ಜಾತಿಗಣತಿ ಕೈ ಪ್ರತ್ಯಸ್ತ್ರ: ಜನಸಂಖ್ಯೆ ಆಧರಿತ ಮೀಸಲು ಜಾರಿಗೊಳಿಸಿ


Team Udayavani, Apr 17, 2023, 8:30 AM IST

ಜಾತಿಗಣತಿ ಕೈ ಪ್ರತ್ಯಸ್ತ್ರ: ಜನಸಂಖ್ಯೆ ಆಧರಿತ ಮೀಸಲು ಜಾರಿಗೊಳಿಸಿ

ಕೋಲಾರ: ಯುಪಿಎ ಸರಕಾರ ನಡೆಸಿದ ಜಾತಿವಾರು ಜನಗಣತಿಯನ್ನು ಪ್ರಧಾನಿ ಮೋದಿಯವರು ಬಹಿರಂಗಪಡಿಸಲಿ. ಶೇ. 50 ಮೀಸಲಾತಿ ಮಿತಿಯನ್ನು ತೆಗೆದು ಜನಸಂಖ್ಯೆ ಆಧಾರಿತ ಮೀಸಲಾತಿ ವ್ಯವಸ್ಥೆ ಜಾರಿಗೊಳಿಸಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದರು.

ಚಿನ್ನದ ನಾಡು ಕೋಲಾರದಲ್ಲಿ ರವಿವಾರ “ಜೈ ಭಾರತ್‌ ಸಮಾವೇಶ’ಕ್ಕೆ ಚಾಲನೆ ನೀಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಚುನಾವಣ ರಣಕಹಳೆ ಮೊಳಗಿಸಿದ ರಾಹುಲ್‌, ಮೀಸಲಾತಿಯಲ್ಲಿ ಶೇ. 50ರ ಮಿತಿಯನ್ನು ತೆಗೆದುಹಾಕಿ, ಎಸ್‌ಸಿ, ಎಸ್‌ಟಿ ಕೋಟಾದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅವಕಾಶ ನೀಡಿ ಎಂದು ಕೇಂದ್ರ ಸರಕಾರಕ್ಕೆ ಸವಾಲು ಹಾಕಿದರು.
ನಾನು ಹಿಂದುಳಿದವರಿಗೆ ಅವಮಾನ ಮಾಡಿದ್ದೇನೆಂದು ಬಿಜೆಪಿ ಆರೋಪಿಸುತ್ತಿದೆ. ದೇಶ ದಲ್ಲಿ ಯಾರ ಜನಸಂಖ್ಯೆ ಹೆಚ್ಚು ಇದೆ? ದಲಿತ, ಹಿಂದುಳಿ ದವರು ಕೇಂದ್ರ ಸಚಿವಾಲಯದ ಕಾರ್ಯ ದರ್ಶಿ ಗಳ ಹುದ್ದೆಗಳಲ್ಲಿ ಕೇವಲ ಶೇ. 7 ಭಾಗದಷ್ಟಿದ್ದಾರೆ. ಯುಪಿಎ ಸರಕಾರ ಜಾತಿವಾರು ಜನಗಣತಿ ಮಾಡಿತ್ತು. ಪೂರ್ತಿ ದೇಶದ ಜಾತಿವಾರು ಅಂಕಿಅಂಶ ಅದರಲ್ಲಿದೆ. ಒಬಿಸಿ ಕುರಿತು ಮಾತನಾಡುವ ನೀವು ಜನಗಣತಿ ವರದಿ ಬಹಿರಂಗಗೊಳಿಸಿ. ಜನಸಂಖ್ಯೆ ಗಣತಿ ಬಹಿರಂಗಗೊಳಿಸದಿದ್ದರೆ ಹಿಂದುಳಿ ದವರಿಗೆ ಮಾಡಿದ ಅವಮಾನ ಎಂದು ಪರಿ ಗಣಿಸ ಬೇಕಾಗುತ್ತದೆ. ಎಸ್‌ಸಿ, ಎಸ್‌ಟಿ ಕೋಟಾ  ದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅವ ಕಾಶ ನೀಡಿ ಎಂದು ರಾಹುಲ್‌ ಆಗ್ರಹಿಸಿದರು.

ಮೊದಲ ಸಂಪುಟ ಸಭೆಯಲ್ಲೇ ಜಾರಿ
ಕರ್ನಾಟಕದ ಜನತೆಗೆ ಕಾಂಗ್ರೆಸ್‌ ನಾಲ್ಕು ಭರವಸೆಗಳನ್ನು ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಗೃಹಜ್ಯೋತಿಯಲ್ಲಿ 200 ಯೂನಿಟ್‌ ಉಚಿತ ವಿದ್ಯುತ್‌, ಗೃಹಲಕ್ಷ್ಮೀ ಯೋಜನೆಯಡಿ ಪ್ರತೀ ಮನೆಯ ಮಹಿಳೆಗೆ 2 ಸಾವಿರ ರೂ., ಅನ್ನಭಾಗ್ಯದ 10 ಕೆ.ಜಿ. ಅಕ್ಕಿ ಹಾಗೂ ಯುವನಿಧಿ ಯೋಜನೆಯಂತೆ ಪದವೀ ಧರರಿಗೆ ಪ್ರತೀ ತಿಂಗಳು 3 ಸಾವಿರ ರೂ. ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡುವ ವಾಗ್ಧಾನವನ್ನು ಸರಕಾರದ ಮೊದಲ ಸಂಪುಟ ಸಭೆ ಯಲ್ಲೇ ಈಡೇರಿಸಬೇಕು ಎಂದು ತಾಕೀತು ಮಾಡಿದರು. ಈ ಗ್ಯಾರಂಟಿಗಳನ್ನು ಈಡೇರಿ ಸುವ ಮೂಲಕ ಕಾಂಗ್ರೆಸ್‌ ಪಕ್ಷವು ಕರ್ನಾಟಕ ಹಾಗೂ ದೇಶದ ಜನತೆಗೆ ಮಾತ್ರವಲ್ಲ, ಪ್ರಧಾನಮಂತ್ರಿಗೂ ಸಂದೇಶ ನೀಡಬೇಕಾಗಿದೆ, ಸಾವಿರಾರು ಕೋಟಿ ರೂಪಾಯಿಗಳನ್ನು ಆದಾನಿ ಕಂಪೆನಿಗಳಿಗೆ ನೀಡುತ್ತಿದ್ದೀರಿ. ನಾವು ಯುವಕರು, ಬಡವರು, ಮಹಿಳೆಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಕೊಡುತ್ತೇವೆ ಎಂಬು ದನ್ನು ಸಾಬೀತು ಮಾಡಬೇಕು ಎಂದು ರಾಹುಲ್‌ ಹೇಳಿದರು.

ಮೋದಿ-ಅದಾನಿ ಪ್ರಸ್ತಾವ
ತಮ್ಮ ಭಾಷಣದಲ್ಲಿ ಅನರ್ಹತೆ, ಮೋದಿ- ಅದಾನಿ ನಂಟಿನ ಕುರಿತಾಗಿಯೂ ರಾಹುಲ್‌ ಪ್ರಸ್ತಾವಿಸಿದರು. ಮೋದಿಯವರು ಆದಾನಿಗೆ ಸಹಾಯ ಮಾಡುತ್ತಾರೆ. ಕಾಂಗ್ರೆಸ್‌ ಸರಕಾರ ರೈತರು, ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ಮಹಿಳೆಯರಿಗೆ ಸಹಾಯ ಮಾಡುತ್ತದೆ. ನಾವು ಬ್ಯಾಂಕ್‌ ಬಾಗಿಲನ್ನು ಇವರಿಗಾಗಿ ತೆರೆಯುತ್ತೇವೆ, ಮೋದಿ ಶ್ರೀಮಂತರಿಗಷ್ಟೇ ಬ್ಯಾಂಕನ್ನು ಸೀಮಿತ ಗೊಳಿಸಿದ್ದಾರೆ ಎಂದರು.

ಸಂಸದ ಸ್ಥಾನದಿಂದ ಅನರ್ಹಗೊಳಿಸಿ ನನ್ನನ್ನು ಹೆದರಿಸಲಾಗದು, ಬಾಯಿ ಮುಚ್ಚಿಸಲಾಗದು. ಪ್ರಧಾನಿ ಮೋದಿ ಮತ್ತು ಉದ್ಯಮಿ ಆದಾನಿ ನಡುವಿನ ಸಂಬಂಧ ಏನೆಂಬ ಪ್ರಶ್ನೆಯನ್ನು ಹಾಕುತ್ತ ಉತ್ತರ ಸಿಗುವವರೆಗೂ ದೇಶಾದ್ಯಂತ ಹೋರಾಟ ಮಾಡುತ್ತೇನೆ. ಭ್ರಷ್ಟ ಬಿಜೆಪಿ ಸರಕಾರವನ್ನು ಕಿತ್ತೆಸೆದು 150 ಸೀಟುಗಳೊಂದಿಗೆ ಬಹುಮತದ ಕಾಂಗ್ರೆಸ್‌ ಸರಕಾರವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಬೇಕು ಎಂದು ರಾಹುಲ್‌ ಹೇಳಿದರು.

ಕಾಂಗ್ರೆಸ್ಸನ್ನು ಗೆಲ್ಲಿಸಿ
ಕರ್ನಾಟಕ ಕಾಂಗ್ರೆಸ್‌ ಸರಕಾರ ರೈತರ, ಕಾರ್ಮಿಕರ, ಸಣ್ಣ ಉದ್ದಿಮೆದಾರರ, ಮಹಿಳೆಯರ ಸರಕಾರವಾಗಲಿದೆ. ಕಾಂಗ್ರೆಸ್‌ ಸಂಘಟಿತವಾಗಿ ಹೋರಾಟ ಮಾಡುತ್ತಿದೆ, ಪೂರ್ಣ ಬಹುಮತದ ಸರಕಾರವನ್ನು ಆಯ್ಕೆ ಮಾಡಿ. ಬಿಜೆಪಿ ಸರ್ವ ಪ್ರಯತ್ನ ಮಾಡಿ 40 ಪರ್ಸೆಂಟ್‌ ಕಮಿಶನ್‌ ಹಣದಲ್ಲಿ ಮುಂಬರುವ ಕಾಂಗ್ರೆಸ್‌ ಸರಕಾರವನ್ನು ಬೀಳಿಸಲು ಪ್ರಯತ್ನಿಸುತ್ತದೆ. ಆದ್ದರಿಂದ ಕಾಂಗ್ರೆಸ್‌ಗೆ 150 ಸೀಟುಗಳಲ್ಲಿ ಗೆಲುವು ದೊರಕಿಸಿಕೊಡಿ, ಬಿಜೆಪಿಗೆ ಭ್ರಷ್ಟಾಚಾರ ಮಾಡಲು ಅವಕಾಶ ನೀಡಬೇಡಿ ಎಂದು ರಾಹುಲ್‌ ಕರೆ ನೀಡಿದರು. ಜತೆಗೆ ಜನರ ಮಧ್ಯೆ ಹೋಗಿ “150 ಸೀಟು ಗೆಲ್ಲಲು ಪ್ರಯತ್ನಿಸಿ’ ಎಂದು ಮುಖಂಡರಿಗೆ ಕರೆ ನೀಡಿದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.