ಹಿಜಾಬ್‌ ಸಮವಸ್ತ್ರವಲ್ಲ; ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಹೇಳಿಕೆ


Team Udayavani, Feb 12, 2022, 7:45 AM IST

ಹಿಜಾಬ್‌ ಸಮವಸ್ತ್ರವಲ್ಲ; ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಹೇಳಿಕೆ

ತಿರುವನಂತಪುರ: “ಮೊದಲೆಲ್ಲ ಹೆಣ್ಣು ಮಕ್ಕಳನ್ನು ಭೂಮಿಯಡಿ ಹೂತಿಡುತ್ತಿದ್ದರು. ಈಗ ಅವರನ್ನು ಶಾಲು, ತ್ರಿವಳಿ ತಲಾಖ್‌ ಹೆಸರಲ್ಲಿ ತುಳಿಯಲಾಗುತ್ತಿದೆ’ ಎಂದು ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ.

ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್‌ ವಿವಾದದ ಕುರಿತು “ನ್ಯೂಸ್‌18′ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, “ಆಕ್ರಮಣಕಾರರಿಂದಾಗಿ ಉತ್ತರ ಭಾರತಕ್ಕೆ ಈ ಶಾಲು ಬಂದಿತು. ಆದರೆ ಈಗ ಅದು ಕಡ್ಡಾಯವಾಗಿ ಉಳಿದಿಲ್ಲ. ವಿದ್ಯಾರ್ಥಿಗಳು ಶಾಲೆಗೆ ಸೇರಿದ್ದಾರೆ ಎಂದ ಮೇಲೆ ಅಲ್ಲಿನ ಸಮವಸ್ತ್ರವನ್ನು ಕಡ್ಡಾಯವಾಗಿ ಪಾಲಿಸಬೇಕು. ಇಲ್ಲವಾದರೆ ಬೇರೆ ಶಾಲೆಗೆ ಸೇರಬೇಕು. ಹಿಂದಿನ ಸರಕಾರ ನಿಯಮ ಮೀರುವವರ ಮುಂದೆ ತಲೆ ಬಾಗುತ್ತಿತ್ತು. ಆದರೆ ಈಗಿನ ಸರಕಾರ ಹಾಗಿಲ್ಲ’ ಎಂದು ಅವರು ಹೇಳಿದ್ದಾರೆ.

“ಹಿಂದೆ ಮುಸ್ಲಿಂ ಪ್ರವಾದಿಯೊಬ್ಬರ ಮನೆಯ ಹೆಣ್ಣು ಮಗಳೇ ಹಿಜಾಬ್‌ ಧರಿಸುವುದಕ್ಕೆ ನಿರಾಕರಿಸಿದ್ದಳು. ನಾನು ಸುಂದರವಾಗಿದ್ದೇನೆ. ದೇವರು ನನ್ನಲ್ಲಿ ಸೌಂದರ್ಯ ತುಂಬಿದ್ದಾನೆ. ಅದನ್ನು ನಾನು ಬೇರೆಯವರಿಗೆ ತೋರಿಸಲೇಬೇಕೆಂದು ವಾದಿಸಿದ್ದಳು. ಇಸ್ಲಾಂನ ಮೊದಲ ತಲೆಮಾರಿನ ಹೆಣ್ಣು ಮಕ್ಕಳು ಇದ್ದಿದ್ದು ಹೀಗೆ…’ ಎಂದು ಇತಿಹಾಸವನ್ನೂ ನೆನಪಿಸಿದ್ದಾರೆ.

ಇದೇ ವೇಳೆ ಹಿಜಾಬ್‌ ನಿಷೇಧ ವಿರೋಧಿಸಿ ದಿಲ್ಲಿಯ ಕರ್ನಾಟಕ ಭವನದ ಎದುರು ಶುಕ್ರವಾರ ಎಸ್‌ಎಫ್ಐ ಸಂಘಟನೆ ಪ್ರತಿಭಟನೆ ನಡೆಸಿದೆ.

ವಾರಕ್ಕೆ ಒಂದು ದಿನ ಸಾಂಪ್ರದಾಯಿಕ ವಸ್ತ್ರ
ಹಿಜಾಬ್‌ ವಿವಾದದ ನಡುವೆಯೇ ಅರುಣಾಚಲ ಪ್ರದೇಶದಲ್ಲಿ ಖಾಸಗಿ ಶಾಲೆಗಳಿಗೆ ವಾರಕ್ಕೆ ಒಂದು ದಿನ ಅಂದರೆ ಪ್ರತೀ ಸೋಮವಾರ ಸಾಂಪ್ರದಾಯಿಕ ವಸ್ತ್ರವನ್ನು ಧರಿಸಲು ಅನುಮತಿ ನೀಡಲಾಗಿದೆ. ರಾಜ್ಯದ 180 ಶಾಲೆಗಳ ವಿದ್ಯಾರ್ಥಿಗಳಿಗೆ ವಾರಕ್ಕೆ ಒಮ್ಮೆ ಸಾಂಪ್ರದಾಯಿಕ ವಸ್ತ್ರ ಧರಿಸಲು ಅನುಮತಿ ನೀಡಲಾಗುವುದು. ಉಳಿದ ಎಲ್ಲ ದಿನಗಳು ಕಡ್ಡಾಯವಾಗಿ ಶಾಲಾ ಸಮವಸ್ತ್ರ ಧರಿಸಬೇಕು ಎಂದು ಖಾಸಗಿ ಶಾಲೆಗಳು, ಮಕ್ಕಳ ಕಲ್ಯಾಣ ಇಲಾಖೆ ಹೇಳಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ಬುಡಕಟ್ಟು ಮತ್ತು ಉಪ-ಬುಡಕಟ್ಟು  ವಿದ್ಯಾರ್ಥಿಗಳಿದ್ದು, ಅವರ ಸಾಂಪ್ರದಾಯಿಕ ವಸ್ತ್ರ ಧರಿಸಲು ಅವಕಾಶ ನೀಡಲಾಗಿದೆ.

ಎದೆಗಾರಿಕೆ ತೋರಿಸಬೇಕೆನ್ನುವುದಾದರೆ ಅಫ್ಘಾನಿಸ್ಥಾನದಲ್ಲಿ ಬುರ್ಖಾ ಹಾಕದೆಯೇ ತೋರಿಸಿ. ನಿಮ್ಮನ್ನು ನೀವು ಬಂಧಿಸಿಕೊಳ್ಳುವ ಬದಲು ಸ್ವತಂತ್ರವಾಗಿರಲು ಕಲಿಯಿರಿ.
-ಕಂಗನಾ ರಣಾವತ್‌, ನಟಿ

ನನ್ನ ಮಾತಲ್ಲಿ ತಪ್ಪಿದ್ದರೆ ಸರಿಮಾಡಿ. ನನಗೆ ಗೊತ್ತಿರುವಂತೆ ಅಫ್ಘಾನಿಸ್ಥಾನ ದೇವಪ್ರಭುತ್ವ ರಾಷ್ಟ್ರ. ಆದರೆ ಭಾರತವು ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯ.
-ಶಬಾನಾ ಅಜ್ಮಿ, ಹಿರಿಯ ನಟಿ

 

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.