ಎಚ್ಡಿಕೆ ಕರೆಯಲೇ ಇಲ್ಲ,ಹಾಗಾಗಿ ಮಂಡ್ಯ ಕೈ ನಾಯಕರು ತಟಸ್ಥ
ಕಾಂಗ್ರೆಸ್ ತಟಸ್ಥವಾಗಲು ಸಿಎಂ ಧೋರಣೆ ಕಾರಣ : ಕೆ.ಬಿ.ಚಂದ್ರಶೇಖರ್
Team Udayavani, May 14, 2019, 9:14 AM IST
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ನಡೆದರೂ ಕಾಂಗ್ರೆಸ್ ತಟಸ್ಥವಾಗಿರಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಚಂದ್ರಶೇಖರ್, ಮುಖ್ಯಮಂತ್ರಿ ಅವರು ನಮ್ಮನ್ನು ಮಗನ ಪರ ಪ್ರಚಾರಕ್ಕೆ ಕರೆಯಲಿಲ್ಲ. ಸ್ವಾಭಿಮಾನಿಗಳಾದ ನಾವು ಪ್ರಚಾರಕ್ಕೆ ಹೋಗದೆ ತಟಸ್ಥವಾಗಿ ಉಳಿದೆವು ಎಂದರು.
ಹಾಸನದಲ್ಲಿ, ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಗಳಾದ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ರೇವಣ್ಣ ಅವರು ಕಾಂಗ್ರೆಸ್ ನಾಯಕರ ಮನೆಗಳಿಗೆ ತೆರಳಿ ತಮ್ಮ ಪರ ಪ್ರಚಾರ ಮಾಡುವಂತೆ ಕೇಳಿಕೊಂಡಿದ್ದರಲ್ಲ ಎಂದರು.
ಕುಮಾರಸ್ವಾಮಿ ಅವರು ನಮ್ಮೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಿದ್ದರೆ , ಸಂಸದ ಶಿವರಾಮೇಗೌಡ ಅವರು ಗೆದ್ದ ಎರಡು ಪಟ್ಟು ಹೆಚ್ಚು ಅಂತರದಿಂದ ಗೆಲ್ಲಿಸಿ ಕೊಡುತ್ತಿದ್ದೆವು ಎಂದರು.
10 ಕೋಟಿ ಪಡೆದಾಗಿದೆ
ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣ ಗೌಡರಿಗೆ ಬಿಜೆಪಿಯವರು 10 ಕೋಟಿ ರೂಪಾಯಿ ನೀಡಿದ್ದಾರೆ. ಮೇ 23 ರನಂತರ ನಾರಾಯಣ ಗೌಡ ಮುಂಬಯಿಗೆ ಹಾರುತ್ತಾರೆ ಎಂದು ಗಂಭೀರ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ