ಭೌತಿಕ ತರಗತಿ ಮುಂದುವರಿಸಿ: ಹೊರಟ್ಟಿ ಆಗ್ರಹ
ಆನ್ಲೈನ್ ಎಲ್ಲರಿಗೂ ಸರಿಹೊಂದದು; ವಿದ್ಯಾಗಮ ನಿಷ್ಪ್ರಯೋಜಕ
Team Udayavani, Jan 16, 2022, 6:20 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬಗ್ಗೆ ಪೋಷಕರು ಹಾಗೂ ಮಕ್ಕಳಲ್ಲಿರುವ ಆತಂಕ-ಗೊಂದಲಗಳನ್ನು ಸರಕಾರ ದೂರ ಮಾಡಿ, ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಒಂದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗ್ರಹಿಸಿದ್ದಾರೆ.
ತಮ್ಮ ಸರಕಾರಿ ನಿವಾಸದಲ್ಲಿ ಶನಿವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಗಳ ವಿಚಾರದಲ್ಲಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಕೊಟ್ಟಿರುವುದು ಸರಿಯಲ್ಲ. ಒಂದು ಜಿಲ್ಲೆಯಲ್ಲಿ ಶಾಲೆ ನಡೆಸು ವುದು, ಮತ್ತೊಂದೆಡೆ ಮುಚ್ಚಿದರೆ ಗೊಂದಲವಾಗುತ್ತದೆ. ಆದ್ದರಿಂದ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಸರಕಾರ ತೀರ್ಮಾನ ತೆಗೆದು ಕೊಳ್ಳಬೇಕು ಎಂದರು.
ಮೂರನೇ ಅಲೆಯಲ್ಲಿ ಕೋವಿಡ್ ಸೋಂಕು ಹರಡುವುದು ಜಾಸ್ತಿ, ಆದರೆ, ಗಂಭೀರತೆ ಕಡಿಮೆ ಎಂದು ತಜ್ಞರು ಹೇಳಿದ್ದಾರೆ. ಆದ್ದರಿಂದ 1ರಿಂದ 5ನೇ ತರಗತಿಗಳನ್ನು ಬೇಕಿದ್ದರೆ ಮುಚ್ಚಲಿ. 6ನೇ ತರಗತಿಯಿಂದ ಶಾಲೆಗಳನ್ನು ನಡೆಸಲಿ. ಶಾಲೆಗಳನ್ನು ಮುಚ್ಚುವುದರಿಂದ ಕಲಿಕೆ ಮೇಲೆ ಪರಿಣಾಮ ಬೀಳುತ್ತದೆ ಎಂದರು.
ವಿದ್ಯಾಗಮ ನಿಷ್ಪ್ರಪ್ರಯೋಜಕ
ವಿದ್ಯಾಗಮ ಕಾರ್ಯಕ್ರಮದಿಂದ ಏನೂ ಪ್ರಯೋಜನವಿಲ್ಲ. ಗುಡಿ ಯೊಳಗೆ, ಮರದ ಕೆಳಗೆ ಕಲಿಸಬೇಕು ಎಂದರೆ ಹೇಗೆ? ಅದೇ ರೀತಿ ಆನ್ಲೈನ್ ತರಗತಿಗಳು ಎಲ್ಲ ಕಡೆ ಯಶಸ್ವಿ ಆಗುವುದಿಲ್ಲ. ಒಂದಿಷ್ಟು ಶ್ರೀಮಂತರ ಮತ್ತು ನಗರ ಪ್ರದೇಶದ ಮಕ್ಕಳು ಆನ್ಲೈನ್ ಮೂಲಕ ಶಿಕ್ಷಣ ಪಡೆಯಬಹುದು. ಗ್ರಾಮೀಣ ಭಾಗಕ್ಕೆ ಆನ್ಲೈನ್ ಶಿಕ್ಷಣ ನಡೆಯುವುದಿಲ್ಲ. ಇದರಿಂದ ಬಡ ಮಕ್ಕಳು ಶಿಕ್ಷಣದಲ್ಲಿ ಹಿಂದುಳಿಯುವ ಆತಂಕವಿದೆ ಎಂದು ಹೇಳಿದರು.
ಇದನ್ನೂ ಓದಿ:ರಮೇಶ ಜಾರಕಿಹೊಳಿ – ಆರೆಸ್ಸೆಸ್ ಮುಖಂಡ ಮಾತುಕತೆ
ವಿಧಾನಸೌಧದಲ್ಲಿ ಕೊಠಡಿ ಬೇಡುವ ಸ್ಥಿತಿ
ಶಾಸಕಾಂಗಕ್ಕಾಗಿ ಕಟ್ಟಲಾಗಿರುವ ವಿಧಾನಸೌಧದಲ್ಲಿ ಕಾರ್ಯಾಂಗ ಠಿಕಾಣಿ ಹೂಡಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸೌಧ ಇರುವುದೇ ಶಾಸಕಾಂಗಕ್ಕಾಗಿ. ಆದರೆ, ಅಲ್ಲಿ ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಬಂದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ವಿಧಾನಸೌಧ ಕಟ್ಟಿರುವುದೇ ಶಾಸಕಾಂಗಕ್ಕೆ. ವಿಧಾನಸೌಧದಲ್ಲಿ ಕೊಠಡಿ ಕೊಡಿ ಎಂದು ನಾವು ಆದೇಶಿಸಬೇಕು. ಆದರೆ, ಕೊಠಡಿ ಕೊಡಿ ಎಂದು ಕೇಳುವ ಪರಿಸ್ಥಿತಿ ಇದೆ. ನಾವು ಸಿಬಂದಿ ಮತ್ತು ಆಡಳಿತ ಸುಧಾರಣ(ಡಿಪಿಎಆರ್) ಇಲಾಖೆಯನ್ನು ಬೇಡುವ ಪರಿಸ್ಥಿತಿ ಇರುವುದು ಸರಿಯಲ್ಲ. ಚಿಕ್ಕ ಕೊಠಡಿಯಲ್ಲಿ 30 ಸಿಬಂದಿ ಕುಳಿತುಕೊಳ್ಳಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಅದು ಕಷ್ಟವಾಗುತ್ತದೆ. ಕೊಠಡಿ ಕೊಡುವಂತೆ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಏನು ಮಾಡುತ್ತಾರೆ ನೋಡೋಣ. ಸ್ಪೀಕರ್ ಕೂಡ ಕೊಠಡಿ ಕೇಳಿದ್ದಾರೆ. ಶಾಸಕಾಂಗ ಹಾಗೂ ಕಾರ್ಯಾಂಗವನ್ನು ಪ್ರತ್ಯೇಕಿಸಬೇಕು. ವಿಧಾನಸೌಧ ಇರುವುದು ಶಾಸಕಾಂಗಕ್ಕೆ ಮಾತ್ರ. ಕಾರ್ಯಾಂಗವು ಬಹುಮಹಡಿ ಕಟ್ಟಡಕ್ಕೆ (ಎಂಎಸ್ ಬಿಲ್ಡಿಂಗ್ಗೆ) ಸ್ಥಳಾಂತರವಾಗಲಿ. ನಾವು ಶಿಮ್ಲಾಗೆ ಪ್ರವಾಸ ಹೋಗಿದ್ದಾಗ ಅಲ್ಲಿ ಶಾಸಕಾಂಗ ಹಾಗೂ ಕಾರ್ಯಾಂಗ ಬೇರೆಯಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ