ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆ ಸ್ವಾಗತಿಸಿದ ಕಾಂಗ್ರೆಸ್
Team Udayavani, Apr 2, 2022, 7:25 AM IST
ಕೋಲ್ಕತಾ: ಬಿಜೆಪಿಯನ್ನು ಮುಂದಿನ ಲೋಕಸಭೆ ಚುನಾವಣೆ ಯಲ್ಲಿ ಎದುರಿಸುವ ನಿಟ್ಟಿನಲ್ಲಿ ವಿಪ ಕ್ಷಗಳೆಲ್ಲವೂ ಒಗ್ಗೂಡಿ, ಮೈತ್ರಿ ಸಾಧಿ ಸಬೇಕು ಎಂಬ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಸಲಹೆಯನ್ನು ಕಾಂಗ್ರೆಸ್ ಸ್ವಾಗತಿಸಿದೆ.
ರಾಜ್ಯಸಭೆಯ ಕಾಂಗ್ರೆಸ್ನ ಉಪನಾಯಕ ಆನಂದ ಶರ್ಮ “ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ “ವಿಪಕ್ಷಗಳ ಒಕ್ಕೂಟ ಎನ್ನುವುದು ಕಾಂಗ್ರೆಸ್ ಪ್ರತಿಪಾದಿಸುತ್ತಾ ಬರುತ್ತಿದ್ದ ವಿಚಾರವಾಗಿದೆ.
137 ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳ ನಡುವೆ ಇರುವ ಸಣ್ಣ ಮಟ್ಟದ ಭಿನ್ನಾಭಿಪ್ರಾಯಗಳನ್ನು ಮರೆತು ಕೋಮುವಾದ ಪ್ರತಿಪಾದಿಸುತ್ತಿರುವ ಬಿಜೆಪಿಯನ್ನು ಸೋಲಿಸಲೇಬೇಕಾಗಿದೆ’ ಎಂದು ಹೇಳಿದ್ದಾರೆ.
ರಾಷ್ಟ್ರಮಟ್ಟದ ಮೈತ್ರಿಕೂಟದ ಪ್ರಸ್ತಾವ ಮಾಡುವ ವೇಳೆ, ಕಾಂಗ್ರೆಸ್ ಕೇಂದ್ರ ಸ್ಥಾನದಲ್ಲಿಯೇ ಇರುತ್ತದೆ ಎಂದು ಶರ್ಮಾ ಪ್ರತಿಪಾದಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರೂ ಶೇಕಡಾವಾರು ಮತ ಪ್ರಮಾಣ 19.55 ಇದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.