ಕಸ್ತೂರಿ ರಂಗನ್ ವರದಿ ಜಾರಿಗೆ ಸಿಎಂ ಆಕ್ಷೇಪ
Team Udayavani, May 22, 2020, 6:05 AM IST
ಬೆಂಗಳೂರು: ಪಶ್ಚಿಮ ಘಟ್ಟ ಸಂರಕ್ಷಣೆ ಬಗ್ಗೆ ಸಂಬಂಧಪಟ್ಟ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಸಿಎಂ ಯಡಿಯೂರಪ್ಪ ಪ್ರತಿಪಾದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳೊಂದಿಗೆ ಪ್ರತ್ಯೇಕವಾಗಿ ಚರ್ಚಿ ಸುವುದಾಗಿ ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಭರವಸೆ ನೀಡಿದ್ದಾರೆ.
ಡಾ| ಕಸ್ತೂರಿ ರಂಗನ್ ವರದಿ ಜಾರಿ ಹಿನ್ನೆಲೆಯಲ್ಲಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಬಗ್ಗೆ ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರು ಕರ್ನಾಟಕ, ಮಹಾರಾಷ್ಟ್ರ, ಕೇರಳ, ಗೋವಾ, ತ. ನಾಡು ಹಾಗೂ ಗುಜರಾತ್ ಸಿಎಂಗಳ ಜತೆ ಗುರುವಾರ ವೀಡಿಯೋ ಸಂವಾದ ನಡೆಸಿದರು.
ಈ ಸಂದರ್ಭ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ನಾನಾ ಹಂತಗಳ ಜನಪ್ರತಿನಿಧಿಗಳು ಮಾತ್ರವಲ್ಲದೆ ಸಚಿವ ಸಂಪುಟವೂ ಕಸ್ತೂರಿರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ರೂಪದಲ್ಲಿ ತಿರಸ್ಕರಿಸಿದೆ.
ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸಿರುವುದನ್ನು ತಿರಸ್ಕರಿಸಲಾಗಿದೆ. ಪ್ರತೀ ರಾಜ್ಯದ ಸಮಸ್ಯೆಗಳು, ಸವಾಲುಗಳು ವಿಭಿನ್ನವಾಗಿರುತ್ತವೆ. ಹಾಗಾಗಿ ಕೇಂದ್ರ ಸರಕಾರವು ಎಲ್ಲ ರಾಜ್ಯಗಳಿಗೆ ಏಕರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದು ಸ್ಪಷ್ಟವಾಗಿ ಪ್ರತಿಪಾದಿಸಿದರು.
ಇದಕ್ಕೆ ಸಹಮತ ವ್ಯಕ್ತಪಡಿಸಿದ ಪ್ರಕಾಶ್ ಜಾಬ್ಡೇಕರ್ ಅವರು, ಪ್ರತೀ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಪ್ರತ್ಯೇಕವಾಗಿ ಆಯಾ ರಾಜ್ಯಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು ಎಂದು ಸಿಎಂ ಸಚಿವಾಲಯದ ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಸಲಹೆ
ವೀಡಿಯೋ ಸಂವಾದದ ವೇಳೆ ಯಡಿಯೂರಪ್ಪ ಅವರೇ ಮೊದಲಿಗೆ ಮಾತನಾಡಿದರು. ಪಶ್ಚಿಮ ಘಟ್ಟ ಶ್ರೇಣಿ ಸಂರಕ್ಷಣೆಗೆ ಸಂಬಂಧಪಟ್ಟಂತೆ ಏಕರೂಪದ ಅಧಿಸೂಚನೆ ಸರಿಯಲ್ಲ. ರಾಜ್ಯದಲ್ಲಿ ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವುದರಿಂದ ಸಾವಿರಾರು ಜನರ ಜೀವನ ಏರುಪೇರಾಗುತ್ತದೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳದೆ ಏಕರೂಪದ ಅಧಿಸೂಚನೆ ಹೊರಡಿಸಿದರೆ ಪ್ರಯೋಜನವಾಗದು. ಹಾಗಾಗಿ ರಾಜ್ಯಗಳ ಸಮಸ್ಯೆಯನ್ನು ಪ್ರತ್ಯೇಕವಾಗಿ ಆಲಿಸಿ ಪರಿಶೀಲಿಸುವುದು ಒಳಿತು ಎಂದು ಸಲಹೆ ನೀಡಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ