ರಾಜ್ಯ ಬಜೆಟ್ ಗೆ ಮುನ್ನವೇ ಸಂಪುಟ ವಿಸ್ತರಣೆಗಾಗಿ ಸಿಎಂ ಸರ್ಕಸ್; ವಿಜಯೇಂದ್ರಗೆ ಮಣೆ?
ರಾಜ್ಯಕ್ಕೆ ವಾಪಾಸ್ ಆಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ
Team Udayavani, Feb 7, 2022, 10:57 AM IST
ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸಂಪುಟ ವಿಸ್ತರಣೆ ಬೇಡಿಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಸ್ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ:ಇವತ್ತು ಹಿಜಾಬ್, ನಾಳೆ ಬುರ್ಕಾ: ಎಲ್ಲಾ ಬೇಡಿಕೆ ಈಡೇರಿಸಲಾಗುತ್ತಾ; ಭರತ್ ಶೆಟ್ಟಿ ಆಕ್ರೋಶ
ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ಪಡೆಯುವುದು ಸೇರಿದಂತೆ ನಾನಾ ಕಾರಣಗಳಿಗಾಗಿ ರಾಜ್ಯದ ಸಂಸದರ ಜತೆ ಸಭೆ ನಡೆಸುವುದಕ್ಕಾಗಿ ಬೊಮ್ಮಾಯಿ ಸೋಮವಾರ ದಿಲ್ಲಿಗೆ ಭೇಟಿ ನೀಡಿದ್ದಾರೆ. ಅವರು ರಾಜ್ಯಕ್ಕೆ ವಾಪಾಸ್ ಆಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜತೆಗೆ ಚರ್ಚೆ ನಡೆಸುವುದಕ್ಕೆ ಸಮಯ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ.
ವಿಜಯೇಂದ್ರ ಇನ್ ?: ಬಿಜೆಪಿ ಮೂಲಗಳ ಪ್ರಕಾರ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪ ಎರಡು ಬಾರಿ ಬೊಮ್ಮಾಯಿ ಅವರಿಗೆ ನಿರ್ದೇಶನ ನೀಡಿದ್ದಾರೆ. ಬೊಮ್ಮಾಯಿ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಆದರೆ ವರಿಷ್ಠರಿಂದ ಇನ್ನೂ ಸಮ್ಮತಿ ದೊರೆತಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಇದೇ ದೊಡ್ಡ ತೊಡಕಾಗಿ ಪರಿಣಮಿಸಿದೆ.
ಅದೇ ಪಂಚಮಸಾಲಿ ಲಿಂಗಾಯಿತ ಸಮುದಾಯದಿಂದ ಯಾರನ್ನು ಕೈ ಬಿಟ್ಟು ಯಾರನ್ನು ಸೇರಿಸಿಕೊಳ್ಳಬೇಕೆಂಬುದು ಇನ್ನೂ ಇತ್ಯರ್ಥವಾಗಿಲ್ಲ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಸಂಪುಟ ಸೇರ್ಪಡೆಗೆ ಬೇರೆ ಬೇರೆ ಮೂಲಗಳಿಂದ ಭಾರಿ ಒತ್ತಡ ಹೇರುತ್ತಿದ್ದಾರೆ. ಇವರಿಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿದ್ದರೆ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಸಿ.ಸಿ.ಪಾಟೀಲ್ ಪೈಕಿ ಇಬ್ಬರನ್ನು ಕೈ ಬಿಡಬೇಕಾಗುತ್ತದೆ. ಇದು ಕೂಡಾ ಬೊಮ್ಮಾಯಿ ಅವರಿಗೆ ಸವಾಲಿನ ಕೆಲಸವಾಗಿದೆ.
ಉತ್ತರ ಪ್ರದೇಶದ ಚುನಾವಣೆಯವರೆಗೆ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗೆ ಅವಕಾಶ ನೀಡುವುದು ಬೇಡ ಎಂಬುದು ವರಿಷ್ಠರ ಲೆಕ್ಕಾಚಾರ. ಅಲ್ಲಿಯವರೆಗೆ ಕಾಯುವುದಕ್ಕೆ ಆಕಾಂಕ್ಷಿಗಳು ಸಿದ್ದರಿಲ್ಲ. ಹೀಗಾಗಿ ಬಜೆಟ್ಗೆ ಮುನ್ನವೇ ವಿಸ್ತರಣೆ ಅಥವಾ ಪುನಾರಚನೆ ಕೆಲಸ ಪರ್ಣಗೊಳಿಸುವಂತೆ ಸಿಎಂ ಬೊಮ್ಮಾಯಿ ವರಿಷ್ಠರ ಮೇಲೆ ಒತ್ತಡ ಹೇರಲು ನರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್