ಗಡಿಯಲ್ಲಿ ಭಾರತ-ಚೀನ ಶಾಂತಿಗೆ ಬದ್ಧ

ದ್ವಿಪಕ್ಷೀಯ ಒಪ್ಪಂದ ಅನ್ವಯ ಗಡಿ ಬಿಕ್ಕಟ್ಟು ಶಮನದತ್ತ: ವಿದೇಶಾಂಗ ಸಚಿವಾಲಯ

Team Udayavani, Jun 8, 2020, 6:00 AM IST

ಗಡಿಯಲ್ಲಿ ಭಾರತ-ಚೀನ ಶಾಂತಿಗೆ ಬದ್ಧ

ಹೊಸದಿಲ್ಲಿ: ಭಾರತ- ಚೀನ ಗಡಿ ಮುನಿಸು ತಣ್ಣಗಾಗುವ ದಿನಗಳು ಬಂದಿವೆ. ಎರಡೂ ದೇಶಗಳು ಈ ಹಿಂದಿನ ದ್ವಿಪಕ್ಷೀಯ ಒಪ್ಪಂದಗಳ ಅನ್ವಯ ಗಡಿ ಬಿಕ್ಕಟ್ಟನ್ನು ಬಗೆ ಹರಿಸಿ ಕೊಳ್ಳಲು ತೀರ್ಮಾನಿಸಿವೆ ಎಂದು ಭಾರತದ ವಿದೇಶಾಂಗ ಸಚಿವಾಲಯ ರವಿವಾರ ತಿಳಿಸಿದೆ.

ಲಡಾಖ್‌ನ ಚುಶುಲ್‌- ಮೊಲ್ಡಾದ ಬಿಪಿಎಂ ಪಾಯಿಂಟ್‌ನಲ್ಲಿ ಸಕಾರಾತ್ಮಕವಾಗಿ ಸಭೆ ಅಂತ್ಯ ಕಂಡಿದೆ. ಭಾರತ-ಚೀನ ಗಡಿಯಲ್ಲಿ ಶಾಂತಿ ಅಗತ್ಯ ಎಂಬುದನ್ನು ಉಭಯ ರಾಷ್ಟ್ರಗಳು ಒಪ್ಪಿಕೊಂಡಿವೆ. ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಮಂದಿನ ಚರ್ಚೆಗಳು ನಡೆಯಲಿವೆ ಎಂದು ಸಚಿವಾಲಯ ಹೇಳಿದೆ.

ಎಲ್‌ಎಸಿ ಬಗ್ಗೆಯೇ ಆಕ್ಷೇಪ
ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಎಂದು ಕರೆಯಲ್ಪಡುವ ಭಾರತ-ಚೀನ ನಡುವಿನ ವಿವಾದಿತ ಗಡಿಯನ್ನು ಪಶ್ಚಿಮ, ಮಧ್ಯ ಮತ್ತು ಪೂರ್ವ ಎಂಬ 3 ಭಾಗಗಳಾಗಿ ವಿಂಗಡಿಸಲಾಗಿದೆ. ಎಲ್‌ಎಸಿಯ ನಿಖರವಾದ ವ್ಯಾಪ್ತಿಯ ಬಗ್ಗೆ ಎರಡೂ ದೇಶಗಳು ಭಿನ್ನಾಭಿಪ್ರಾಯ ಹೊಂದಿವೆ. ಅದು 3,348 ಕಿ.ಮೀ. ಉದ್ದವಿದೆ ಎಂದು ಭಾರತ ಹೇಳಿದರೆ, 2 ಸಾವಿರ ಕಿ.ಮೀ. ಮಾತ್ರ ಇದೆ ಎಂಬುದು ಚೀನದ ವಾದ. ಗಡಿ ಉದ್ವಿಗ್ನಕ್ಕೆ ಇದೇ ಕಾರಣ ಎಂದು ಸಭೆಯಲ್ಲಿ ತಿಳಿದುಬಂದಿದೆ.

ಭಾರತ-ಚೀನ ರಾಜತಾಂತ್ರಿಕ ಸಂಬಂಧ ಏರ್ಪಟ್ಟು 70 ವರ್ಷಗಳು ತುಂಬುತ್ತಿವೆ. ಈ ಹಿಂದೆ ನಡೆದ ದ್ವಿಪಕ್ಷೀಯ ಮಾತುಕತೆಗಳಲ್ಲಿ ಆಗಿರುವ ತೀರ್ಮಾನಗಳನ್ನು ಗೌರವಿಸಿ, ಭಿನ್ನಾಭಿ ಪ್ರಾಯ ಗಳನ್ನು ಬಗೆಹರಿಸಿಕೊಳ್ಳಲು ಉಭಯ ದೇಶಗಳು ಬದ್ಧವಾಗಿವೆ ಎಂದು ಸಚಿವಾಲಯ ತಿಳಿಸಿದೆ.

“ಬಾಯ್ಕಟ್‌ ಚೀನ’, ಸರಕಾರದ ಘೋಷಣೆ ಅಲ್ಲ
ಚೀನೀ ವಸ್ತುಗಳ ಬಹಿಷ್ಕಾರ (ಬಾಯ್ಕಟ್‌ ಚೀನ) ಅಭಿಯಾನ ಜನಪ್ರಿಯ ಭಾವನೆಯೇ ವಿನಾ ಸರಕಾರದ ಘೋಷಣೆ ಅಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ಸ್ಪಷ್ಟಪಡಿಸಿದ್ದಾರೆ. “ಬಾಯ್ಕಟ್‌ ಚೀನ’ ಭಾರತೀಯರು ಹುಟ್ಟುಹಾಕಿರುವ ಜನಪ್ರಿಯ ಭಾವನೆ. ಈ ಬಗ್ಗೆ ಕೇಂದ್ರ ಸರಕಾರ ಘೋಷಣೆ ಹೊರಡಿ ಸಿಲ್ಲ. “ಮೇಡ್‌ ಇನ್‌ ಚೀನ’ ಉತ್ಪನ್ನಗಳನ್ನು ಜನ ತಾವಾಗಿಯೇ ಬಹಿಷ್ಕರಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಚೀನ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದೆ. ಪೂರ್ವ ಲಡಾಖ್‌ನಲ್ಲಿನ ಅದರ ವರ್ತನೆಯೂ ಈ ಆಕ್ರೋಶ ಹೆಚ್ಚಲು ಪ್ರಮುಖ ಕಾರಣವಾಗಿದೆ ಎಂದಿದ್ದಾರೆ.

ಭಾರತವು ಯಾವುದೇ ರಾಷ್ಟ್ರದ ಮುಂದೆ ತಲೆಬಾಗುವುದಿಲ್ಲ. ಚೀನದೊಂದಿಗಿನ ಗಡಿ ಬಿಕ್ಕಟ್ಟನ್ನು ಪರಸ್ಪರ ಮಾತುಕತೆಯಿಂದ ಬಗೆಹರಿಸಿಕೊಳ್ಳುತ್ತಿದ್ದೇವೆ.
– ರಾಜನಾಥ್‌ ಸಿಂಗ್‌, ರಕ್ಷಣಾ ಸಚಿವ

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.