ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ : ಈಶ್ವರಪ್ಪ
Team Udayavani, Jul 23, 2021, 11:16 AM IST
ಚಿತ್ರದುರ್ಗ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬಿ ಎಸ್ ಯಡಿಯೂರಪ್ಪ ಈಗಾಗಲೇ ಈ ಬಗ್ಗೆ ಹೇಳಿದ್ದಾರೆ. ರಾಷ್ಟ್ರೀಯ ನಾಯಕರ ಆದೇಶ ಪಾಲಿಸುವುದಾಗಿ ತಿಳಿಸಿದ್ದಾರೆ. ರಾಜ್ಯದ ಬಿಜೆಪಿ ಕಾರ್ಯಕರ್ತರು ಸಿಎಂ ಹೇಳಿಕೆ ಮೆಚ್ಚಿಕೊಂಡಿದ್ದಾರೆ. ಜುಲೈ 25ಕ್ಕೆ ಬರುವ ಸೂಚನೆಯನ್ನು 26ಕ್ಕೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ ಎಂದು ಚಿತ್ರದುರ್ಗದಲ್ಲಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಪರೀಕ್ಷೆ ಬರೆದು ಪಾಸಾಗಿದ್ದೇವೆಂದ ಸಚಿವ ಯೊಗೀಶ್ವರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಈಶ್ವರಪ್ಪ, ಅದೆಲ್ಲ ಹಳೇ ಓಬಿರಾಯನ ಕಥೆಗಳು ಅಂತಾರಲ್ಲ ಹಾಗೇ.. ಯೊಗೀಶ್ವರ್, ಯತ್ನಾಳ್, ಬೆಲ್ಲದ್ ಹೀಗೆ ಅಂದರು ಅನ್ನೋದೆಲ್ಲ ಮುಗೀತು. ರಾಷ್ಟ್ರೀಯ ನಾಯಕರು, ಬಿಎಸ್ ವೈ ಮಾತು ಅಷ್ಟೇ ಉಳಿದಿರುವುದು. ಇನ್ನು ಯಾರ ಮಾತಿಗೂ ಬೆಲೆ ಇಲ್ಲ. ಸಂಚು ಏನು ಅಲ್ಲ ಅವರ ಭಾವನೆ ಹೇಳಿದ್ದಾರೆ ಅಷ್ಟೇ ಎಂದರು.
ಪಕ್ಷ ಸೂಚಿಸಿದ ದಿಕ್ಕಿನಲ್ಲಿ ಬರದಿದ್ದರೆ ಅನುಭವಿಸಬೇಕಾಗುತ್ತದೆ ಎಂದು ಯತ್ನಾಳ್, ಯೊಗೀಶ್ವರ್, ಬೆಲ್ಲದ್ ಹೇಳಿಕೆಗೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಸಿಎಂ ಸ್ಥಾನಕ್ಕೆ ಅಭಿಮಾನಿಗಳು ನಮ್ಮ ಹೆಸರು ಹೇಳುತ್ತಿರುತ್ತಾರೆ. ಬೇಡ ಅಂದರೂ ಅಭಿಮಾನಿಗಳು ಕೇಳುವುದಿಲ್ಲ. ಎಲ್ಲಾ ಶಾಸಕರ ಅಭಿಪ್ರಾಯ ಕೇಳಿ ಕೇಂದ್ರದಿಂದ ಮುಂದಿನ ಸಿಎಂ ಆಯ್ಕೆ ಎಂದು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ