ಉಪಸಮಿತಿಗೆ ಮಣಿದ ಸಿಎಂ

ಜಿಂದಾಲ್‌ಗೆ ಭೂಮಿ: ಜಾರ್ಜ್‌ ಒತ್ತಡಕ್ಕೆ ಸಂಪುಟ ಸೈ

Team Udayavani, Jun 15, 2019, 5:30 AM IST

HD-Kumaraswamy-800-C

ಬೆಂಗಳೂರು: ಜಿಂದಾಲ್ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ 3,667 ಎಕರೆ ಜಮೀನು ಪರಭಾರೆ ಮಾಡುವ ನಿರ್ಧಾರದ ಕುರಿತು ಪರಾಮರ್ಶೆ ನಡೆಸಿ ವರದಿ ನೀಡಲು ಸಂಪುಟ ಉಪ ಸಮಿತಿ ರಚಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಸುದೀರ್ಘ‌ ಚರ್ಚಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೆಲವು ಸಚಿವರ ವಿರೋಧದ ನಡುವೆಯೇ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್‌ ಅವರ ಒತ್ತಾಯದ ಮೇರೆಗೆ ಸಂಪುಟ ಉಪ ಸಮಿತಿ ರಚಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧರಿಸಿದ್ದು, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರನ್ನು ಉಪ ಸಮಿತಿ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ.

ಈ ಕುರಿತು ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ, ಜಿಂದಾಲ್ಗೆ ಲೀಸ್‌ ಕಮ್‌ ಸೇಲ್ ಮಾಡಿಕೊಡಲು ಹಿಂದೆ ಆಗಿದ್ದ ಒಪ್ಪಂದದಂತೆ ಮೇ 27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಸಂಪುಟದ ತೀರ್ಮಾನಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರಿಂದ ಸಂಪುಟ ಉಪ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಉಪ ಸಮಿತಿಯ ಅಧ್ಯಕ್ಷರನ್ನು ನೇಮಿಸುವ ಜವಾಬ್ದಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ ಎಂದು ತಿಳಿಸಿದರು.

ಜಿಂದಾಲ್ಗೆ ಜಮೀನು ಮಾರಾಟ ಮಾಡಲು ಸಂಪುಟ ನಿರ್ಧಾರ ತೆಗೆದು ಕೊಂಡ ಬೆನ್ನಲ್ಲೆ ಕಾಂಗ್ರೆಸ್‌ ಹಿರಿಯ ನಾಯಕ ಎಚ್.ಕೆ. ಪಾಟೀಲ್, ಸಿಎಂಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದರು ಹಾಗೂ ಬಿಜೆಪಿ ಕೂಡ ಅಹೋರಾತ್ರಿ ಧರಣಿ ನಡೆಸುತ್ತಿದೆ.

ಸಂಪುಟದ ನ್ಯಾಯಯುತವಾದ ತೀರ್ಮಾನಕ್ಕೆ ಕೆಲವರ ವಿರೋಧಕ್ಕೆ ಸಂಪುಟ ಮಣಿಯಬಾರದು ಎಂದು ಕೆಲವು ಸಚಿವರು ಹೇಳಿದರು. ಆದರೂ, ಜಾರ್ಜ್‌ ಒತ್ತಾಯಕ್ಕೆ ಉಪ ಸಮಿತಿ ರಚಿಸಲು ತೀರ್ಮಾನಿಸಲಾಯಿತು. ಈ ಸಮಿತಿಯಲ್ಲಿ ತಮ್ಮನ್ನು ಸದಸ್ಯರನ್ನಾಗಿ ಮಾಡಬೇಡಿ ಎಂದು ಜಾರ್ಜ್‌ ಮನವಿ ಮಾಡಿದರು. ಆದರೆ, ಅವರೇ ಕೈಗಾರಿಕಾ ಸಚಿವರಾಗಿರುವುದರಿಂದ ಅವರನ್ನು ಸಮಿತಿಯ ಸದಸ್ಯರನ್ನಾಗಿ ಮಾಡಲು ನಿರ್ಧರಿಸಲಾಗಿದೆ.

ಸಂಪುಟ ಉಪ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನೀಡಲಾಗಿದೆ. ಆದಷ್ಟು ಬೇಗ ಅವರು ಸಂಪುಟ ಉಪ ಸಮಿತಿ ಅಧ್ಯಕ್ಷರನ್ನು ನೇಮಿಸುತ್ತಾರೆ. ಸಮಿತಿ ವರದಿ ಬಂದ ನಂತರ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ಹಳ್ಳಿ ಕಡೆಯವ್ರು ಟ್ಯಾಕ್ಸ್‌ ಕಟ್ಟಲ್ಲ, ಫಾರ್ಮಿಂಗ್‌ ಮಾಡ್ತಾರೆ ಅಷ್ಟೇ. ಉದ್ಯಮಿಗಳು ಟ್ಯಾಕ್ಸ್‌ ಕಟ್ತಾರೆ, ಉದ್ಯೋಗ ಸೃಷ್ಟಿ ಆಗಬೇಕು ಅಂದ್ರೆ ಜಮೀನು ಕೊಡಬೇಕಾಗ‌ುತ್ತದೆ. ಜಿಂದಾಲ್ ಗುಡ್‌ ಬಿಸಿನೆಸ್‌ಮನ್‌.
-ಡಿ.ಕೆ.ಶಿವಕುಮಾರ್‌, ಜಲಸಂಪನ್ಮೂಲ ಸಚಿವ

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.