ಹೆಜಮಾಡಿ ಬಂದರು ಅಭಿವೃದ್ಧಿಗೆ ಸಮ್ಮತಿ

ಹೆಜಮಾಡಿ ಬಂದರು ಅಭಿವೃದ್ಧಿಗೆ ಸಮ್ಮತಿ

Team Udayavani, Feb 18, 2020, 6:09 AM IST

ben-36

ಬೆಂಗಳೂರು: ಉಡುಪಿಯ ಹೆಜಮಾಡಿ ಮೀನುಗಾರಿಕೆ ಬಂದರು 180.84 ಕೋ. ರೂ. ವೆಚ್ಚದಲ್ಲಿ ಮತ್ತು ಗಂಗೊಳ್ಳಿ ಬಂದರಿನ ಮೀನುಗಾರಿಕೆ ಜೆಟ್ಟಿ ಪುನರ್‌ ನವೀಕರಣಕ್ಕಾಗಿ 12 ಕೋ. ರೂ. ಮೊತ್ತದ ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಕುರಿತು “ಉದಯವಾಣಿ’ಯೊಂದಿಗೆ ಪ್ರತಿಕ್ರಿಯಿಸಿದ ಬಂದರು ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯವು 320 ಕಿ.ಮೀ. ಕರಾವಳಿ ತೀರ ಹೊಂದಿದ್ದು 21,891 ಮೀನುಗಾರಿಕಾ ದೋಣಿಗಳಿದ್ದು ದಟ್ಟಣೆ ಕಡಿಮೆ ಮಾಡಿ ಸುಗಮ ಸಂಚಾರ ಕಲ್ಪಿಸಲು ಎಂಟು ಮೀನುಗಾರಿಕೆ ಬಂದರು ಮತ್ತು 26 ಮೀನುಗಾರಿಕೆ ಇಳಿದಾಣ ಕೇಂದ್ರಗಳ ಅಭಿವೃದ್ಧಿಗೆ ಉಡುಪಿಯ ಹೆಜಮಾಡಿ ಕೋಡಿಯಲ್ಲಿ 30 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮೀನುಗಾರಿಕಾ ಬಂದರನ್ನು 180.84 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಇಲ್ಲಿಯವರೆಗೆ ಹೆಜಮಾಡಿ ಪ್ರದೇಶದ ಮೀನುಗಾರರು ಮಂಗಳೂರು ಅಥವಾ ಮಲ್ಪೆ ಮೀನುಗಾರಿಕೆ ಬಂದರು ಆಶ್ರಯಿಸಬೇಕಿತ್ತು. ಹೆಜಮಾಡಿ ಬಂದರು ನಿರ್ಮಾಣದಿಂದ ಸ್ಥಳೀಯ ಮೀನುಗಾರರಿಗೆ ಅನುಕೂಲವಾಗಲಿದೆ. ಎರಡು ತಿಂಗಳುಗಳ ಹಿಂದೆ ನಾನು ಸ್ಥಳಕ್ಕೆ ಭೇಟಿ ನೀಡಿದ್ದಾಗ ಯೋಜನೆಗೆ ಅನುಮತಿ ಕೊಡಿಸುವ ಭರವಸೆ ನೀಡಿದ್ದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಯೋಜನೆಗೆ ಅವಶ್ಯವಿರುವ 32 ಎಕರೆ ಸರಕಾರಿ ಜಮೀನು ಈಗಾಗಲೇ ಕಂದಾಯ ಇಲಾಖೆಯಿಂದ ನಮ್ಮ ಇಲಾಖೆಗೆ ವರ್ಗಾವಣೆ ಮಾಡಿದೆ. ಖಾಸಗಿ ಒಡೆತನದ 12 ಎಕರೆ ಜಮೀನು ಅಗತ್ಯವಿದ್ದು, ಭೂ ಸ್ವಾಧೀನಕ್ಕೆ 13.24 ಕೋ. ರೂ. ಒಟ್ಟಾರೆ ಮೊತ್ತದಲ್ಲಿ ಮೀಸಲಿಡಲಾಗಿದೆ. ಲಾಲಾಜಿ ಮೆಂಡನ್‌ ಅವರ ಬಹುದಿನಗಳ ಬೇಡಿಕೆ ಈಡೇರಿರುವುದು ಹರ್ಷ ತಂದಿದೆ ಎಂದು ಹೇಳಿದರು. ಉಡುಪಿ ಜಿಲ್ಲೆ ಗಂಗೊಳ್ಳಿ ಬಂದರಿ ನಲ್ಲಿ ಇತ್ತೀಚೆಗೆ ಕುಸಿದಿರುವ ಮೀನುಗಾರಿಕೆ ಜೆಟ್ಟಿಯ ಪುನರ್‌ ನಿರ್ಮಾಣದ 12 ಕೋ. ರೂ. ಮೊತ್ತದ ಯೋಜನೆಗೆ ಕೂಡ ಸಚಿವ ಸಂಪುಟದ ಆಡಳಿ ತಾತ್ಮಕ ಅನುಮೋದನೆ ದೊರೆತಿದೆ ಎಂದು ಸಚಿವ ಕೋಟ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಎಡಪದವು-ಕುಪ್ಪೆಪದವು-ಅರಾ- ಸೊರ್‍ನಾಡು ಮಾರ್ಗದಲ್ಲಿ 7.40 ಕಿ.ಮೀ.ಗಳಷ್ಟು ಸೇತುವೆ ನಿರ್ಮಾಣದ 13.90 ಕೋ. ರೂ. ಮೊತ್ತದ ಯೋಜನೆಗೆ ಕೂಡ ಸಂಪುಟ ಒಪ್ಪಿಗೆ ನೀಡಿದೆ.

ಇ – ಆಸ್ಪತ್ರೆಗೆ ಸಚಿವ ಸಂಪುಟ ಅಸ್ತು
ಇನ್ನು ಮುಂದೆ ರಾಜ್ಯದ ಯಾವುದೇ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಹೋದ ವ್ಯಕ್ತಿಯ ಪೂರ್ಣ ಆರೋಗ್ಯ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಇದರಿಂದಾಗಿ ಇನ್ನೊಂದು ಆಸ್ಪತ್ರೆಗೆ ತೆರಳಿದಾಗ ಆನ್‌ಲೈನ್‌ ಮೂಲಕವೇ ಆ ವ್ಯಕ್ತಿಯ “ಆರೋಗ್ಯ ಚರಿತ್ರೆ’ ತಿಳಿದುಕೊಳ್ಳಲು ವೈದ್ಯರಿಗೆ ಸಹಾಯವಾಗುತ್ತದೆ. ಇದಕ್ಕೆ ಸಂಬಂಧಿಸಿದ ಇ- ಆಸ್ಪತ್ರೆ ಯೋಜನೆ ಜಾರಿಗೊಳಿಸುವ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ರಾಷ್ಟ್ರೀಯ ಹೆಲ್ತ್‌ ಮಿಷನ್‌ನಡಿ 50 ಸಮುದಾಯ ಆರೋಗ್ಯ ಕೇಂದ್ರಗಳು, 122 ತಾಲೂಕು ಆಸ್ಪತ್ರೆಗಳಲ್ಲಿ 56.79 ಕೋಟಿ ರೂ. ಮೊತ್ತದಲ್ಲಿ ಯೋಜನೆ ಜಾರಿಯಾಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ವಿಸ್ತರಣೆಯಾಗಲಿದೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.