5 ವರ್ಷದ ಹಿಂದೆ ಕಳೆದುಕೊಂಡ ಅರಶಿನ-ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆಯಾಗಿ ನೀಡಿ: ಕುಸುಮಾ


Team Udayavani, Nov 1, 2020, 10:32 PM IST

5 ವರ್ಷದ ಹಿಂದೆ ಕಳೆದುಕೊಂಡ ಅರಶಿನ-ಕುಂಕುಮವನ್ನು ಮತದ ರೂಪದಲ್ಲಿ ಭಿಕ್ಷೆಯಾಗಿ ನೀಡಿ: ಕುಸುಮಾ

ಬೆಂಗಳೂರು: ನಾನು ಐದು ವರ್ಷಗಳ ಹಿಂದೆ ಕಳೆದುಕೊಂಡಿರುವ ಅರಶಿನ-ಕುಂಕುಮವನ್ನು ಮತದ ಸ್ವರೂಪದಲ್ಲಿ ಭಿಕ್ಷೆಯಾಗಿ ನೀಡಿ. ನನ್ನ ಉಳಿದ ಬದುಕನ್ನು ನಿಮ್ಮ ಸೇವೆಗೆ ಮುಡಿಪಾಗಿಡುತ್ತೇನೆ ಎಂದು ರಾಜರಾಜೇಶ್ವರಿ ನಗರ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಂದನೆ, ಅಪನಿಂದನೆಗಳಿಂದ ನೊಂದಿರುವ ಈ ವಿದ್ಯಾವಂತ ನಿಮ್ಮ ಮನೆ ಮಗಳನ್ನು 3ರಂದು ನೀವೆಲ್ಲರೂ ಉಡಿ ತುಂಬಿ ಹಾರೈಸಲಿದ್ದೀರಿ ಎಂಬ ನಂಬಿಕೆ ನನಗಿದೆ. ನನ್ನ ಜೀವನವನ್ನು ನಿಮ್ಮ ಸೇವೆಗೆ ಮೀಸಲಿಟ್ಟು ತೀರಿಸುವೆ ಎಂದು ಕುಸುಮಾ ಭಾವುಕರಾಗಿ ಹೇಳಿದರು.

ಕಳೆದ 20 ದಿನಗಳಿಂದ ನನ್ನ ಜೀವನದಲ್ಲಿ ಆಗಿರುವ ಬದಲಾವಣೆಗಳು ಎಲ್ಲರಿಗೂ ಗೊತ್ತಿದೆ. ನನ್ನ ಹೆಸರು ಚುನಾವಣೆ ಕಣದ ಮುನ್ನಲೆಗೆ ಬಂದ ಕ್ಷಣದಿಂದಲೂ ನನ್ನ ಮೇಲೆ ನಿರಂತರ ವಾಗ್ಧಾಳಿಗಳು, ಗದಾಪ್ರಹಾರ ನಡೆಯುತ್ತಲೇ ಇದೆ. ನನ್ನ ಗಂಡನ ಹೆಸರು ಬಳಸಬಾರದು ಅಂತೀರಿ. ನನ್ನ ಮೇಲೆ ಸುಳ್ಳು ಎಫ್ ಐಆರ್‌ ಹಾಕುತ್ತೀರಿ, ಪ್ರಚಾರಕ್ಕೆ ಅಡ್ಡಿಪಡಿಸಿದ್ದೀರಿ. ಅಲ್ಲದೆ ನಾನು ಪ್ರಚಾರಕ್ಕೆ ಹೋದ ಕೆಲವು ಮನೆಗಳಲ್ಲಿ, ನೀವು ನನ್ನ ಬಗ್ಗೆ ಆಡಿರುವ ಮಾತುಗಳು, ಬಳಸಿರುವ ಭಾಷೆ ಯಾವುದೇ ಹೆಣ್ಣು ಕೇಳುವಂಥದ್ದಲ್ಲ. ಅಂಥ ಚುಚ್ಚು ಮಾತುಗಳನ್ನು ಆಡಿದ್ದೀರಿ. ನಾನು ನಿಮಗೇನು ಅನ್ಯಾಯ ಮಾಡಿದ್ದೇ ಮುನಿರತ್ನ ಅಣ್ಣನವರೇ.?ಗಂಡ ಸತ್ತ ಮುಂಡೆಗೆ ಯಾಕೆ ರಾಜಕೀಯ ಅಂತಾ ಕೇಳಿದ್ದೀರಿ. ಗಂಡನನ್ನು ತಿಂದವಳಿಗೆ ಯಾಕೆ ರಾಜಕೀಯ ಅಂತಾ ಹೇಳಿದ್ದೀರಿ. ಇದು ನಿಮಗೆ ಶೋಭೆ ತರುತ್ತದೆಯೇ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಕೋವಿಡ್ ಪ್ರಕರಣದಲ್ಲಿ ಕರ್ನಾಟಕ 2ನೇ ಸ್ಥಾನಕ್ಕೆ! 3,652 ಹೊಸ ಪ್ರಕರಣ ಪತ್ತೆ

ಮಾಧ್ಯಮಗಳ ಮೂಲಕ ಮುನಿರತ್ನರನ್ನು ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ. ನಿಮಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.  ನನಗೆ ಬಂದ ಪರಿಸ್ಥಿತಿ ಆ ಮಕ್ಕಳಿಗೆ ಬರುವುದು ಬೇಡ. ಒಂದು ವೇಳೆ ಅವರಿಗೆ ಈ ಪರಿಸ್ಥಿತಿ ಬಂದಿದ್ದರೆ ಏನು ಮಾಡುತ್ತಿದ್ದಿರಿ? ಅವರಿಗೂ ಹೀಗೆ ನಿಂದಿಸುತ್ತಿದ್ದಿರಾ ? ನಾನು ಯಾವ ತಪ್ಪು ಮಾಡಿದ್ದೇನೆ? ಗಂಡ ಸತ್ತ ನಂತರ ಯಾವ ಹೆಣ್ಣು ಬದುಕಬಾರದಾ? ರಾಜಕೀಯಕ್ಕೆ ಬರಬಾರದಾ? ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬಾರದಾ? ಜನರ ನೋವಿಗೆ ಸ್ಪಂದಿಸಬಾರದಾ? ಸಮಾಜದಲ್ಲಿ ಒಬ್ಬ ಸುಶಿಕ್ಷಿತ ಹೆಣ್ಣಿಗೆ ಇಷ್ಟು ಕೆಟ್ಟ ಪದ ಬಳಸುತ್ತೀರಿ ಎಂದರೆ ಬೇರೆ ಹೆಣ್ಣುಗಳ ಕಥೆ ಏನು? ಅವರನ್ನು ನೀವು ಹೇಗೆ ನಡೆಸಿಕೊಂಡಿರಬೇಡಾ ಎಂದು ವಾಗ್ಧಾಳಿ ಡನೆಸಿದರು.

ಎರಡು ಬಾರಿ ಶಾಸಕರಾಗಿರುವ ನೀವು ಈ ರೀತಿ ಮಾತನಾಡಿದರೆ ಜನರನ್ನು ಹೇಗೆ ರಕ್ಷಿಸುತ್ತೀರಿ? ಹೆಣ್ಣು ಮಕ್ಕಳ ಕತೆ ಏನು? ನನ್ನ ಅನುಭವ ಪ್ರಶ್ನೆ ಮಾಡುತ್ತೀರಿ. ನನ್ನ ತಂದೆಯವರ ರಾಜಕಾರಣವನ್ನು ಚಿಕ್ಕ ವಯಸ್ಸಿನಿಂದ ನೋಡಿಕೊಂಡು ಬಂದಿದ್ದೇನೆ. ಗಂಡನ ಜತೆ ಬೇರೆ, ಬೇರೆ ಪ್ರದೇಶಗಳಿಗೆ ಭೇಟಿ ಕೊಟ್ಟು ಅಲ್ಲಿನ ಜನರ ಸಮಸ್ಯೆ ನೋಡಿದ್ದೇನೆ. ನನ್ನ ತಂದೆ, ತಾಯಿಗೆ ಹೊರೆಯಾಗದೆ ನನ್ನ ಕಾಲಿನ ಮೇಲೆ ನಾನೇ ನಿಂತುಕೊಂಡು ಜೀವಿಸುತ್ತಿದ್ದೇನೆ. ಆಗಬಾರದ ವಯಸ್ಸನಲ್ಲೇ ನನಗಾದ ಆಘಾತದಿಂದ ಹೊರಬರಲು ವಿದೇಶದಲ್ಲಿ ವ್ಯಾಸಂಗ ಮಾಡಿ ಬಂದು, ಇಲ್ಲಿ ಮಕ್ಕಳಿಗೆ ಪಾಠ ಹೇಳಿ ಬದುಕುತ್ತಿದ್ದೇನೆ. ನನ್ನದೇ ಗುರುತು ಹೊಂದಲು ಹೊರಟಿದ್ದೇನೆ. ನನ್ನ ಅನುಭವ ಏನು ಎಂದು ಜನರಿಗೆ ಗೊತ್ತಿದೆ. ನಿಮ್ಮ ಅನುಭವ ಏನು ಅಂತಾ ಹೇಳಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ನಮ್ಮಿಂದಲೇ ಬೆಳೆದ ಕೆಲವು ಮುಸ್ಲಿಂ ನಾಯಕರು ನಮ್ಮನ್ನೇ ವಿಲನ್‌ ಮಾಡಿದರು: ದೇವೆಗೌಡ

ನಾನು ಐದು ವರ್ಷಗಳ ಹಿಂದೆ ಕಳೆದುಕೊಂಡ ಅರಿಶಿನ, ಕುಂಕುಮವನ್ನು ನನ್ನ ಜನ ಉಡಿ ತುಂಬಿ ಕೊಡುತ್ತಾರೆ. ಹೂವು ಮುಡಿಸುತ್ತಾರೆ. ಈ ಕ್ಷೇತ್ರದ ಜನ ನನ್ನನ್ನು ಗೆಲ್ಲಿಸುತ್ತಾರೆ. ನವೆಂಬರ್‌ 3ರಂದು ಅವರಿಂದ ಮತದ ಸ್ವರೂಪದಲ್ಲಿ ಅರಿಶಿನ, ಕುಂಕುಮ ಭಿಕ್ಷೆ ಪಡೆಯುತ್ತೇನೆ. ನನ್ನ ಕ್ಷೇತ್ರ ಹಾಗೂ ಜನರ ಅಭಿವೃದ್ಧಿಗೆ ನಾನು ಅಂದುಕೊಂಡಿರುವುದನ್ನು ಮಾಡೇ ಮಾಡುತ್ತೇನೆ. ನನ್ನ ಜೀವನ ರಾಜಕೀಯ ಹಾಗೂ ಜನರ ಸೇವೆಗೆ ಮುಡಿಪಾಗಿ ಇಡುತ್ತೇನೆ ಎಂದು ಹೇಳಿದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.