ಪ್ರತಿಭಟನೆ ಬಿಜೆಪಿಯ ಅಂತ್ಯಕ್ಕೆ ಮುನ್ನುಡಿ: ಡಿ.ಕೆ.ಶಿವಕುಮಾರ್‌

ಮಂಗಳೂರು ಘಟನೆಗೆ ಸಿಎಂ, ಬೊಮ್ಮಾಯಿ ಹೊಣೆ

Team Udayavani, Dec 20, 2019, 6:37 PM IST

DK-d

ಬೆಂಗಳೂರು: ದೇಶದಲ್ಲಿ ಬ್ರಿಟಿಷರನ್ನು ಓಡಿಸಲು ಸಾವಿರಾರು ಜನ ತ್ಯಾಗ ಮಾಡಿದ್ದಾರೆ. ಅದೇ ರೀತಿ ಬಿಜೆಪಿಯನ್ನು ಓಡಿಸಲು ಜನರು ಮತ್ತೆ ದಂಗೆ ಏಳಲು ಆರಂಭಿಸಿದ್ದಾರೆ. ಇದು ಬಿಜೆಪಿಯ ಅಂತ್ಯಕ್ಕೆ ಮುನ್ನುಡಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಭವಿಷ್ಯ ನುಡಿದಿದ್ದಾರೆ.

ಶುಕ್ರವಾರ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನಾವಶ್ಯಕ ನಿಷೇಧಾಜ್ಞೆ ಜಾರಿಯಿಂದ ಅಹಿತರಕ ಘಟನೆ ನಡೆಯಲು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿಯೇ ಹೊಣೆ ಎಂದು ಹೇಳಿದರು.

ಅಹಿತರ ಬೆಳವಣಿಗೆ ಬಗ್ಗೆ ತಮ್ಮ ಪಕ್ಷದ ಯಾವುದೇ ನಾಯಕರಿಗೆ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ಧಾರೆ. ಈ ಮೂಲಕ ರಾಜ್ಯದ ಎಲ್ಲ ಘಟನೆಗಳಿಗೆ ಬಿಜೆಪಿ ನಾಯಕರ ಹೇಳಿಕೆಗಳೇ ಪ್ರೇರಣೆ ಎನ್ನುವುದನ್ನು ಅವರೇ ಒಪ್ಪಿಕೊಂಡಿದ್ಧಾರೆ.

ರಾಜ್ಯದಲ್ಲಿ ಏನಾಗಿದೆ ಎಂದು 144 ಸೆಕ್ಸೆನ್‌ ಹಾಕಿದ್ದೀರಿ. ಯಾರೂ ಮನೆಯಲ್ಲಿ ಮದುವೆ ಮಾಡಬಾರದಾ? ಜನರು ತಮ್ಮ ಅಭಿಪ್ರಾಯವನ್ನು ಸಾರ್ವಜನಿಕವಾಗಿ ಹೇಳಬಾರದಾ? ಜನರ ಅಭಿಪ್ರಾಯ ಹತ್ತಿಕ್ಕುವ ಕೆಲಸ ಮಾಡುತ್ತಿದ್ದೀರಿ. ಬ್ರಿಟೀಷರಿಗಿಂತ ಬಿಜೆಪಿ ಜನರ ಸ್ವಾತಂತ್ರ್ಯ ಕಿತ್ತುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಜನರು ನೇರವಾಗಿ ಸಂಸತ್ತಿನಲ್ಲಿ ಹೋಗಿ ಹೇಳಲು ಆಗುವುದಿಲ್ಲ ಎಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಲು ಅವಕಾಶ ಇದೆ. ಪ್ರತಿಭಟನಾಕಾರರು ತಮ್ಮ ಅಭಿಪ್ರಾಯ ಹೇಳಿ ಹೋಗುತ್ತಿದ್ದರು ಎಂದರು.

ಬಿಜೆಪಿ ನಾಯಕರು ಸಂವಿಧಾನ ಮುಗಿಸಲು ಈ ಮೂಲಕ ಬುನಾದಿ ಹಾಕುತ್ತಿದ್ಧಾರೆ. ಮಹಾತ್ಮಾ ಗಾಂಧಿ, ನೆಹರು ನಾಯಕತ್ವದಲ್ಲಿ ಅಂಬೇಡ್ಕರ್‌ ಸಂವಿಧಾನಕ್ಕೆ ಅಡಿಪಾಯ ಹಾಕಿದ್ಧಾರೆ.ಅದನ್ನು ಮುಗಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಈಗ ಜಾರಿಗೆ ತಂದಿರುವ ಕಾಯಿದೆ ಸಂವಿಧಾನ ಬಾಹಿರ, ಇದು ಜನರ ನಂಬಿಕೆಯ ವಿರುದ್ಧವಾಗಿದೆ. ಅಂತಾರಾಷ್ಟ್ರೀಯ ಕಾಯಿದೆ ಹಾಗೂ ಜನರ ವಿರುದ್ಧ ಇದೆ. ಇಡೀ ದೇಶದ ಕಾನೂನಿನ ಮೇಲೆ ಜನರಿಗೆ ಇರುವ ನಂಬಿಕೆಯನ್ನು ಕಳೆಯುವ ಕೆಲಸ ಮಾಡುತ್ತಿದೆ ಎಂದು ವಾಗ್ಧಾಳಿ ನಡೆಸಿದರು.

ಸರ್ಕಾರ ಜನರಿಗೆ ಉದ್ಯೋಗ ಅನ್ನ ನೀಡಿ, ಜನರು ಉದ್ಯೋಗ ಕಳೆದುಕೊಳ್ಳುತ್ತಿದ್ಧಾರೆ. ಇದು ಕೇವಲ ಅಲ್ಪ ಸಂಖ್ಯಾತರಿಗೆ ಪರಿಣಾಮ ಬೀರುವುದಿಲ್ಲ. ಇಡೀ ದೇಶದ ಮೇಲೆ ಪರಿಣಾಮ ಬೀರುತ್ತಿದೆ. ನಿಮಗೆ ಪ್ರಮಾಣ ಪತ್ರ ನೀಡದಿದ್ದರೆ ಜೈಲಿಗೆ ಹಾಕುತ್ತೀರಾ ಎಷ್ಟು ಜನರನ್ನು ಜೈಲಿಗೆ ಹಾಕುತ್ತೀರಾ. ಇಡೀ ದೇಶ ಒಗ್ಗಟ್ಟಾಗಿ ಬದುಕುತ್ತಿದೆ. ವಿಶ್ವ ಭಾರತವನ್ನು ನೋಡುತ್ತಿದೆ. ಇದು ಇಡೀ ದೇಶ ಅವಮಾನ ಪಡುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಅಮಿತ್‌ ಶಾ ಹೊಣೆಯಾಗಿದ್ಧಾರೆ ಎಂದು ಆರೋಪಿಸಿದರು.

ಈಗಿರುವ ದೇಶದ ಮಕ್ಕಳಿಗೆ ಉದ್ಯೋಗ ಕೊಡಲು ಆಗುತ್ತಿಲ್ಲ. ಹೊರಗಿನವರನ್ನು ತಂದು ಅವರನ್ನು ನಿರಾಶ್ರಿತರನ್ನಾಗಿಸುತ್ತಿದ್ಧಾರೆ.ಯಾರೂ ಯಾವ ಧರ್ಮದಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ಬಿಜೆಪಿಯ ಸುಳ್ಳುಗಳು ದೇಶದ ಯುವಕರನ್ನು ಕೊಲ್ಲುತ್ತಿವೆ. ಸುಳ್ಳನ್ನು ಸತ್ಯ ಎಂದು ಪ್ರಚುರಪಡಿಸುವ ಅವರ ಸಾಮಾಜಿಕ ಜಾಲತಾಣಗಳನ್ನು ಸ್ಥಗಿತಗೊಳಿಸುವಂತೆ ಶಿವಕುಮಾರ್‌ ಒತ್ತಾಯಿಸಿದರು.

ಜನರ ಜೊತೆ ಕಾಂಗ್ರೆಸ್‌: ಮಾಧ್ಯಮದವರನ್ನು ಬಂಧನ ಮಾಡುವ ಬಿಜೆಪಿ ಸರ್ಕಾರ ಪ್ರಚೋದನೆ ಮಾಡಿರುವ ತನ್ನ ಕಾರ್ಯಕರ್ತರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ. ಕೇಂದ್ರ ಸರ್ಕಾರ ದೇಶದ ಮಾಲಿಕರಲ್ಲ ಅವರು ಜನರ ಸೇವಕರು ಮಾತ್ರ.ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಬೇರೆ ದೇಶಗಳಲ್ಲಿ ಭಾರತದ ಬಗ್ಗೆ ಕೆಟ್ಟದಾಗಿ ಮಾತನಾಡುವಂತಾಗಿದೆ. ಯಡಿಯೂರಪ್ಪ ಸಹ ಸ್ವಾತಂತ್ರÂ ಹೋರಾಟಗಾರರಲ್ಲ. ಜನರು ತಮ್ಮ ಹಕ್ಕಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿದ್ಧಾರೆ. ಅವರ ಜೊತೆಗೆ ಕಾಂಗ್ರೆಸ್‌ ಇದೆ. ಶಾಸಕ ಯು.ಟಿ. ಖಾದರ್‌ ಯಾವುದೇ ರೀತಿಯ ಪ್ರಚೋದನಾತ್ಮಕ ಹೇಳಿಕೆ ನೀಡಿಲ್ಲ. ಬಿಜೆಪಿಯ ಎಷ್ಟು ನಾಯಕರು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರೆ. ನಾವೂ ಕೂಡ ಬೀದಿಗಿಳಿದು ಹೋರಾಟ ಮಾಡುತ್ತೇವೆ. ಕಾಂಗ್ರೆಸ್‌ ಇನ್ನೂ ಜೀವಂತವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.