ರೆಸಾರ್ಟ್ನಿಂದ ನಾಪತ್ತೆಯಾಗಿದ್ದ ಕಾಂಗ್ರೆಸ್ ಶಾಸಕ ಮುಂಬೈನಲ್ಲಿ ಆಸ್ಪತ್ರೆಗೆ ದಾಖಲು
Team Udayavani, Jul 18, 2019, 1:01 PM IST
ಬೆಂಗಳೂರು: ಕಾಂಗ್ರೆಸ್ ನಾಯಕರಿದ್ದ ರೆಸಾರ್ಟ್ನಿಂದ ಬುಧವಾರ ರಾತ್ರಿ ನಾಪತ್ತೆಯಾಗಿದ್ದ ಕಾಗೆವಾಡದ ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಇಂದು ಮುಂಬೈ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದಾರೆ.
ದೇವನಹಳ್ಳಿಯ ಪ್ರಕೃತಿ ರೆಸಾರ್ಟ್ನಲ್ಲಿ ಇತರೇ ಕಾಂಗ್ರೆಸ್ ಶಾಸಕರ ಜೊತೆಗಿದ್ದ ಶ್ರೀಮಂತ ಪಾಟೀಲ್ ಬುಧವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇವರ ನಾಪತ್ತೆಯ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿದ್ದು, ಮುಂಬೈನ ಅಜ್ಞಾತ ಸ್ಥಳದಲ್ಲಿರುವ ಅತೃಪ್ತ ಶಾಸಕರ ಜೊತೆ ಸೇರಿರುವ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದವು.
ಆದರೆ ಶ್ರೀಮಂತ ಪಾಟೀಲ್ ಅವರು ಎದೆನೋವು ಕಾರಣದಿಂದ ಮುಂಬೈನ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಇತ್ತ ಕರ್ನಾಟಕ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಅಧಿವೇಶನ ನಡೆಯುತ್ತಿದ್ದು, ಪ್ರಮುಖ ಮೂರೂ ಪಕ್ಷಗಳು ತಮ್ಮ ಶಾಸಕರಿಗೆ ಸದನಕ್ಕೆ ಹಾಜರಿರುವಂತೆ ವಿಪ್ ಜಾರಿ ಮಾಡಿವೆ. ಹೀಗಾಗಿ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆ ನೋವಿಗೆ ಕಾಗೆವಾಡದ ಶಾಸಕರು ಮುಂಬೈ ಆಸ್ಪತ್ರೆಯಲ್ಲಿ ದಾಖಲಾಗಿದ್ದೇಕೆ ಎಂಬ ಅನುಮಾನ ಕಾಡಿದೆ.
#Mumbai: Karnataka Congress MLA Shrimant Patil who was staying with other Congress MLAs at Windflower Prakruthi Resort in Bengaluru, reached Mumbai last night, currently admitted to a hospital in Mumbai after he complained of chest pain. pic.twitter.com/wojgD6R443
— ANI (@ANI) July 18, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್