ಇನ್ನೂ ತಣ್ಣಗಾಗದ ಮೈತ್ರಿ ಮುನಿಸು


Team Udayavani, Apr 9, 2019, 6:30 AM IST

munisu

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ನಡುವಿನ ಹೊಂದಾಣಿಕೆ ಸಂಬಂಧ ಮೈಸೂರು ಮತ್ತು ಮಂಡ್ಯದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸಲು ನಾಯಕರು ಹರಸಾಹಸಪಡುತ್ತಿರುವ ಬೆನ್ನಲ್ಲೇ ತುಮಕೂರು ಮತ್ತು ಹಾಸನದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ.

ಮಂಡ್ಯ, ಹಾಸನ, ತುಮಕೂರು, ಮೈಸೂರು ಕ್ಷೇತ್ರಗಳಲ್ಲಿ ಹೊಂದಾಣಿಕೆಯ ಗೊಂದಲಗಳಿದ್ದು, ದೇವೇಗೌಡ, ಸಿದ್ದರಾಮಯ್ಯ, ಎಐಸಿಸಿ ರಾಜ್ಯ ಉಸ್ತು¤ ವಾರಿ ವೇಣುಗೋಪಾಲ್‌ ಪ್ರಯತ್ನದ ಅನಂತರವೂ ಸರಿಹೋಗುವ ಲಕ್ಷಣಗಳು ಕಾಣಿಸುತ್ತಿಲ್ಲ.

ರಾಜಣ್ಣ ಕಿಡಿ
ತುಮಕೂರು ಕ್ಷೇತ್ರದಲ್ಲಿ ಪಕ್ಷೇತರನಾಗಿ ನಾಮ ಪತ್ರ ಸಲ್ಲಿಸಿ ನಾಯಕರ ಮನವೊಲಿಕೆ ಬಳಿಕ ವಾಪಸ್‌ ಪಡೆದಿದ್ದ ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಮತ್ತೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ನನ್ನ ವಿರೋಧ ಕಟ್ಟಿಕೊಂಡು ಯಾವುದೇ ಪಕ್ಷದ ಯಾರೊಬ್ಬನಿಗೂ ಚುನಾವಣೆ ಗೆಲ್ಲುವ ತಾಕತ್ತು ಇಲ್ಲ ಎಂದು ಮಾಜಿ ಶಾಸಕ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಮಧುಗಿರಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಮುದ್ದಹನುಮೇಗೌಡರ ಬಗ್ಗೆ ಯೋಚಿಸದೆ, ಯಾವ ಸಭೆಗೂ ಆಹ್ವಾನ ನೀಡದೆ ಅವಮಾನ ಮಾಡ ಲಾಗು ತ್ತಿದೆ ಎಂದು ಅಸಮಾಧಾನ ಹೊರ ಹಾಕಿದರು.

ಡಾ| ಜಿ.ಪರಮೇಶ್ವರ್‌ ಅವರು ದೇವೇಗೌಡರನ್ನು ಕರೆತಂದು ಮುದ್ದಹನುಮೇಗೌಡರ ರಾಜಕೀಯ ಜೀವನಕ್ಕೆ ಮುಳ್ಳಾಗಿದ್ದಾರೆ. ಆದರೆ ಇದು ರಾಷ್ಟ್ರೀಯ ಕಾಂಗ್ರೆಸ್‌ ನಿರ್ಧಾರವಾಗಿದ್ದು, ನಾವೆಲ್ಲ ಮೈತ್ರಿ ಅಭ್ಯರ್ಥಿಗೆ ಮತ ನೀಡಲೇಬೇಕಿದೆ. ಹಿಂದೆ ಹೇಳಿದಂತೆ ರಾಜ್ಯದಲ್ಲಿ ಮತ ವರ್ಗಾಯಿಸುವ ಶಕ್ತಿ ದೇವೇಗೌಡ, ಯಡಿಯೂರಪ್ಪ, ಮತ್ತು ಸಿದ್ದರಾಮಯ್ಯ ಅವರಿಗೆ ಮಾತ್ರವಿದ್ದು, ಝೀರೋ ಟ್ರಾಫಿಕ್‌ನಲ್ಲಿ ಹೋದರೆ 10 ಓಟೂ ಬೀಳಲ್ಲ ಎಂದು ಸ್ವಪಕ್ಷದ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್‌ ಅವರ ಕಾಲೆಳೆದರು.

ನಮಗೇನು ಮಾನ ಮರ್ಯಾದೆ ಇಲ್ವಾ?
ಕೇವಲ ತುಮಕೂರು, ಹಾಸನವಷ್ಟೇ ಅಲ್ಲ, ಮೈಸೂರಿನಲ್ಲೂ ಮೈತ್ರಿ ನಡುವೆ ವೈಮನಸ್ಸು ಮುಂದು ವರಿದಿದೆ. ನಮಗೇನು ಮಾನ ಮರ್ಯಾದೆ ಇಲ್ವಾ, ನಮ್ಮನ್ನು ಯಾರೂ ಸಭೆಗೆ ಕರೆದಿಲ್ಲ. ನಾವು ಏಕೆ ಕಾಂಗ್ರೆಸ್‌ ಕಚೇರಿ ಹತ್ರ ಬರಬೇಕು ಎಂದು ಜೆಡಿಎಸ್‌ ಕಾರ್ಯಕರ್ತರು ನೇರವಾಗಿ ಪಕ್ಷದ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಮತ್ತು ಸಚಿವ ಜಿ.ಟಿ.ದೇವೇಗೌಡ ಅವರನ್ನು ಪ್ರಶ್ನಿಸಿದ್ದಾರೆ. ಹುಣಸೂರಿನ ಜಿಟಿಡಿ ನಿವಾಸ ದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಕೆಲವು ಕಾರ್ಯಕರ್ತರು ನಾವು ಹಿಂದೆ ಜಿದ್ದಾಜಿದ್ದಿ ಚುನಾವಣೆ ನಡೆಸಿದ್ದೇವೆ. ಕೇಸ್‌ ಹಾಕಿಸಿ ಕೊಂಡಿದ್ದೇವೆ, ಅವರೊಂದಿಗೆ ಜಗಳ ಮಾಡ್ಕೊಂಡಿ ದ್ದೇವೆ, ನೀವು ಹೊರಟು ನಿಂತಿದ್ದಿರಾ, ನಾವಲ್ಲಿಗೆ ಬರಲ್ಲ ಎಂದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.