ಕೋವಿಡ್ ನಿಂದ ನೊಂದವರ ಸಹಾಯಕ್ಕಾಗಿ ಮುಂದೆ ಬನ್ನಿ


Team Udayavani, Apr 26, 2021, 6:55 AM IST

COVID

ದೇಶದಲ್ಲಿ ಕೊರೊನಾ 2ನೇ ಅಲೆ ಈ ಪರಿಯಾಗಿ ಬಾಧಿಸುತ್ತದೆ ಎಂಬುದು ಯಾರಿಗೂ ತಿಳಿದಿರಲಿಕ್ಕಿಲ್ಲ. ವಿಜ್ಞಾನಿಗಳು, ವೈದ್ಯರ ನಿರೀಕ್ಷೆಗೂ ಮೀರಿ ಕೊರೊನಾದ 2ನೇ ಅಲೆ ಬಾಧಿಸುತ್ತಿದೆ. ಅದರಲ್ಲೂ ದಿಲ್ಲಿ, ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಗುಜರಾತ್‌ ಸಹಿತ ಹಲವಾರು ರಾಜ್ಯಗಳು ಕೊರೊನಾದ ಅಬ್ಬರಕ್ಕೆ ಅಕ್ಷರಶಃ ನಲುಗಿವೆ.

ದಿಲ್ಲಿಯಲ್ಲಿ ಪ್ರತೀ ಗಂಟೆಗೆ 12 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬ ವರದಿಯಾಗುತ್ತಿದೆ. ಬೆಂಗಳೂರಿನಲ್ಲೂ ಪ್ರತೀ ಗಂಟೆಗೆ ನೂರಾರು ಮಂದಿ ಸೋಂಕಿತರಾಗುತ್ತಿದ್ದಾರೆ. ಈ ಸಂಗತಿಗಳನ್ನು ನೋಡಿದರೆ, ಕೊರೊನಾದ ಪರಿಣಾಮಗಳು ಏನಾಗಿರಬಹುದು ಎಂಬುದನ್ನು ಊಹಿಸಿಕೊಳ್ಳಬಹುದು. ಜತೆಗೆ ಇಡೀ ದೇಶದಲ್ಲಿ ಇತ್ತೀಚಿನ ನಾಲ್ಕೈದು ದಿನಗಳಿಂದ ಹತ್ತಿರ ಹತ್ತಿರ ಮೂರೂವರೆ ಲಕ್ಷ ಪ್ರಕರಣಗಳು ವರದಿಯಾಗುತ್ತಿವೆ. ಇವರಲ್ಲಿ ಕಡೇ ಪಕ್ಷ ದಿನಕ್ಕೆ 50 ಸಾವಿರ ಮಂದಿಗೆ ಆಸ್ಪತ್ರೆ ವ್ಯವಸ್ಥೆ ಮಾಡುವುದೂ ದೊಡ್ಡ ಸವಾಲಿನ ಕೆಲಸವೇ ಸರಿ.

ಇಂಥ ಪರಿಸ್ಥಿತಿಯಲ್ಲಿ ಸರಕಾರಗಳ ಜತೆಗೆ ಸಾರ್ವಜನಿಕರೂ ಜನರ ನೋವಿನಲ್ಲಿ ಭಾಗಿಯಾಗಬೇಕಾದ ಅಗತ್ಯವಿದೆ. ಏಕೆಂದರೆ ಇದು ಅನಿರೀಕ್ಷಿತವಾಗಿ ಬಂದಿರುವಂಥ ದೊಡ್ಡ ಸಾಂಕ್ರಾಮಿಕ ರೋಗ. ಸರಕಾರದ ಕಡೆಯಿಂದ ಆಸ್ಪತ್ರೆಗಳು, ಕೊರೊನಾ ಕೇರ್‌ ಸೆಂಟರ್‌ ಗಳು, ಲಸಿಕೆಯ ವ್ಯವಸ್ಥೆ ಮಾಡಿಕೊಂಡಿದ್ದರೂ ಇದರಲ್ಲಿ ಜನರ ಸಹಕಾರ ಸಿಗದ ಹೊರತು ಅಧಿಕಾರಿಗಳಾಗಲಿ ಅಥವಾ ಸರಕಾರದ ಪ್ರತಿನಿಧಿಗಳಾಗಲಿ ಏನೂ ಮಾಡಲು ಸಾಧ್ಯವಿಲ್ಲ.

ಹೀಗಾಗಿ ಕೊರೊನಾವನ್ನು ಸಂಕಷ್ಟದ ಕಾಲವೆಂದು ಪರಿಗಣಿಸಿ ಜನರೂ ಇದರ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಬೇಕು. ಈಗಾಗಲೇ ಸರಕಾರದ ಕಡೆಯಿಂದಲೇ ಸ್ವಯಂಸೇವಕರಾಗಲು ಮುಂದೆ ಬನ್ನಿ ಎಂದು ಜನರಿಗೆ ಆಹ್ವಾನ ಕೊಟ್ಟಿದೆ. ಇದರಲ್ಲಿ ಸೇರಿ ಒಂದಷ್ಟು ಸಣ್ಣ ಪುಟ್ಟ ಸೇವೆಗಳನ್ನಾದರೂ ನೀಡಬಹುದು.

ಕೊರೊನಾ ವಿರುದ್ಧದ ಹೋರಾಟದಲ್ಲಿ ಜನರು ಮೊದಲು ಮಾಡಬಹುದಾದ ಬಹುಮುಖ್ಯ ಕೆಲಸ, ನಿಮ್ಮ ಸುತ್ತಮುತ್ತಲಿನಲ್ಲಿ ಯಾರಿಗಾದರೂ ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉತ್ತೇಜಿಸುವುದು. ಪರೀಕ್ಷೆ ಮಾಡಿಸಿಕೊಂಡ ಮಾತ್ರಕ್ಕೆ ಅಥವಾ ಕೊರೊನಾ ಪಾಸಿಟಿವ್‌ ಬಂದಿದೆ ಎಂಬ ಕಾರಣಕ್ಕೆ ನಿಮ್ಮನ್ನು ಬೇರೆ ರೀತಿ ಕಾಣುವುದಿಲ್ಲ ಎಂದು ಅವರಿಗೆ ಮನದಟ್ಟು ಮಾಡಿಸಿ ಅವರ ಜತೆ ನಿಲ್ಲುವ ಕೆಲಸ ಮಾಡಬೇಕು. ಜತೆಗೆ ಅವರಿಗೆ ಧೈರ್ಯವನ್ನೂ ತುಂಬಬೇಕು.
ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವ ಸಲುವಾಗಿ ಜನ ಬೇಕಾಗುತ್ತಾರೆ, ಕೊರೊನಾ ಕೇರ್‌ ಸೆಂಟರ್‌ಗಳಲ್ಲಿ ಉಸ್ತುವಾರಿಗಾಗಿ ಜನರ ಅಗತ್ಯವಿದೆ. ಇಂಥದ್ದದ್ದರಲ್ಲಿ ಸ್ವಯಂ ಸೇವಕರಾಗಿ ಜನರೇ ಭಾಗಿಯಾಗಬಹುದು. ಇನ್ನು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲೂ ಆಕ್ಸಿಜನ್‌ ಸಿಲಿಂಡರ್‌ ಗಳ ವ್ಯವಸ್ಥೆ ಮಾಡಿಸುವುದು, ಸುತ್ತಮುತ್ತಲಿನ ಜನರಿಗೆ ಆಸ್ಪತ್ರೆ ಅಥವಾ ಬೇಕಾದ ಔಷಧದ ವ್ಯವಸ್ಥೆ ಮಾಡುವುದು, ಕೊರೊನಾ ಸೋಂಕಿತರಾಗಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವಂಥವರಿಗೆ ಅಗತ್ಯ ವಸ್ತುಗಳ ವ್ಯವಸ್ಥೆಯನ್ನೂ ಮಾಡಿಸಬಹುದು. ಇದರ ಜತೆಗೆ ಲಸಿಕಾ ಕೇಂದ್ರಗಳಿಗೆ ಅರ್ಹ ಫ‌ಲಾನುಭವಿಗಳನ್ನು ಕರೆತಂದು ಅವರಿಗೆ ಲಸಿಕೆ ಕೊಡಿಸುವ ಕೆಲಸವನ್ನೂ ಜನರು ಮಾಡಬಹುದು. ವ್ಯವಸ್ಥೆಯನ್ನು ಬಯ್ಯುತ್ತಾ ಕುಳಿತುಕೊಳ್ಳುವುದರ ಬದಲು, ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈಜೋಡಿಸಿದರೆ ಒಂದಷ್ಟಾದರೂ ಯಶಸ್ಸು ಸಾಧಿಸಬಹುದು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.