತಾ ಬದಲಾವಣೆ ಸಮಸ್ಯೆಗೆ ತ್ವರಿತ ಪರಿಹಾರ: ಅತಿಕ್

ದೊಡ್ಡ ಟ್ರೋಫಿ ಇನ್ನೂ ಒಂದಿದೆ: ಶಫಾಲಿ ವರ್ಮ